Homeಮುಖಪುಟನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ನಕಲಿ ಸುದ್ದಿ ಪ್ರಸಾರಕ್ಕಾಗಿ ಬಂಧನಕ್ಕೊಳಗಾಗಿದ್ದ ಪತ್ರಕರ್ತ ರಾಹುಲ್ ಕುಲಕರ್ಣಿ ಆರೋಪ ಮುಕ್ತ

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

- Advertisement -
- Advertisement -

ರೈಲ್ವೆ ಇಲಾಖೆ ಪ್ರಾರಂಭಿಸಲಿರುವ ವಿಶೇಷ ಪ್ರಯಾಣಿಕ ರೈಲು ಸೇವೆಯ ಬಗ್ಗೆ “ನಕಲಿ ಸುದ್ದಿ” ಪ್ರಸಾರ ಮಾಡಿದ್ದಕ್ಕಾಗಿ 43 ವರ್ಷದ ಪತ್ರಕರ್ತ ರಾಹುಲ್ ಕುಲಕರ್ಣಿಯನ್ನು ಮುಂಬೈ ಪೊಲೀಸರು ಬಂಧಿಸಿದ ನಾಲ್ಕು ತಿಂಗಳ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತರನ್ನಾಗಿ ಮಾಡಲಾಗಿದೆ.

ಪ್ರಮುಖ ಮರಾಠಿ ಸುದ್ದಿ ಚಾನೆಲ್ ಎಬಿಪಿ ಮಝಾದ ಕಾರ್ಯನಿರ್ವಾಹಕ ಸಂಪಾದಕ ಕುಲಕರ್ಣಿಯನ್ನು ಏಪ್ರಿಲ್ 14 ರಂದು ಸಾವಿರಾರು ಜನರು ಸೇರಿದ್ದ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಬಂಧಿಸಲಾಗಿತ್ತು.

ಬಾಂದ್ರಾದ 12 ನೇ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ 83 ಪುಟಗಳ ಪ್ರಕರಣ ಮುಚ್ಚುವ ವರದಿಯನ್ನು ಸಲ್ಲಿಸಿರುವ ಪೊಲೀಸರು ವಿಶೇಷ ರೈಲುಗಳನ್ನು ಪ್ರಾರಂಭಿಸುವ ಸ್ಥಳ ಮತ್ತು ದಿನವನ್ನು ಕುಲಕರ್ಣಿಯ ಸುದ್ದಿಯಲ್ಲಿ ಉಲ್ಲೇಖಿಸಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದಾರೆ. ಜನರು ರಾಹುಲ್ ಕುಲಕರ್ಣಿ ಅವರ ಸುದ್ದಿಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ ಎಂದು ವರದಿ ತೀರ್ಮಾನಿಸಿದೆ.

ತಪ್ಪು ಮಾಹಿತಿಗಳ ಆಧಾರದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ವಿವರವಾದ ತನಿಖೆ ನಡೆಸಿದ ನಂತರ ಪೊಲೀಸರು ಜುಲೈ ತಿಂಗಳ ಅಂತ್ಯದಲ್ಲಿ ಮುಚ್ಚುವ ವರದಿಯನ್ನು ಸಲ್ಲಿಸಿದರು. ದೂರುದಾರ ಮತ್ತು ರೈಲ್ವೆ ನಿಲ್ದಾಣಗಳ ಹೊರಗೆ ಸೇರಿದ್ದ ಜನರು ಸೇರಿದಂತೆ 11 ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಏಪ್ರಿಲ್ 14 ರಂದು ಕುಲಕರ್ಣಿ ತಮ್ಮ ಸುದ್ದಿ ಚಾನೆಲ್ ಎಬಿಪಿ ಮಝಾದಲ್ಲಿ, ದಕ್ಷಿಣ-ಮಧ್ಯ ರೈಲ್ವೆ ಇಲಾಖೆ ಶೀಘ್ರದಲ್ಲೇ ದೇಶದ ವಿವಿಧ ಭಾಗಗಳಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ರೈಲು ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ ಎಂದು ಸುದ್ಧಿ ಪ್ರಸಾರ ಮಾಡಿತ್ತು.

ಈ ಸುದ್ದಿ ಬೆಳಿಗ್ಗೆ 9 ರಿಂದ 11:30 ರ ನಡುವೆ ಪ್ರಸಾರವಾಗಿತ್ತು. ಈ ಸುದ್ದಿಯಿಂದ ಪ್ರೇರಿತರಾದ ಜನ ಮಧ್ಯಾಹ್ನ 3:45 ರ ಸುಮಾರಿಗೆ ಬಾಂದ್ರಾ ರೈಲ್ವೆ ನಿಲ್ದಾಣದ ಹೊರಗೆ ಒಂದೇ ಸ್ಥಳದಲ್ಲಿ ಹಲವಾರು ಜನರು ಸೇರಲು ಪ್ರಾರಂಭಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ರೈಲ್ವೆ ನಿಲ್ದಾಣದಲ್ಲಿ ಸೇರಿದ್ದ ಬಹುಪಾಲು ಜನರು ಹತ್ತಿರದ ಶಾಸ್ತ್ರಿನಗರ, ಖುರೇಶಿನಗರ, ಮಹಾರಾಷ್ಟ್ರ ನಗರ ಮತ್ತು ನರ್ಗಿಸ್ ದತ್ ನಗರ ಕೊಳೆಗೇರಿ ಪ್ರದೇಶಕ್ಕೆ ಸೇರಿದ್ದರು. ನೆರೆದಿದ್ದವರನ್ನು ಚದುರಿಸಲು ಪೊಲೀಸರು ತೀವ್ರ ಲಾಠಿ ಪ್ರಹಾರ ನಡೆಸಿದ್ದರು.

ಮೂಲತಃ ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಸೇರಿದ ವಲಸೆ ಕಾರ್ಮಿಕರು ನಿಲ್ದಾಣದ ಹೊರಗೆ ಒಟ್ಟುಗೂಡಿದ್ದರು. ಅವರು ಬಾಂದ್ರಾ ನಿಲ್ದಾಣದ ಸುತ್ತ ಮುತ್ತ ವಾಸಿಸುತ್ತಿದ್ದರು ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಪೊಲೀಸರು ಸಂಗ್ರಹಿಸಿದ ಸಾಕ್ಷಿ ಸಾಕ್ಷ್ಯಗಳು ಕುಲಕರ್ಣಿಯ ಸುದ್ದಿಗಳನ್ನು ವೀಕ್ಷಿಸಿಲ್ಲ ಎಂದು ಹೇಳಿಕೊಂಡಿವೆ. ವಾಸ್ತವದಲ್ಲಿ ತಮ್ಮ ನಿವಾಸದ ಸುತ್ತಲೂ ಬಾಯಿಂದ ಬಾಯಿಗೆ ಹರಡಿದ ಸಂಭಾಷಣೆಗಳ ಆಧಾರದ ಮೇಲೆ ಒಟ್ಟುಗೂಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಬಾಂದ್ರಾ ವೆಸ್ಟರ್ನ್ ರೈಲ್ವೆ ನಿಲ್ದಾಣವು ಸ್ಥಳೀಯ ರೈಲುಗಳನ್ನು ಮಾತ್ರ ಓಡಿಸುತ್ತದೆ ಎಂಬುದು ಸಾಮಾನ್ಯ ತಿಳುವಳಿಕೆ. ಇನ್ನೊಂದು ರೈಲು ನಿಲ್ದಾಣ ಬಾಂದ್ರಾ ಟರ್ಮಿನಸ್ ಹೊರರಾಜ್ಯದ ರೈಲುಗಳಿಗೆ ಮೀಸಲಾಗಿರುತ್ತದೆ. ಈ ಹೊರ ರಾಜ್ಯದ ರೈಲು ನಿಲ್ದಾಣದಲ್ಲಿ ಜನಸಮೂಹ ಸೇರಿಲ್ಲ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ.

ಜನಸಮೂಹ ಸೇರುತ್ತಿದ್ದಂತೆಯೇ, ಮಹಾರಾಷ್ಟ್ರ ರಾಜ್ಯ ಸರ್ಕಾರವು, ಎಬಿಪಿ ಮಝಾ ಸುದ್ದಿ ಸಂಸ್ಥೆ ಮತ್ತು ಕುಲಕರ್ಣಿಯನ್ನು ವದಂತಿಯನ್ನು ಹುಟ್ಟುಹಾಕಿದೆ ಎಂದು ಟೀಕಿಸಿತ್ತು. ಸಾಂಕ್ರಾಮಿಕ ಸಮಯದಲ್ಲಿ ಜನರ ಅವ್ಯವಸ್ಥೆ ಮತ್ತು ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ ಕಾರಣಕ್ಕಾಗಿ ಕುಲಕರ್ಣಿಯ ಮೇಲೆ ಭಾರತೀಯ ದಂಡ ಸಂಹಿತೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಹಲವಾರು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ಉಸ್ಮಾನಾಬಾದ್ ನಿವಾಸಿ ಕುಲಕರ್ಣಿಯನ್ನು ಬಂಧಿಸಿ ಮುಂಬೈಗೆ ಕರೆತಂದು ಒಂದು ದಿನ ಬಂಧನದಲ್ಲಿಡಲಾಗಿತ್ತು.

ಅಂತಿಮ ವರದಿಯಲ್ಲಿ, ಪೊಲೀಸರು ವದಂತಿಯನ್ನು ದುರುಪಯೋಗ ಮಾಡಿದ್ದಕ್ಕಾಗಿ ವಿನಯ್ ದುಬೆ ಎಂಬ ಇನ್ನೊಬ್ಬ ವ್ಯಕ್ತಿಯ ಮೇಲೆ ಆರೋಪ ಹೊರಿಸಿದ್ದಾರೆ. ದುಬೆಯ ಪ್ರಚೋದನೆಯನ್ನು ಅನುಸರಿಸಿ ಜನಸಮೂಹವು ಒಟ್ಟುಗೂಡಿದೆ. ಇಲ್ಲಿ ಕುಲಕರ್ಣಿಯ ಪಾತ್ರವಿಲ್ಲ ಎಂದು ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಮಹಾರಾಷ್ಟ್ರದಲ್ಲಿ ಕನಿಷ್ಠ 15 ಇತರ ವರದಿಗಾರರ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಕೊರೊನಾ ಎದುರಿಸಲು ರಾಜ್ಯ ಸರ್ಕಾರದ ವಿಫಲತೆ ಮತ್ತು ಸಾಮಾನ್ಯ ಜನರು ಮತ್ತು ಕೊರೊನಾ ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ಮಾಡಿದ ಹೆಚ್ಚಿನ ವರದಿಗಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಶೇಷವಾಗಿ ಸಣ್ಣ ಪತ್ರಿಕೆಗಳು ಮತ್ತು ಚಾನೆಲ್‌ಗಳೊಂದಿಗೆ ಕೆಲಸ ಮಾಡುವ ವರದಿಗಾರರನ್ನು ಗುರಿಯಾಗಿಸಿಕೊಂಡಿದೆ ಎಂದು ವರದಿಗಾರರು ಆರೋಪಿಸಿದ್ದಾರೆ.

ಪತ್ರಿಕೋದ್ಯಮದಲ್ಲಿ ಸುಮಾರು ಎರಡು ದಶಕಗಳನ್ನು ಕಳೆದಿರುವ ಕುಲಕರ್ಣಿ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ದೂರು ಸಲ್ಲಿಸಿ, ರಾಜ್ಯದ ನಿರ್ಧಾರವನ್ನು ವಿರೋಧಿಸಿದ್ದರು. ಅವರು ಮಾಡಿದ್ದ ಸುದ್ಧಿ, ರೈಲ್ವೆ ಇಲಾಖೆಯಿಂದ ದೊರೆತ ವಿಶ್ವಾಸಾರ್ಹ ಅಧಿಕೃತ ಮೂಲವನ್ನು ಆಧರಿಸಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸರು ಮತ್ತು ಗೃಹ ಇಲಾಖೆ ಸುದ್ದಿಯ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ಆಸಕ್ತಿ ತೋರದೆ ನನ್ನನ್ನು ಬಂಧಿಸಿದ್ದರು. ಬಾಂದ್ರಾ  ನಿಲ್ದಾಣದಿಂದ ಯಾವುದೇ ಹೊರ ರಾಜ್ಯದ ರೈಲುಗಳನ್ನು ಓಡಿಸುವುದಿಲ್ಲ ಎಂದು ಮುಂಬೈ ನಲ್ಲಿರುವ ಯಾರಿಗಾದರೂ ತಿಳಿದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಲಸೆಗಾರರ ​​ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ತನ್ನ ತಪ್ಪನ್ನು ಒಪ್ಪಿಕೊಳ್ಳುವ ಬದಲು, ನನ್ನನ್ನು ಬಲಿಪಶುವನ್ನಾಗಿ ಮಾಡಿ, ಬಂಧಿಸುವ ಮೂಲಕ ಅವಮಾನಿಸಿದೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: Fact check: ಮುಂಬೈ ರೈಲ್ವೇ ನಿಲ್ದಾಣದಲ್ಲಿ ವಲಸಿಗರು ಸೇರಲು ಮಸೀದಿ ಕಾರಣವೇ? ಎಬಿಪಿ ಸುದ್ದಿ ಮಾಡಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...