Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...