Homeಕರ್ನಾಟಕಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ಸಚಿವರ ಮಾತಿಗೆ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದು, ಸಚಿವರು ಕ್ಷಮೆ ಯಾಚಿಸಬೇಕು ಎಂದು ಘೋಷಣೆ ಕೂಗಿದ್ದಾರೆ.

- Advertisement -
- Advertisement -

ಮನೆಗಳ ಹಂಚಿಕೆಯ ವಿಷಯದ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ್ ನಡುವೆ ಮಾತಿನ ಜಟಾಪಟಿಗೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆ ವೇದಿಕೆಯಾಯಿತು.

ಇಂದು ನಡೆದ ಕೆಡಿಪಿ ಸಭೆಯಲ್ಲಿ ಕುಣಿಗಲ್ ಕ್ಷೇತ್ರದ ಶಾಸಕ ಡಾ. ರಂಗನಾಥ್ ರೈತರಿಗೆ ಮನೆಗಳು ಹಂಚಿಕೆಯಾಗಿವೆ. ನಮಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಕುಣಿಗಲ್ ಕ್ಷೇತ್ರಕ್ಕೆ ಆರು ತಿಂಗಲಿಂದಲೂ ಹಣ ಬಿಡುಗಡೆಯಾಗಿಲ್ಲ. ವಿಳಂಬ ಮಾಡುತ್ತಿದ್ದೀರಿ ಎಂದು ಸಚಿವರಿಗೆ ಕೇಳಿದರು.

ಇದರಿಂದ ಕೆರಳಿದ ಸಚಿವ ಮಾಧುಸ್ವಾಮಿ ಅವರು ಕುಣಿಗಲ್ ಕ್ಷೇತ್ರದಲ್ಲಿ ಫ್ರಾಡ್ ನಡೆದಿದೆ. 38 ಮನೆಗಳಿಗೆ ಎರಡು ಬಾರಿ ಬಿಲ್ ಮಾಡಲಾಗಿದೆ. ಹಾಗಾಗಿ ನೀವು ಫ್ರಾಢ್ ಎಂದು ಮಾತಿನ ಭರದಲ್ಲಿ ಕೂಗಾಡಿದರು ಎನ್ನಲಾಗಿದೆ.

ಸಚಿವರ ಮಾತಿಗೆ ಜೆಡಿಎಸ್ ಜಿಲ್ಲಾ ಪಂಚಾಯತ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಸಚಿವರು ಕ್ಷಮೆ ಯಾಚಿಸಬೇಕು ಎಂದು ಘೋಷಣೆ ಕೂಗಿದರು. ಇದರಿಂದ ಸಭೆಯಲ್ಲಿ ಕೋಲಾಹಲ ಉಂಟಾಯಿತು.

 

ಈ ಸಂದರ್ಭದಲ್ಲಿ ಸಮಾಧಾನದಿಂದಲೇ ಮಾತನಾಡಿದ ಶಾಸಕ ಡಾ.ರಂಗನಾಥ್, ನನ್ನ ಕ್ಷೇತ್ರದಲ್ಲಿ 38 ಮನೆಗಳಿಗೆ ಎರಡು ಬಿಲ್ ಆಗಿದ್ದರೆ ಅದಕ್ಕೆ ಪಿಡಿಓ, ಇಒ ಹೊಣೆಗಾರರು. ಅಲ್ಲಿ ಮೋಸವಾಗಿದ್ದರೆ ಕ್ರಮ ತೆಗೆದುಕೊಳ್ಳಿ. ಅದನ್ನೇ ನೆಪ ಮಾಡಿಕೊಂಡು ನನ್ನನ್ನೇ ಫ್ರಾಡ್ ಎನ್ನುವುದು ಸರಿಯಲ್ಲ ಎಂದು ಸಚಿವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು.


ಓದಿ: ಹಿರಿಯ ರೈತ ಹೋರಾಟಗಾರರನ್ನು ಅವಮಾನಿಸಿದ ಸಚಿವ ಮಾಧುಸ್ವಾಮಿ ನಡೆಗೆ ತೀವ್ರ ಆಕ್ರೋಶ


ಕೇವಲ 38 ಮನೆಗಳಲ್ಲಿ ಅಕ್ರಮವಾಗಿದೆ ಎಂದು ಹಣ ಹಂಚಿಕೆ ಮಾಡದೇ ಇರುವುದು ಸರಿಯಲ್ಲ. ಬಡವರಿಗೆ ಮನೆಗಳು ಮಂಜೂರಾಗಿವೆ. ಹಣ ಬಿಡುಗಡೆ ಮಾಡಿ ಬಡ ರೈತರು ನೆಮ್ಮದಿಯಿಂದ ಜೀವನ ನಡೆಸಲು ಅನುವು ಮಾಡಿಕೊಡಿ. ದುಡ್ಡಿದೆ ಅಂದ್ರೆ ಬಿಡುಗಡೆ ಮಾಡಿ. ಇಲ್ಲಾಂದ್ರೆ ಇಲ್ಲವೆಂದು ಹೇಳಿ ಎಂದು ಸಚಿವರಿಗೆ ತಿಳಿಸಿದರು.

ಸಚಿವ ಮಾಧುಸ್ವಾಮಿ ಮಾತುಗಳಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಸಾರ್ವಜನಿಕ ಸಭೆಯಲ್ಲಿ ಮಾತನಾಡುವಾಗ ರಾಜಕೀಯ ಭಾಷಣದಂತೆ ಮಾತನಾಡಿರುವುದು ಅವರ ಬೇಜವಾಬ್ದಾರಿತನವನ್ನು ತೋರಿಸುತ್ತದೆ ಎಂದು ಜೆಡಿಎಸ್ ಜಿಲ್ಲಾ ಪಂಚಾಯಿತಿ ಸದಸ್ಯರು ಕಿಡಿಕಾರಿದ್ದಾರೆ.

ಈ ಸಂಬಂಧ ಶಾಸಕ ಡಾ.ರಂಗನಾಥ್ ನಾನುಗೌರಿ.ಕಾಂ ಮಾತನಾಡಿ “ಸಚಿವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎಂದು ತಿಳಿಯದು. ಹಣ ಬಿಡುಗಡೆ ಮಾಡುವ ಬಗ್ಗೆ ಸಚಿವರಿಂದ ಸೂಕ್ತ  ಉತ್ತರ ಬರುತ್ತಿಲ್ಲ. ಇದು ಮೂರನೇ ಬಾರಿ ಹೀಗೆ ಮಾಡುತ್ತಿರುವುದು. ಸರ್ಕಾರದ ಬಳಿ ಹಣ ಇಲ್ಲವೆಂದರೆ ಸ್ಪಷ್ಟನೆ ನೀಡಲಿ ಅದು ಬಿಟ್ಟು ಹೀಗೆಲ್ಲಾ ಮಾಡುವುದರಿ ಸರಿಯಾದ ಕ್ರಮವಲ್ಲ. ದೇವರು ಅವರಿಗೆ ಯಾವಾಗ ಬುದ್ದಿ ಕೊಡುತ್ತಾನೋ ಗೊತ್ತಿಲ್ಲ. ಆದರೂ ನನಗೆ ಫೋನ್ ಮಾಡಿ ಕ್ಷಮೆಯಾಚಿಸಿದ್ದಾರೆ” ಎಂದು ಹೇಳಿದ್ದಾರೆ.


ಓದಿ: ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...