Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಫ್ಯಾಕ್ಟ್‌ಚೆಕ್: ಭೂಮಿಪೂಜೆಯಂದು ಇಂಗ್ಲೆಂಡ್‌ ಪ್ರಧಾನಿ ರಾಮನ ವಿಗ್ರಹಕ್ಕೆ ಅಭಿಷೇಕ ಮಾಡಿದರೆ?

ಚುನಾವಣೆಗೂ ಮುಂಚೆ ಪ್ರಧಾನಿ ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

- Advertisement -
- Advertisement -

ಆಗಸ್ಟ್ 5 ರಂದು ಅಯೋಧ್ಯೆಯ ರಾಮ ಮಂದಿರದ “ಭೂಮಿ ಪೂಜೆ”ಯ ಹಿನ್ನಲೆಯಲ್ಲಿ ಇಂಗ್ಲೆಂಡ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಶ್ರೀರಾಮ ಅಭಿಷೇಕ ಮಾಡಿದ್ದಾಗಿ ಟ್ವೀಟ್‌ ಮಾಡಿದ್ದಾರೆ ಎಂಬ ಸಂದೇಶ ವೈರಲ್ ಆಗಿದೆ.

ವೈರಲ್ ಆದ ಟ್ವೀಟ್‌ನಲ್ಲಿ “ನಾನು ಭಾರತೀಯ ಸಂಸ್ಕೃತಿಯ ದೊಡ್ಡ ಅಭಿಮಾನಿಯಾಗಿದ್ದೇನೆ. ಹಾಗಾಗಿ ಆಗಸ್ಟ್ 5 ರಂದು ನನ್ನ ನಿವಾಸದಲ್ಲಿ ಗೃಹ ಸಚಿವರೊಂದಿಗೆ ಶ್ರೀ ರಾಮ ಅಭಿಷೇಕ ಮಾಡಿದೆ” ಎಂದು ಬರೆಯಲಾಗಿತ್ತು.

ಈ ವರದಿ ಬರೆಯುತ್ತಿರುವ ಹೊತ್ತಿಗೆ ಈ ಟ್ವೀಟ್ 14.5 ಸಾವಿರ ಬಾರಿ ರಿಟ್ವೀಟ್ ಆಗಿದೆ ಮತ್ತು 62.3 ಸಾವಿರ ಲೈಕ್‌‌ಗಳು ಗಳಿಸಿದೆ.

ಮೇಲಿರುವ ಚತ್ರವನ್ನು ಬಳಸಿಕೊಂಡು ಹಲವಾರು ಜನರು ಇದೇ ರೀತಿಯ ಟ್ವೀಟ್ ಮಾಡಿದ್ದಾರೆ.

ಕೇವಲ ಟ್ವಿಟ್ಟರ್ ಮಾತ್ರವಲ್ಲದೆ ಫೇಸ್‌ಬುಕ್‌‌ನಲ್ಲಿ ಕೂಡಾ ಈ ರೀತಿಯ ಪೋಸ್ಟ್‌ಗಳು ಹರಿದಾಡಿವೆ. ಅದರಲ್ಲಿ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಆಗಸ್ಟ್‌ 5 ರಂದು ರಾಮ ಅಭಿಷೇಕ ಮಾಡಿದರು ಎಂದು ಹೇಳಲಾಗಿದೆ.

Let's call Boris Johnson to drill some culture where needed!

Posted by Diwakar Acharya on Friday, August 7, 2020

Honourable PM of UK Mr. Boris Johnson..

Posted by Vimal Dwivedi on Friday, August 7, 2020

ಫ್ಯಾಕ್ಟ್‌‌ಚೆಕ್

ಈ ವೈರಲ್ ಪೋಸ್ಟ್ ಸುಳ್ಳಾಗಿದೆ. ಯಾಕೆಂದರೆ ಈ ಟ್ವೀಟ್ ಮಾಡಿರುವ ಟ್ವಿಟ್ಟರ್‌ ಖಾತೆಯು ಇಂಗ್ಲೆಂಡ್ ಪ್ರಧಾನಿಯದ್ದಲ್ಲ. ಆ ಖಾತೆ ನಕಲಿಯಾಗಿದ್ದು, ಅದನ್ನು ಟ್ವಿಟ್ಟರ್‌ ಪರಿಶೀಲಿಸಿಲ್ಲ. ಅದು ಬ್ಲುಟಿಕ್ ಸಹ ಹೊಂದಿಲ್ಲ.

ನಕಲಿ ಟ್ವಿಟರ್ ವಿವರ

ವೈರಲ್ ಟ್ವೀಟ್ ಅನ್ನು ಪೋಸ್ಟ್ ಮಾಡಿದ ಖಾತೆಯು ಇದು ‘ಅನಧಿಕೃತ ಖಾತೆ’ ಎಂದು ಅದರಲ್ಲೇ ಸ್ಪಷ್ಟವಾಗಿ ಉಲ್ಲೇಖಿಸಿದೆ, ಅದಲ್ಲದೆ ಅದನ್ನು ಕಳೆದ ತಿಂಗಳು ರಚಿಸಲಾಗಿದೆ.

ಖಾತೆಯ ಸ್ಕ್ರೀನ್‌ಶಾಟ್ ಕೆಳಗಿದೆ.

ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಅಧಿಕೃತ ಖಾತೆಗೆ ಇದಾಗಿದೆ.

ವೈರಲ್ ಆಗಿರುವ ಫೋಟೋ 

ವೈರಲ್ ಟ್ವೀಟ್ ಜೊತೆಯಲ್ಲಿರುವ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿ ಹುಡುಕಿದಾಗ, ಇದು ಡಿಸೆಂಬರ್ 9, 2019 ರಂದು ಇಂಗ್ಲೆಂಡ್ ಕನ್ಸರ್ವೇಟಿವ್ ಪಕ್ಷದ ಫೇಸ್‌ಬುಕ್ ಪುಟದಲ್ಲಿ ಮಾಡಲಾದ ಪೋಸ್ಟ್ ಒಂದರ ಚಿತ್ರ ಎಂದು ತಿಳಿದು ಬಂದಿದೆ. ಆ ಪೋಸ್ಟ್‌ನಲ್ಲಿ ಇದ್ದ ಹಲವು ಚಿತ್ರಗಳಲ್ಲಿ ಈ ವೈರಲ್ ಚಿತ್ರವೂ ಒಂದಾಗಿದೆ.

ಪೋಸ್ಟ್‌ನಲ್ಲಿರುವ ಶೀರ್ಷಿಕೆಯ ಪ್ರಕಾರ, ಬೋರಿಸ್ ಜಾನ್ಸನ್ ಇಂಗ್ಲೆಂಡ್ ಗೃಹ ಸಚಿವೆ ಪ್ರೀತಿ ಪಟೇಲ್ ಅವರೊಂದಿಗೆ ವಾಯುವ್ಯ ಲಂಡನ್‌ನ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

“ಈ ದೇವಾಲಯವು ನಮ್ಮ ದೇಶದ ಬಹುದೊಡ್ಡ ಉಡುಗೊರೆಗಳಲ್ಲಿ ಒಂದಾಗಿದೆ. ಅದರಲ್ಲಿ ವಾಸಿಸುವ ಅದ್ಭುತ ಸಮುದಾಯ ಮನೋಭಾವದಿಂದ ಇದು ಜೀವಂತವಾಗಿದೆ. ನೀವು ಮಾಡುವ ಮಹತ್ತರವಾದ ದತ್ತಿ ಕಾರ್ಯಗಳ ಮೂಲಕ ನೀವು ನಮ್ಮ ಸಮಾಜಕ್ಕೆ ಮರಳಿ ನೀಡುತ್ತಿದ್ದೀರಿ. ನಿಮ್ಮನ್ನು ಹೊಂದಿರುವ ಲಂಡನ್ ಮತ್ತು ಇಂಗ್ಲೆಂಡ್ ಅದೃಷ್ಟವಂತರು” ಎಂದು ಅಂದು ಬೋರಿಸ್ ಹೇಳಿದ್ದಾರೆ.

Last night Boris Johnson visited the Hindu temple of Neasden in north-west London with Priti Patel."This temple is one…

Posted by Conservatives on Sunday, December 8, 2019

ದೇವಾಲಯದ ಬಗ್ಗೆ ಇಲ್ಲಿ ನೋಡಬಹುದು.

ಈ ಮಾಹಿತಿಯ ಆಧಾರದ ಮೇಲೆ ಕೀವರ್ಡ್ ಬಳಸಿ ಹುಡುಕಾಟ ನಡೆಸಿದಾಗ ಈ ಕಾರ್ಯಕ್ರಮದ ಹಲವಾರು ಸುದ್ದಿಗಳನ್ನು ನೋಡಬಹುದಾಗಿದೆ.

ದಿ ಹಿಂದೂ ವರದಿಯ ಪ್ರಕಾರ, ಬೋರಿಸ್ ಜಾನ್ಸನ್ ಅವರು ಹೊಸ ಭಾರತವನ್ನು ನಿರ್ಮಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಅವರೊಂದಿಗೆ ಪಾಲುದಾರರಾಗುವುದಾಗಿ ವಾಗ್ದಾನ ಮಾಡಿದ್ದರು. ಅದರ ಹಿನ್ನಲೆಯಲ್ಲಿ, ಅವರು ಮತ್ತು ಅವರ ಪಾಲುದಾರ ಕ್ಯಾರಿ ಸೈಮಂಡ್ಸ್ ಕಳೆದ ವರ್ಷ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಭಾರತೀಯ ವಲಸೆಗಾರರ ​​ಮತಗಳನ್ನು ಸೆಳೆಯಲು ಇಂಗ್ಲೆಂಡಿನ ಪ್ರಸಿದ್ಧ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ್ದರು.

ಯುಕೆ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಭೇಟಿಯಲ್ಲಿ ದೇವಾಲಯದ ಅಧಿಕಾರಿಗಳ ಟ್ವೀಟ್ ಕೆಳಗಿನಂತಿದೆ.

ಅದಲ್ಲದೆ ಈ ದೇವಾಲಯವು ರಾಮನ ದೇವಾಲಯ ಅಲ್ಲ. ಇದು 1781 ರಲ್ಲಿ ಜನಿಸಿದ್ದ “ಭಗವಾನ್ ಸ್ವಾಮಿನಾರಾಯಣ” ದೇವಾಲಯವಾಗಿದೆ. ಇದಲ್ಲದೆ, ದೇವಾಲಯದ ವೆಬ್‌ಸೈಟ್‌ನಲ್ಲಿ ಹೇಳಿರುವಂತೆ ಭಗವಾನ್ ಸ್ವಾಮಿನಾರಾಯಣ್ ಅವರ ಹದಿಹರೆಯದ ರೂಪವಾದ ಶ್ರೀ ನೀಲಕಂಠ ವರ್ಣಿ ರೂಪದಲ್ಲಿ ಅವರು ಪೂಜಿಸಲ್ಪಡುತ್ತಿದ್ದಾರೆ.

ಇಂಗ್ಲೆಂಡ್ ಪ್ರಧಾನಿ ದೇವಾಲಯಕ್ಕೆ ಭೇಟಿ ನೀಡಿ ಮಾತನಾಡಿದ್ದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದಾಗಿದೆ.


ಓದಿ: ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?
 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...