Homeಕರ್ನಾಟಕನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಇಷ್ಟದ ಸೈಕಲಿಂಗ್ ಲೇನ್ ಬೇಕೇ? ನಿಮ್ಮ ಐಡಿಯಾಗಳನ್ನು ಸರ್ಕಾರಕ್ಕೆ ಹೇಳಿ..!

ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸುವಲ್ಲಿ ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ.

- Advertisement -
- Advertisement -

ನೀವು ಸೈಕ್ಲಿಂಗ್ ಪ್ರಿಯರಾಗಿದ್ದು, ನಿಮ್ಮ ಮನಸ್ಸಿನಲ್ಲಿ ಸೈಕಲಿಂಗ್‌ ಮಾರ್ಗದ ಬಗ್ಗೆ ಐಡಿಯಾಗಳು ಇದ್ದರೆ ಅದನ್ನು ಸಾಕಾರಗೊಳಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಹೊರಟಿದೆ. ಈ ಪ್ರಕ್ರಿಯೆಯಲ್ಲಿ ಬೈಸಿಕಲ್ ಲೈನ್‌ಗಾಗಿ ಐಡಿಯಾಗಳನ್ನು ಜನರಿಂದಲೇ ಕ್ರೌಡ್‌ಸೋರ್ಸ್ ಆಗಿ ಪಡೆಯಲು DULT ಮುಂದಾಗಿದೆ.

ಕೇಂದ್ರ ಸರ್ಕಾರದ ಸೈಕಲ್ ಫಾರ್ ಚೇಂಜ್ ಅಭಿಯಾನದ ಭಾಗವಾಗಿ, ಈಗಾಗಲೆ ಬೆಂಗಳೂರಿನ ಹೊರ ವರ್ತುಲ ರಿಂಗ್ ರಸ್ತೆ (ಔಟರ್‌ ರಿಂಗ್‌ ರೋಡ್)ಯ ಸರ್ವಿಸ್ ರಸ್ತೆಯಲ್ಲಿ ಬೈಸಿಕಲ್ ಲೇನ್ ನಿರ್ಮಿಸಲು ನಗರ ಭೂ ಸಾರಿಗೆ ನಿರ್ದೇಶನಾಲಯ (DULT) ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದೆ.

“ನಾವು ಸೈಕ್ಲಿಂಗ್ ಲೇನ್‌ ನಿರ್ಮಿಸಲು ತಾತ್ಕಾಲಿಕವಾಗಿ ಒಆರ್‌ಆರ್‌ ಮತ್ತು ಓಲ್ಡ್ ಮದ್ರಾಸ್ ರಸ್ತೆಯನ್ನು ಕೈಗೆತ್ತಿಕೊಂಡಿದ್ದೇವೆ. ಸೈಕ್ಲಿಸ್ಟ್‌ಗಳು ವಿಭಿನ್ನ ಬೇಡಿಕೆಗಳನ್ನು ಹೊಂದಿರಬಹುದು ಮತ್ತು ಮುಖ್ಯ ರಸ್ತೆಗಳನ್ನು ಹೊರತುಪಡಿಸಿ ವಿಭಿನ್ನ ಮಾರ್ಗಗಳನ್ನು ಬಯಸುತ್ತಾರೆ. ಆದ್ದರಿಂದ ನಾವು ಅವರ ಅಭಿಪ್ರಾಯ ಮತ್ತು ಅವರು ಎದುರಿಸುತ್ತಿರುವ ಸವಾಲುಗಳನ್ನು ಅರ್ಥಮಾಡಿಕೊಳ್ಳಲು ಅವರಿಂದಲೇ ವಿಚಾರವನ್ನು ಪಡೆಯಲು ನಿರ್ಧರಿಸಿದ್ದೇವೆ” ಎಂದು DULT ನಿರ್ದೇಶಕಿ ವಿ. ಮಂಜುಳಾ ಹೇಳಿದ್ದಾರೆ.

ಸೈಕ್ಲಿಂಗ್ ಉತ್ಸಾಹಿಗಳು ಅವರು ಪ್ರಯಾಣಿಸುವ ನಿರ್ದಿಷ್ಟ ಮಾರ್ಗವನ್ನು DULT ವೆಬ್‌ಸೈಟ್‌ನಲ್ಲಿ ಜಿಪಿಎಸ್ ದೃಶ್ಯೀಕರಣ ಸಾಧನದಲ್ಲಿ ತಿಳಿಸಬಹುದು. Google ಫಾರ್ಮ್‌ ಮೂಲಕ ಬಳಕೆದಾರರು ಹೆಚ್ಚುವರಿ ಮಾಹಿತಿಯನ್ನು ಒದಗಿಸಬಹುದಾಗಿದೆ.

DULT ಅವರ ಆಹ್ವಾನಕ್ಕೆ ಪ್ರತಿಕ್ರಿಯಿಸುವವರು ತಮ್ಮ ಆದ್ಯತೆಗಳನ್ನು ORR ಅಥವಾ ಪೂರ್ವ ಬೆಂಗಳೂರು ರಸ್ತೆಗೆ ಸೀಮಿತವಾಗಿ ಅಭಿಪ್ರಾಯ ನೀಡಬೇಕಾಗಿಲ್ಲ. ಅವರು ಬೆಂಗಳೂರಿನ ಪೂರ್ತಿ ತಮಗೆ ಬೇಕಾದ ಸೈಕಲಿಂಗ್ ಲೇನ್‌ಗಳ ಬಗ್ಗೆ ಐಡಿಯಾಗಳನ್ನು ನೀಡಬಹುದು. ತಮ್ಮ ಅಭಿಪ್ರಾಯಗಳನ್ನು ನೀಡಲು ಆಗಸ್ಟ್ 14 ರವರೆಗೆ ಸಮಯವಿದೆ. ಭವಿಷ್ಯದ ಯೋಜನೆಗಳು ಸಾರ್ವಜನಿಕ ಬೇಡಿಕೆಯೊಂದಿಗೆ ಸಮನ್ವಯವಾಗಿವೆಯೇ ಎಂದು ಖಚಿತಪಡಿಸಿಕೊಳ್ಳಲು, ನಗರದಾದ್ಯಂತ ಸೈಕ್ಲಿಂಗ್ ಲೇನ್‌ಗಳ ಆದ್ಯತೆಗಳನ್ನು ಅರ್ಥಮಾಡಿಕೊಳ್ಳಲು ಇಲಾಖೆ ಈ ಕ್ರಮ ಕೈಗೊಂಡಿದೆ.

“ಇದು ವ್ಯಾಪಕವಾದ ನೆಟ್‌ವರ್ಕ್‌ಗಳನ್ನು ನಿರ್ಮಿಸುವ ಯೋಜನೆಗಳನ್ನು ಹೆಚ್ಚಿಸಲು ನಮಗೆ ಸಹಾಯ ಮಾಡುತ್ತದೆ. ಯಶಸ್ವಿ ಮಾದರಿಯಿಂದ ಸೈಕ್ಲಿಂಗ್ ಮಾಡಲು ಅನೇಕರನ್ನು ಪ್ರೋತ್ಸಾಹಿಸುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಮಂಜುಳಾರವರು ಹೇಳಿದ್ದಾರೆ.


ಓದಿ: ವಿದೇಶದಲ್ಲಿ ತೊಗಲುಗೊಂಬೆಯಾಟ ಪ್ರದರ್ಶಿಸಿ ಮೆಚ್ಚುಗೆ ಗಳಿಸಿದ ಕಿಳ್ಯೇಕ್ಯಾತರ ಭೀಮವ್ವ! 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...