Homeಅಂತರಾಷ್ಟ್ರೀಯತೈಲ ಸೋರಿಕೆ ಬಿಕ್ಕಟ್ಟು ಉಲ್ಬಣ; 'ಪರಿಸರ ತುರ್ತು ಪರಿಸ್ಥಿತಿ' ಘೋಷಿಸಿದ ಮಾರಿಷಸ್

ತೈಲ ಸೋರಿಕೆ ಬಿಕ್ಕಟ್ಟು ಉಲ್ಬಣ; ‘ಪರಿಸರ ತುರ್ತು ಪರಿಸ್ಥಿತಿ’ ಘೋಷಿಸಿದ ಮಾರಿಷಸ್

3,800 ಟನ್ ಇಂಧನವನ್ನು ಸಾಗಿಸುತ್ತಿದ್ದ ಇದು, ಬ್ಲೂ ಬೇ ಮೆರೈನ್ ಪಾರ್ಕ್‌ನ ವೈಡೂರ್ಯದ ಸಮೀಪವಿರುವ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪಟ್ಟಿ ಮಾಡಲಾದ ಸಂರಕ್ಷಣಾ ತಾಣವಾದ ಪಾಯಿಂಟ್ d'Esny ಯಲ್ಲಿ ಬಂಡೆಗೆ ಡಿಕ್ಕಿ ಹೊಡೆದಿದೆ. 

- Advertisement -
- Advertisement -

ಮಾರಿಷಸ್‌ನ ಪ್ರಧಾನ ಮಂತ್ರಿ ಪರಿಸರ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದು, ತುರ್ತು ನೆರವು ನೀಡುವಂತೆ ಫ್ರಾನ್ಸ್‌ಗೆ ಮನವಿ ಮಾಡಿದ್ದಾರೆ.

“ಪರಿಸರ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ” ಎಂದು ಪ್ರಧಾನಿ ಪ್ರವೀಂದ್ ಜುಗ್ನಾಥ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶುಕ್ರವಾರ  ಪೋಸ್ಟ್ ಮಾಡಿದ್ದಾರೆ.

ಎರಡು ವಾರಗಳ ಹಿಂದೆ ಘಟಿಸಿದ ಅವಘಡ ಬೃಹತ್ ವಾಹಕ ಎಂ.ವಿ.ವಾಕಾಶಿಯೊದಿಂದ ಇಂಧನ ಸೋರಿಕೆಯನ್ನು ತಡೆಯುವ ಪ್ರಯತ್ನಗಳಿಗೆ ಫಲ ಸಿಕ್ಕಿಲ್ಲ. ಇದು ಸಮುದ್ರ ಪ್ರದೇಶದ ನೀರನ್ನು ಕಲುಷಿತಗೊಳಿಸುತ್ತಿದೆ.

ಜಪಾನಿನ ಕಂಪನಿಯೊಂದಕ್ಕೆ ಸೇರಿದ ಆದರೆ ಪನಾಮಿಯನ್-ಆರಂಭಿಸಿದ ಟ್ಯಾಂಕರ್ 3,800 ಟನ್ ಇಂಧನವನ್ನು ಸಾಗಿಸುತ್ತಿತ್ತು. ಇದು, ಬ್ಲೂ ಬೇ ಮೆರೈನ್ ಪಾರ್ಕ್‌ನ ವೈಡೂರ್ಯದ ಸಮೀಪವಿರುವ, ಅಂತರರಾಷ್ಟ್ರೀಯ ಮಟ್ಟದಲ್ಲಿ ಪಟ್ಟಿ ಮಾಡಲಾದ ಸಂರಕ್ಷಣಾ ತಾಣವಾದ ಪಾಯಿಂಟ್ d’Esny ಯಲ್ಲಿ ಬಂಡೆಗೆ ಡಿಕ್ಕಿ ಹೊಡೆದಿದೆ. ಭಾರೀ ಪ್ರಮಾಣ ಇಂಧನ ಸೋರಿಕೆಯಾಗಿದೆ ಎಂದು ಪರಿಸರ ಸಚಿವಾಲಯವು ತಿಳಿಸಿದೆ.

ಮಾರಿಷಸ್ ಹಸಿರು ಪ್ರವಾಸೋದ್ಯಮ ತಾಣವಾಗಿ ತನ್ನ ಖ್ಯಾತಿಯನ್ನು ನಿರ್ಮಿಸಿದ್ದ ಸ್ಥಳಗಳಲ್ಲಿ ಇಂಧನ ಸೋರಿಕೆಯು ಭಾರೀ ಹಾನಿ ಉಂಟುಮಾಡಿದೆ. ವೈಮಾನಿಕ ಚಿತ್ರಗಳು ಹಾನಿಯ ಪ್ರಮಾಣವನ್ನು ತೋರಿಸುತ್ತಿದ್ದು, ನೀಲಿ ಸಮುದ್ರಗಳು ತೈಲ ಸೋರಿಕೆಯಿಂದ ಕಪ್ಪು ಬಣ್ಣಕ್ಕೆ ತಿರುಗಿದೆ.

“ವಕಾಶಿಯೊ ಮುಳುಗುವಿಕೆ ಮಾರಿಷಸ್‌ಗೆ ಅಪಾಯವನ್ನು ತಂದಿಡುತ್ತದೆ. ಹಡಗುಗಳನ್ನು ಮರುಹೊಂದಿಸಲು ನಮ್ಮ ದೇಶಕ್ಕೆ ಕೌಶಲ್ಯ ಮತ್ತು ಪರಿಣತಿ ಇಲ್ಲ. ಆದ್ದರಿಂದ ನಾನು ಫ್ರಾನ್ಸ್‌ನ ಸಹಾಯವನ್ನು ಕೋರಿದ್ದೇನೆ” ಎಂದಿದ್ದಾರೆ.

ಜುಲೈ 25 ರಂದು ಹಡಗಿನಲ್ಲಿದ್ದ ಇಪ್ಪತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ಮಾರಿಷಸ್‌ನ ಆರ್ಥಿಕತೆಯ ಬೆನ್ನೆಲುಬಾಗಿರುವ ರಾಷ್ಟ್ರದ ಕರಾವಳಿಯಲ್ಲಿ ಇನ್ನೂ ಹೆಚ್ಚಿನ ಸೋರಿಕೆ ಹಾನಿಯನ್ನುಂಟುಮಾಡುತ್ತದೆ ಎಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾರಿಷಸ್, ಆಹಾರಕ್ಕಾಗಿ ಮತ್ತು ಪ್ರವಾಸೋದ್ಯಮಕ್ಕಾಗಿ ತನ್ನ ಸಮುದ್ರಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿದೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...