Homeಮುಖಪುಟಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

ಆರ್‌ಟಿಐ ಕಾರ್ಯಕರ್ತನ ಮೇಲಿನ ದ್ವೇಷಕ್ಕೆ ಮಗನ ಬಂಧನ: ಅಪ್ರಾಪ್ತ ಬಾಲಕನನ್ನು ವಯಸ್ಕನೆಂದ ಪೊಲೀಸರು!

'ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?' ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ. 

- Advertisement -
- Advertisement -

ಬಿಹಾರದ ಆರ್‌ಟಿಐ ಕಾರ್ಯಕರ್ತರೊಬ್ಬರ 14 ವರ್ಷದ ಅಪ್ರಾಪ್ತ ವಯಸ್ಸಿನ ಮಗನನ್ನು ಪೊಲೀಸರು ಬಂಧಿಸಿ ಜೈಲಿನಲ್ಲಿಟ್ಟಿದ್ದಾರೆ. ಆತನನ್ನು ವಯಸ್ಕನೆಂದು ನಮೂದಿಸಿರುವ ಅವರು ಆತನೊಂದಿಗೆ ಇತರ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣ ದಾಖಲಿಸಿ 5 ತಿಂಗಳಿನಿಂದ ಬಕ್ಸಾರ್ ಜೈಲಿನಲ್ಲಿಟ್ಟಿದ್ದಾರೆ.

ಇತ್ತ ಆತನ ತಂದೆ ಆರ್‌ಟಿಐ ಕಾರ್ಯಕರ್ತನಾಗಿದ್ದು, ತನ್ನ ಮಗ ಅಪ್ರಾಪ್ತ ವಯಸ್ಕ, ದಯವಿಟ್ಟು ಬಿಡುಗಡೆ ಮಾಡಿ ಎಂದು ಕಛೇರಿಯಿಂದ ಕಛೇರಿಗೆ ಅಲೆಯುತ್ತಿದ್ದಾರೆ. ಈ ಕುರಿತು ಲಾಕ್ ಡೌನ್ ಗೂ ಮೊದಲು ರಾಜ್ಯ ಡಿಜಿಪಿಗೆ ದೂರು ನೀಡಿದ ಆರ್‌ಟಿಐ ಕಾರ್ಯಕರ್ತ ‘ಫೆಬ್ರವರಿ 29 ರಂದು ಹತ್ತನೇ ತರಗತಿಯ ಪರೀಕ್ಷೆಗೆ ಹಾಜರಾಗಿ ವಾಪಸ್ ಬರುವಾಗ, ತನ್ನ 14 ವರ್ಷದ ಮಗನನ್ನು ಇಬ್ಬರು ವ್ಯಕ್ತಿಗಳೊಂದಿಗೆ ಬಂಧಿಸಿದ್ದಾರೆ ಎಂದು ದೂರಿದ್ದಾರೆ.

ಬಂಧನಕ್ಕೆ ಮುಂಚೆ ಬರೆದ ಪರೀಕ್ಷೆಯ ಐದು ಪತ್ರಿಕೆಗಳಲ್ಲಿ ತನ್ನ ಮಗ ಒಟ್ಟಾರೆ ಶೇಕಡಾ 83 ರಷ್ಟು ಅಂಕಗಳನ್ನು ಗಳಿಸಿದ್ದಾನೆ. ಇನ್ನೂ ಒಂದು ಪತ್ರಿಕೆ ಬಾಕಿಯಿದೆ. ಆತನ ಶಾಲಾ ದಾಖಲೆಗಳ ಪ್ರಕಾರ ಅವನು 2006 ರ ಏಪ್ರಿಲ್‌ನಲ್ಲಿ ಜನಿಸಿದ್ದಾನೆ. ನನ್ನ ಮೇಲಿನ ದ್ವೇಷಕ್ಕಾಗಿ ಪೊಲೀಸರು ಕೇವಲ 14 ವರ್ಷದ ನನ್ನ ಮಗನನ್ನು ಬಂಧಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರು, ಆ ಯುವಕನಿಂದ ದೇಶೀ ನಿರ್ಮಿತ ಪಿಸ್ತೂಲ್ ಮತ್ತು ಇತರೆ ಇಬ್ಬರಿಂದ ಲೈವ್ ಕಾರ್ಟ್ರಿಡ್ಜ್ ಅನ್ನು ವಶಪಡಿಸಿಕೊಂಡಿದ್ದೇವೆ, ಹಾಗಾಗಿ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ. ಇತರ ಇಬ್ಬರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದ್ದರೂ, ಆರ್‌ಟಿಐ ಕಾರ್ಯಕರ್ತನ ಮಗ ಇನ್ನೂ ಜೈಲಿನಲ್ಲಿದ್ದಾನೆ.

ಆರ್‌ಟಿಐ ಕಾರ್ಯಕರ್ತ, ಸ್ಥಳೀಯವಾಗಿ ನಡೆಯುವ ಭ್ರಷ್ಟಾಚಾರದ ವಿರುದ್ಧ ಪ್ರಬಲ ದನಿಯಾಗಿದ್ದರು. ಬಿಹಾರ ಸರ್ಕಾರದ ಹಲವು ಯೋಜನೆಗಳಲ್ಲಿನ ಹಗರಣಗಳನ್ನು ಅವರು ಬಯಲಿಗೆಳೆದಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಬಿಹಾರ ಸರ್ಕಾರದ ಪ್ರಮುಖ ಯೋಜನೆ, ಸಾತ್ ನಿಸ್ಚೆ (ಗ್ರಾಮ ರಸ್ತೆಗಳು, ನೈರ್ಮಲ್ಯ ಮತ್ತು ಕುಡಿಯುವ ನೀರು), MNREGA ಮತ್ತು ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ (ಪಿಎಸಿಎಸ್) ಭತ್ತದ ಖರೀದಿಗಳಲ್ಲಿನ ಅಕ್ರಮಗಳನ್ನು ಪತ್ತೆಹಚ್ಚಲು ಹಲವಾರು ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.

‘ನಾನು ಭತ್ತದ ಖರೀದಿ ವಿವರಗಳನ್ನು ಆರ್‌ಟಿಐ ಮೂಲಕ ಪ್ರಶ್ನಿಸಿದ್ದರಿಂದ ನನ್ನ ಮಗನನ್ನು ಈ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. ಪೊಲೀಸರು ನನ್ನ ಅಪ್ರಾಪ್ತ ವಯಸ್ಸಿನ ಮಗನನ್ನು ವಯಸ್ಕರೆಂದು ಹೇಗೆ ಘೋಷಿಸಬಹುದು? ಪರೀಕ್ಷೆ ಬರೆಯಲು ಹೋದ ಆತ ಪಿಸ್ತೂಲ್‌ನೊಂದಿಗೆ ವಾಪಸ್‌ ಬಂದನು ಎಂಬ ಈ ಪೊಲೀಸ್ ಕಥೆಯನ್ನು ಯಾರಾದರೂ ನಂಬಬಹುದೇ?’ ಎಂದು ಆರ್‌ಟಿಐ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಈ ಹಿಂದೆ ನನ್ನನ್ನು ತಡೆಯಲು ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರು ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ನನ್ನ ಮೇಲೆ ಸುಳ್ಳು ದೂರು ದಾಖಲಿಸಿದ್ದರು. ಆದರೆ ವಿಚಾರಣೆಯ ನಂತರ ನನಗೆ ಕ್ಲೀನ್ ಚಿಟ್ ನೀಡಲಾಯಿತು. ಈಗ ಅವರು ನನ್ನ ಮುಗ್ಧ ಮಗನಿಗೆ ಬಲೆ ಬೀಸಿ, ಪಿತೂರಿ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ನಿರಂತರವಾಗಿ ಲಾಕ್ ಡೌನ್ ಮತ್ತು ನ್ಯಾಯಾಲಯವನ್ನು ಮುಚ್ಚಿರುವುದರಿಂದ ವಿಚಾರಣೆ ವಿಳಂಬವಾಗುತ್ತಿದೆ. ‘ಹುಡುಗನನ್ನು ವಯಸ್ಕನೆಂದು ಘೋಷಿಸಿರುವ ತಪ್ಪನ್ನು ಸರಿಪಡಿಸಲು ಸ್ಥಳೀಯ ಪೊಲೀಸರು ಸಿದ್ದರಿಲ್ಲ. ನಾವು ಬಾಲಾಪರಾಧಿ ನ್ಯಾಯ ಮಂಡಳಿಯನ್ನು ಸಂಪರ್ಕಿಸಿದ್ದೇವೆ ಮತ್ತು ಅವರಿಗೆ ಸರಿಯಾದ ಜನ್ಮ ದಿನಾಂಕವನ್ನು ಹೊಂದಿರುವ ಶಾಲಾ ದಾಖಲಾತಿ ಪತ್ರವನ್ನು ಸಲ್ಲಿಸಿದ್ದೇವೆ’ ಎಂದು ವಕೀಲ ಲಾಲನ್ ಪಾಂಡೆ ತಿಳಿಸಿದ್ದಾರೆ.

ಹತ್ತನೇ ತರಗತಿಯ ವಿದ್ಯಾರ್ಥಿಯನ್ನು ವಯಸ್ಕನೆಂದು ಘೋಷಿಸಿ ಜೈಲಿಗೆ ಕಳುಹಿಸಿದ್ದು ಏಕೆ ಮತ್ತು ಹೇಗೆ ಎಂಬ ಬಗ್ಗೆ ಪೊಲೀಸರು ಯಾವುದೇ ವಿವರ ನೀಡಿಲ್ಲ. “ಇದರಲ್ಲಿ ನನ್ನ ಪಾತ್ರವಿಲ್ಲ. ನನಗೆ ಹೇಳಿದ್ದನ್ನು ನಾನು ಮಾಡಿದ್ದೇನೆ ಅಷ್ಠೇ” ಎಂದು ರಾಜ್‌ಪುರ ಪೊಲೀಸ್ ಠಾಣೆ ಎಎಸ್‌ಐ ಮಹೇಶ್ ಪ್ರಸಾದ್ ಸಿಂಗ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

‘ಈ ಪ್ರಕರಣದ ಕುರಿತ ಸಂಪೂರ್ಣ ವಿವರವನ್ನು ಸ್ಥಳೀಯ ಪೋಲಿಸ್ ಠಾಣೆಯಿಂದ ಪಡೆದುಕೊಂಡ ನಂತರ ಹುಡುಗನ ತಂದೆಯನ್ನು ಭೇಟಿಯಾಗಲಿದ್ದೇನೆ’ ಎಂದು ಬಕ್ಸರ್ ಎಸ್ಪಿ ಉಪೇಂದ್ರ ನಾಥ್ ವರ್ಮಾ ತಿಳಿಸಿದ್ದಾರೆ.


ಇದನ್ನೂ ಓದಿ: ಗುಜರಾತ್ ಆರ್‍ಟಿಐ ಕಾರ್ಯಕರ್ತನ ಕೊಲೆ: ಆರೋಪಿ ಮಾಜಿ ಬಿಜೆಪಿ ಎಂಪಿ ಅಪರಾಧಿಯೆಂದು ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬ್ರಶ್ಟಾಚಾರ ಬಯಲಿಗೆಳೆಯುವ ಆರ್. ಟಿ.ಐ. ಕಾರ್ಯಕರ್ತರ ಹೋರಾಟ ಕತ್ತಿಯ ಮೇಲಿನ ನಡಿಗೆಯಂತಾಗಿದೆ.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...