Homeಮುಖಪುಟಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಮಸೀದಿ ಉದ್ಘಾಟನೆಗೆ ಹೋಗುವುದಿಲ್ಲ: ಯುಪಿ ಸಿಎಂ ಯೋಗಿ ಆದಿತ್ಯನಾಥ್

ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ ಎಂದ ಆದಿತ್ಯನಾಥ್

- Advertisement -
- Advertisement -

ಧ್ವಂಸವಾಗಿರುವ ಬಾಬರಿ ಮಸೀದಿಯ ಬದಲಿಗೆ ಅಯೋಧ್ಯೆಯಲ್ಲಿ ನಿರ್ಮಿಸಲಿರುವ ಮಸೀದಿಯ ಉದ್ಘಾಟನೆಗೆ ತಾನು ಹೋಗುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಅವರ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಸಮಾಜವಾದಿ ಪಕ್ಷ, ಅವರು ಕ್ಷಮೆ ಯಾಚಿಸುವಂತೆ ಆಗ್ರಹಿಸಿದೆ.

ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆ ನಂತರ ದೂರದರ್ಶನದಲ್ಲಿ ಮಾತನಾಡಿದ ಆದಿತ್ಯನಾಥ್ “ಯೋಗಿಯಾಗಿ ಮತ್ತು ಹಿಂದೂ ಆಗಿ ಮಸೀದಿಯ ಉದ್ಘಾಟನೆಗೆ ಹೋಗಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಎಸ್ಪಿ, ಅವರು ರಾಜ್ಯದ ಜನರ ಬಳಿ ಕ್ಷಮೆಯಾಚಿಸಬೇಕು ಹೇಳಿದೆ. ಆದರೆ ಉತ್ತರ ಪ್ರದೇಶದ ಕಾಂಗ್ರೆಸ್ ವಕ್ತಾರ ಮಸೀದಿಯ ಬಗ್ಗೆ ಮುಖ್ಯಮಂತ್ರಿಯ ಟೀಕೆಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ನೀವು ನನ್ನನ್ನು ಮುಖ್ಯಮಂತ್ರಿಯಾಗಿ ಕೇಳಿದರೆ, ನನಗೆ ಯಾವುದೇ ನಂಬಿಕೆ, ಧರ್ಮ ಅಥವಾ ಸಮುದಾಯದೊಂದಿಗೆ ಯಾವುದೇ ಸಮಸ್ಯೆ ಇಲ್ಲ. ನೀವು ನನ್ನನ್ನು ಯೋಗಿಯೆಂದು ಕೇಳಿದರೆ, ನಾನು ಖಂಡಿತವಾಗಿಯೂ ಹೋಗುವುದಿಲ್ಲ. ಏಕೆಂದರೆ ಹಿಂದೂ ಆಗಿ ನನ್ನ ’ಉಪಾಸನ ವಿಧಿ’ (ಪೂಜಾ ವಿಧಾನ) ವ್ಯಕ್ತಪಡಿಸಲು ಮತ್ತು ಅದಕ್ಕೆ ತಕ್ಕಂತೆ ನಡೆದುಕೊಳ್ಳುವ ಹಕ್ಕು ನನಗಿದೆ” ಎಂದು ಆದಿತ್ಯನಾಥ್ ಹೇಳಿದ್ದರು.

“ನಾನು ವಾದಿ ಅಥವಾ ಪ್ರತಿವಾದಿ ಅಲ್ಲ. ಅದಕ್ಕಾಗಿಯೇ ನನ್ನನ್ನು ಆಹ್ವಾನಿಸಿದರೂ ನಾನು ಹೋಗುವುದಿಲ್ಲ. ಅಂತಹ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ಅವರು ನನ್ನನ್ನು ಆಹ್ವಾನಿಸಿದ ದಿನ, ಅನೇಕರ ಜಾತ್ಯತೀತತೆಯು ಅಪಾಯದಲ್ಲಿರುತ್ತದೆ. ಅದಕ್ಕಾಗಿಯೇ ಅವರ ಜಾತ್ಯತೀತತೆಯು ಅಪಾಯದಲ್ಲಿರಬಾರದು ಎಂದು ನಾನು ಬಯಸುತ್ತೇನೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರಿ ಯೋಜನೆಯಿಂದ ಪ್ರತಿಯೊಬ್ಬರೂ ಪ್ರಯೋಜನ ಪಡೆಯುವಂತೆ ಖಚಿತಪಡಿಸಿಕೊಳ್ಳಲು ನಾನು ಮೌನವಾಗಿ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಅಯೋಧ್ಯೆ ವಿವಾದದ ಬಗ್ಗೆ ಕಾಂಗ್ರೆಸ್ ಎಂದಿಗೂ ಪರಿಹಾರವನ್ನು ಬಯಸಿರಲಿಲ್ಲ. “ತಮ್ಮ ರಾಜಕೀಯ ಲಾಭಕ್ಕಾಗಿ ವಿವಾದ ಮುಂದುವರಿಯಬೇಕೆಂದು ಅವರು ಬಯಸಿದ್ದರು. ತಲೆಯ ಮೇಲೆ ಟೋಪಿ ಹಾಕುವುದರಿಂದ, ಉಪವಾಸ-ಇಫ್ತಾರ್‌ಗೆ ಹಾಜರಾಗುವುದು ಜಾತ್ಯತೀತತೆಯಲ್ಲ. ಇದು ನಾಟಕ ಎಂದು ಜನರಿಗೆ ತಿಳಿದಿದೆ. ಜನರಿಗೆ ವಾಸ್ತವ ತಿಳಿದಿದೆ” ಎಂದು ಸಿಎಂ ಹೇಳಿದರು.

ಎಸ್ಪಿ ವಕ್ತಾರ ಪವನ್ ಪಾಂಡೆ ಆದಿತ್ಯನಾಥ್ ಅವರ ಹೇಳಿಕೆಗಳನ್ನು ಟೀಕಿಸಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಮಾಡಿದ ಪ್ರಮಾಣವಚನವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

“ಅವರು ಇಡೀ ರಾಜ್ಯದ ಸಿಎಂ. ಕೇವಲ ಹಿಂದೂ ಸಮುದಾಯದವರು ಮಾತ್ರವಲ್ಲ. ರಾಜ್ಯದಲ್ಲಿ ಹಿಂದೂ ಮತ್ತು ಮುಸ್ಲಿಮರ ಜನಸಂಖ್ಯೆ ಏನೇ ಇರಲಿ, ಅವರು ಎಲ್ಲರ ಸಿಎಂ. ಸಿಎಂ ಅವರ ಈ ಮಾತಿಗೆ ಘನತೆ ಇಲ್ಲ. ಇದಕ್ಕಾಗಿ ಅವರು ಜನರಿಂದ ಕ್ಷಮೆಯಾಚಿಸಬೇಕು” ಎಂದು ಪಾಂಡೆ ಹೇಳಿದರು.

ಉತ್ತರ ಪ್ರದೇಶ ಕಾಂಗ್ರೆಸ್ ಮಾಧ್ಯಮ ವಕ್ತಾರ ಲಾಲನ್ ಕುಮಾರ್, “ಅವರ ಮಸೀದಿ ಹೇಳಿಕೆಯ ಬಗ್ಗೆ ನಮಗೆ ಯಾವುದೇ ಅಭಿಪ್ರಾಯಗಳಿಲ್ಲ.” ಆದರೆ ರಾಮ ಜನ್ಮಭೂಮಿ-ಬಾಬರಿ ಮಸೀದಿಯ ಬೀಗಗಳನ್ನು ತೆರೆದ ಗೌರವ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಉಲ್ಲೇಖಿಸಿದ ಕಾಂಗ್ರೆಸ್ ವಕ್ತಾರ, “ಅವರು ನಕಲಿ ಹಿಂದುತ್ವದ ರಾಜಕೀಯವನ್ನು ಮಾಡುತ್ತಾರೆ. ಕಾಂಗ್ರೆಸ್ ಯಾವಾಗಲೂ ಜನರ ಹಿತದೃಷ್ಟಿಯಿಂದ ಮಾತನಾಡುತ್ತದೆ. ರಾಮ ಪ್ರತಿಯೊಬ್ಬರದ್ದು ಆಗಿದ್ದಾನೆ, ಆದರೆ ರಾಮ ಅವರದು ಮಾತ್ರ ಎಂದು ಬಿಜೆಪಿ ತೋರಿಸಲು ಬಯಸಿದೆ” ಎಂದು ಅವರು ಹೇಳಿದ್ದಾರೆ.


ಓದಿ: ಸಿಜೆಐ ಅಂದ್ರೆ ಸುಪ್ರೀಂ ಕೋರ್ಟ್ ಅಲ್ಲ: ನ್ಯಾಯಾಧೀಶರಿಗಿಂತ ನ್ಯಾಯಾಲಯ ದೊಡ್ಡದು – ಪ್ರಶಾಂತ್ ಭೂಷಣ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...