Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...