Homeಅಂತರಾಷ್ಟ್ರೀಯಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಹಿರೋಷಿಮಾ, ನಾಗಾಸಾಕಿ ಮೇಲಿನ ಪರಮಾಣು ದಾಳಿಗೆ 75 ವರ್ಷ!

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ "ಲಿಟಲ್ ಬಾಯ್" ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕೂ ಹೆಚ್ಚು ಜನರನ್ನು ಕೊಂದಿತ್ತು.

- Advertisement -
- Advertisement -

ಜಪಾನ್‌ನ ಹಿರೋಷಿಮಾ ನಗರದ ಮೇಲೆ ವಿಶ್ವದ ಮೊದಲ ಪರಮಾಣು ಬಾಂಬ್ ದಾಳಿಗೆ 75 ವರ್ಷ ತುಂಬಿದೆ. ಆಗಸ್ಟ್ 6 ರಂದು ಪ್ರಾರಂಭವಾಗಿ ಮೂರು ದಿನಗಳ ನಂತರ ಎರಡನೆಯ ಬಾರಿ ಮತ್ತು ಕೊನೆಯದಾಗಿ ನಾಗಸಾಕಿಯ ಮೇಲೆ ನಡೆದ ದಾಳಿಯು ಎರಡನೆಯ ಮಹಾಯುದ್ಧದ ಅಂತ್ಯಕ್ಕೆ ಕಾರಣವಾಯಿತು.

ಈ ದಾಳಿಯಲ್ಲಿ 2,00,000ಕ್ಕೂ ಹೆಚ್ಚು ಜೀವ ಹಾನಿ ಮತ್ತು ಊಹಿಸಲಾಗದಷ್ಟು ಆಸ್ತಿಪಾಸ್ತಿ ಹಾನಿಗೊಳಗಾಗಿದ್ದವು.

ಆಗಸ್ಟ್ 6, 1945 ರಂದು, ಎನೋಲಾ ಗೇ ಎಂಬ ಯುಎಸ್ ಬಿ -29 ಯುದ್ಧ ವಿಮಾನವು ಜಪಾನ್‌ನ ನೈಋತ್ಯ ನಗರವಾದ ಹಿರೋಷಿಮಾದಲ್ಲಿ “ಲಿಟಲ್ ಬಾಯ್” ಎಂಬ ಅಡ್ಡಹೆಸರನ್ನು ಹೊಂದಿದ್ದ ಬಾಂಬನ್ನು ಹಾಕಿ, 1,40,000ಕ್ಕು ಹೆಚ್ಚು ಜನರನ್ನು ಕೊಂದಿತ್ತು. ಲಕ್ಷಾಂತರ ಜನರು ಗಾಯಗೊಂಡಿದ್ದರು. ಅವರಲ್ಲಿ ಹಲವರು ಮುಂದಿನ ವರ್ಷಗಳಲ್ಲಿ ಸಾವನ್ನಪ್ಪಿದರು.

ಸ್ಫೋಟದ ತಾಪಮಾನವು ಅಂದಾಜು 7,000 ಡಿಗ್ರಿ ಸೆಲ್ಸಿಯಸ್ (12,600 ಫ್ಯಾರನ್‌ಹೀಟ್) ತಲುಪಿತ್ತು. ಇದು ವೃತ್ತಾಕಾರವಾಗಿ ಸುಮಾರು ಮೂರು ಕಿಲೋಮೀಟರ್ ವರೆಗೂ ಮಾರಣಾಂತಿಕವಾಗಿ ವ್ಯಾಪಿಸಿತ್ತು.

ಆಗಸ್ಟ್ 9 ರಂದು, ಯುನೈಟೆಡ್ ಸ್ಟೇಟ್ಸ್ ನಾಗಾಸಾಕಿ ನಗರದ ಮೇಲೆ “ಫ್ಯಾಟ್ ಮ್ಯಾನ್” ಎಂಬ ಮತ್ತೊಂದು ಅಡ್ಡಹೆಸರಿನ ಬಾಂಬ್ ಅನ್ನು ಬೀಳಿಸಿ 75,000 ಕ್ಕೂ ಹೆಚ್ಚು ಜನರನ್ನು ಕೊಂದಿತು.

ದುರಂತ ಘಟನೆಯಿಂದ ದಟ್ಟ ಮೋಡ ಬೆಳೆಯಿತು. ಅದು 9,000 ಮೀಟರ್ (30,000 ಅಡಿ) ಎತ್ತರವಿತ್ತು ಎಂಬುದಕ್ಕೆ ಹಲವಾರು ಐತಿಹಾಸಿಕ ಚಿತ್ರಗಳು ಸಾಕ್ಷಿಯಾಗಿವೆ.

ಈ ದಾಳಿಯ ಬಳಿಕ ಜಪಾನ್ ಆರು ದಿನಗಳ ನಂತರ ಶರಣಾಗಿ, ಎರಡನೆಯ ಮಹಾಯುದ್ಧ ಕೊನೆಗೊಂಡಿತು. ಈ ಎರಡು ಬಾಂಬ್ ದಾಳಿಯು ಯುದ್ಧಕಾಲದಲ್ಲಿ ಪರಮಾಣು ಬಾಂಬುಗಳನ್ನು ಬಳಸಿದ ಏಕೈಕ ಸಮಯವಾಗಿದೆ.

ಪರಮಾಣು ದಾಳಿಗೆ 75 ವರ್ಷ ತುಂಬಿದ ಸ್ಮರಣಾರ್ಥವಾಗಿ ಜಗತ್ತಿನ ಹಲವೆಡೆ ಮಡಿದವರಿಗಾಗಿ ಮೌನಾಚರಣೆ ಮಾಡಲಾಯಿತು. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷದ ಸ್ಮರಣಾರ್ಥ ಸಮಯವನ್ನು ಕಡಿಮೆಗೊಳಿಸಲಾಗಿದೆ.


ಇದನ್ನೂ ಓದಿ: ಮಾನವ ನಿರ್ಮಿತ ಪಿಡುಗಿಗೆ 75 ವರ್ಷ: ಹಿರೋಶಿಮಾ ಬಾಂಬ್ ದಾಳಿಯಿಂದ ಜಗತ್ತು ಕಲಿತ ಪಾಠವೆಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...