Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...