Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಮಸೀದಿ ಜಾಗದಲ್ಲಿ ಬಾಬ್ರಿ ಆಸ್ಪತ್ರೆ ಸ್ಥಾಪನೆ? ಈ ಸುದ್ದಿ ನಿಜವೆ?

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಬಾಬ್ರಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಮಮಂದಿರ ಶಿಲಾನ್ಯಾಸ ಕಾರ್ಯಕ್ರಮ ಮುಗಿದ ಕೂಡಲೇ ಈ ಸಂದೇಶ ಹರಿದಾಡಿದ್ದು, ಹೊಸದಾಗಿ ನಿರ್ಮಿಸಲಾಗುವ ಆಸ್ಪತ್ರೆಗೆ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸಲಾಗುವುದು ಎಂದೂ ಸಹ ಹೇಳಲಾಗಿದೆ.

“ಬಾಬರೀ ಮಸೀದಿ ನಿರ್ಮಾಣಕ್ಕೆ ಸುಪ್ರೀಮ್ ಕೋರ್ಟ್ ನೀಡಿದ 5 ಎಕರೆ ಭೂಮಿಯಲ್ಲಿ ಬಾಬರಿ ಆಸ್ಪತ್ರೆ ನಿರ್ಮಾಣಕ್ಕೆ ನಿರ್ಧಾರ. AIIMS ನ ಮಾದರಿಯಲ್ಲಿ ನಿರ್ಮಾಣವಾಗುವ ಈ ಬಾಬರೀ ಆಸ್ಪತ್ರೆಯಲ್ಲಿ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಲು ನಿರ್ಧಾರ ಮಾಡಿದ ಬಾಬರೀ ಮಸೀದಿ ಟ್ರಸ್ಟಿಗಳ ನಿರ್ಧಾರ ನಿಜಕ್ಕೂ ಶ್ಲಾಘನೀಯವಾಗಿದೆ…” ಎಂದು ನೂರಾರು ಜನರು ಪೋಸ್ಟ್ ಮಾಡಿದ್ದಾರೆ.

ಇದನ್ನು ಮಾಸ್ಟರ್ ಸ್ಟ್ರೋಕ್ ಎಂದು ಕರೆದಿದ್ದು ಹಲವಾರು ಉತ್ತಮ ನಿರ್ಧಾರ ಎಂದು ಶ್ಲಾಘಿಸಿದ್ದಾರೆ. ಇನ್ನು ಕೆಲವರು ಇದು ನಿಜವೇ ಎಂದು ಪ್ರಶ್ನೆ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್:

ವಾಸ್ತವದಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಅಯೋಧ್ಯೆಯಲ್ಲಿ ನೀಡಲಾದ 5 ಎಕರೆ ಜಾಗದಲ್ಲಿ ಏನನ್ನು ನಿರ್ಮಿಸಬೇಕೆಂದು ಸುನ್ನಿ ವಕ್ಫ್ ಬೋರ್ಡ್ ನಿರ್ಧಾರ ಮಾಡಿಲ್ಲ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಅಲ್ಲದೇ ಹಲವಾರು ಮಾಧ್ಯಮಗಳು ಅಲ್ಲಿ ಮಸೀದಿ, ಆಸ್ಪತ್ರೆ, ಗ್ರಂಥಾಲಯ ಮತ್ತು ಇಸ್ಲಾಂ ಬಗೆಗಿನ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುತ್ತದೆ ಎಂದು ವರದಿ ಮಾಡಿವೆ.

ಅಯೋಧ್ಯೆಯ ಆ 5 ಎಕರೆ ಜಾಗದಲ್ಲಿ ನಾವು ಆಸ್ಪತ್ರೆ ನಿರ್ಮಿಸಿ ಡಾ.ಕಫೀಲ್ ಖಾನ್‌ರವರನ್ನು ನಿರ್ದೇಶಕರನ್ನಾಗಿ ನೇಮಿಸುತ್ತೇವೆ ಎಂಬುದು ಸುಳ್ಳು ಸುದ್ದಿ ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಬೋರ್ಡ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಯ್ಯದ್ ಮಹಮ್ಮದ್ ಶೋಯಬ್ ಇಂಡಿಯಾ ಟುಡೆಗೆ ತಿಳಿಸಿದ್ದಾರೆ.

ನಾವು ಅಲ್ಲಿ ಏನನ್ನು ನಿರ್ಮಿಸಬೇಕು ಎಂಬುದರ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಆಸ್ಪತ್ರೆ, ಮಸೀದಿ, ಗ್ರಂಥಾಲಯ, ಸಂಶೋಧನ ಕೇಂದ್ರ ನಿರ್ಮಿಸಬೇಕು ಎಂದು ಹಲವು ಸಲಹೆಗಳು ಬಂದಿವೆ. ಆದರೆ ನಾವಿನ್ನು ಅಂತಿಮ ನಿರ್ಧಾರ ಮಾಡಿಲ್ಲ ಎಂದು ಶೋಯಬ್ ತಿಳಿಸಿದ್ದಾರೆ.

ಸುನ್ನಿ ವಕ್ಫ್ ಬೋರ್ಡ್ ವತಿಯಿಂದ ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಟ್ರಸ್ಟ್ ಎಂಬ 15 ಜನರ ಸಮಿತಿ ಇತ್ತೀಚೆಗೆ ರಚನೆಯಾಗಿದೆ. ಅದು ಶೀಘ್ರದಲ್ಲೇ ಸಭೆ ಸೇರಿ ಆ ಜಾಗದಲ್ಲಿ ಏನನ್ನು ನಿರ್ಮಿಸಬೇಕು ಎಂದು ನಿರ್ಧರಿಸಲಿದೆ ಎನ್ನಲಾಗಿದೆ.

ಇನ್ನು ವೈರಲ್ ಆದ ಪೋಸ್ಟ್‌ನಲ್ಲಿನ ಚಿತ್ರಗಳಿಗೆ ಬಂದರೆ ಆಸ್ಪತ್ರೆಯ ಮಾದರಿ ಚಿತ್ರವು ಲಿಂಕ್ಡ್‌ಇನ್‌ ನಿಂದ ತೆಗೆದುಕೊಂಡ ಚಿತ್ರವಾಗಿದ್ದು ಅದಕ್ಕೆ ಬಾಬ್ರಿ ಹಾಸ್ಪಿಟಲ್ ಎಂದು ಫೋಟೊಶಾಪ್‌ ಮಾಡಿ ಬರೆಯಲಾಗಿದೆ.

ಒಟ್ಟಿನಲ್ಲಿ ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕಾಗಿ ನೀಡಲಾದ 5 ಎಕರೆ ಜಾಗದಲ್ಲಿ ಏಮ್ಸ್‌ ಮಾದರಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟತ್ತೇವೆ ಎಂದು ಸುನ್ನಿ ವಕ್ಫ್‌ ಬೋರ್ಡ್ ಘೋಷಿಸಿದೆ ಎಂಬ ಸುದ್ದಿ ಅಧಿಕೃತವಲ್ಲ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಅಮೀರ್‌ ಖಾನ್‌ ಮೈದಾ ಹಿಟ್ಟಿ‌ನಲ್ಲಿ 15 ಸಾವಿರ ಹಂಚಿದ್ದು ಶುದ್ದ ಸುಳ್ಳು ಸುದ್ದಿ: ಹೀಗೆಳಿದ್ದು ಯಾರು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...