Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...