Homeಮುಖಪುಟಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ಅಯೋಧ್ಯೆ ಕುರಿತು ಪೋಸ್ಟ್‌: ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ ರಮ್ಯಾ ದಿವ್ಯಸ್ಪಂದನ!

ರಾಜಕೀಯಕ್ಕೆ ಬಲಿಪಶುವಾಗದಿರಿ. ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಅದು ಸೃಷ್ಟಿಸುವ ಅಸ್ಮಿತೆಯ (ಗುರುತಿನ) ಬಿಕ್ಕಟ್ಟಿಗೆ ಈಡಾಗದಿರಿ. ಪ್ರಶ್ನಿಸಿ, ಅರ್ಥೈಸಿಕೊಳ್ಳಿ (ಕಂಡುಕೊಳ್ಳಿ) ಮತ್ತು ಅದರಿಂದ ಮೇಲೆದ್ದು ನಿಲ್ಲಿ

- Advertisement -
- Advertisement -

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಕುರಿತು ಹಲವು ರೀತಿಯ ಅಭಿಪ್ರಾಯಗಳು ವ್ಯಕ್ತವಾಗಿವೆ. ಪ್ರಿಯಾಂಕ ಗಾಂಧಿ, ಕಮಲ್‌ನಾಥ್‌ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಮಂದಿರ ನಿರ್ಮಾಣಕ್ಕೆ ಶುಭಹಾರೈಸಿರುವುದು ಟೀಕೆಗೆ ಗುರಿಯಾಗಿದೆ. ಇಂತಹ ಸಂದರ್ಭದಲ್ಲಿ ಚಿತ್ರನಟಿ, ಮಾಜಿ ಸಂಸದೆ ರಮ್ಯಾ ದಿವ್ಯಸ್ಪಂದನ ಈ ಕುರಿತು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್‌ ತೀವ್ರ ಚರ್ಚೆಗೆ ಒಳಗಾಗಿದೆ.

ಮಂದಿರ, ಮಸೀದಿ ನಿರ್ಮಾಣದ ವಿಚಾರದಲ್ಲಿ ರಮ್ಯಾರವರ ನಿಲುವನ್ನು ಬಹಳಷ್ಟು ಜನ ಸ್ವಾಗತಿಸಿದ್ದಾರೆ. ರಮ್ಯಾರವರಷ್ಟು ಸೂಕ್ಷ್ಮವಾಗಿ ಯೋಚಿಸುವ ಮನಸ್ಥಿತಿ ಎಲ್ಲಾ ರಾಜಕಾರಣಿಗಳಿಗೂ ಬರಲಿ ಎಂದು ಆಶಿಸಿದ್ದಾರೆ. ಇನ್ನು ಕೆಲವರು ಅವರ ನಿಲುವನ್ನು ವಿರೋಧಿಸಿದ್ದಾರೆ. ಮತ್ತಷ್ಟು ಜನ ಕನ್ನಡದಲ್ಲಿ ಪೋಸ್ಟ್‌ ಮಾಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ರಮ್ಯಾ ಹೇಳಿದ್ದೇನು? ಇಲ್ಲಿದೆ ನೋಡಿ.

“ರಾಮಮಂದಿರ ಕಟ್ಟಲಾಗುತ್ತಿರುವುದರಿಂದ ಹಿಂದೂಗಳಿಗೆ ಸಂತಸವಾಗಿದೆ ಎಂದು ನನಗೆ ಸಂತಸ. ಮಸೀದಿ ಕಟ್ಟಲಾಗುವುದು ಎಂದು ಮುಸ್ಲಿಮರಿಗೆ ಸಂತಸವಾದಾಗಲೂ ನನಗೂ ಸಂತಸ. ಸಂತಸದಿಂದಿರಲು ಅಥವಾ ದೇವರನ್ನು ತಿಳಿದುಕೊಳ್ಳಲು ಮಂದಿರ, ಮಸೀದಿಗಳು ಬೇಕಾಗಿಲ್ಲವೆಂದು ಅವರಿಬ್ಬರೂ ತಿಳಿದುಕೊಂಡರೆ ನನಗೆ ಅತ್ಯಂತ ಹೆಚ್ಚು ಸಂತಸ. ಸಂತಸವು ಒಗ್ಗಟ್ಟು, ಏಕತೆ, ಜೊತೆಜೊತೆಗೆ ಬದುಕುವುದರಲ್ಲಿದೆ. ಬಾಹ್ಯವಾದುದನ್ನು ತಿರಸ್ಕರಿಸಿ. ನಿಮ್ಮೊಳಗೆ ಇಣುಕಿ ನೋಡಿ. ಅಲ್ಲಿ ನಿಮ್ಮ ನಿಜವಾದ ದೇವರಿರುತ್ತಾನೆ ಮತ್ತು ನಿಜವಾದ ನೀವಿರುತ್ತೀರಿ.” ಎಂದು ರಮ್ಯಾ ಬರೆದಿದ್ದಾರೆ.

Don't be a victim to politics. Don't succumb to the identity crisis it creates for power and control. Question, look through it & rise above.

Posted by Divya Spandana/Ramya on Thursday, August 6, 2020

ಜೊತೆಗೆ “ರಾಜಕೀಯಕ್ಕೆ ಬಲಿಪಶುವಾಗದಿರಿ. ಅಧಿಕಾರ ಮತ್ತು ನಿಯಂತ್ರಣಕ್ಕಾಗಿ ಅದು ಸೃಷ್ಟಿಸುವ ಅಸ್ಮಿತೆಯ (ಗುರುತಿನ) ಬಿಕ್ಕಟ್ಟಿಗೆ ಈಡಾಗದಿರಿ. ಪ್ರಶ್ನಿಸಿ, ಅರ್ಥೈಸಿಕೊಳ್ಳಿ (ಕಂಡುಕೊಳ್ಳಿ) ಮತ್ತು ಅದರಿಂದ ಮೇಲೆದ್ದು ನಿಲ್ಲಿ (ಅದನ್ನು ಮೆಟ್ಟಿನಿಲ್ಲಿ.) ಎಂದು ರಮ್ಯಾ ದಿವ್ಯಸ್ಪಂದನ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...