Homeಮುಖಪುಟರಾಜಸ್ಥಾನ ಬಿಕ್ಕಟ್ಟು ; 200 ಮಂದಿ ಶಾಸಕರಿಗೂ ಪತ್ರ ಬರೆದ ಮುಖ್ಯಮಂತ್ರಿ ಗೆಹ್ಲೋಟ್

ರಾಜಸ್ಥಾನ ಬಿಕ್ಕಟ್ಟು ; 200 ಮಂದಿ ಶಾಸಕರಿಗೂ ಪತ್ರ ಬರೆದ ಮುಖ್ಯಮಂತ್ರಿ ಗೆಹ್ಲೋಟ್

ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಗೆಹ್ಲೋಟ್, ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

- Advertisement -
- Advertisement -

ವಿಧಾನಸಭೆ ಅಧಿವೇಶನ ಸಮೀಪಿಸುತ್ತಿರುವ ನಡುವೆಯೇ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರಾಜ್ಯದ ಎಲ್ಲಾ 200 ಮಂದಿ ಶಾಸಕರಿಗೆ ಸತ್ಯದ ಪರ ನಿಲ್ಲುವಂತೆ ಹಾಗೂ ಪ್ರಜಾಪ್ರಭುತ್ವ ರಕ್ಷಿಸಬೇಕೆಂದು ಬಹಿರಂಗ ಪತ್ರ ಬರೆದಿದ್ದಾರೆ.

ಕಾಂಗ್ರೆಸ್, ಬಿಜೆಪಿ ಮತ್ತು ಇತರೆ ಪಕ್ಷಗಳ ಶಾಸಕರಿಗೆ ಪತ್ರ ಬರೆದಿರುವ ಗೆಹ್ಲೋಟ್, ಕೆಟ್ಟ ಸಂಪ್ರದಾಯಕ್ಕೆ ಅಂತ್ಯ ಹಾಡಬೇಕು ಮತ್ತು ಪ್ರಜಾಪ್ರಭುತ್ವ ಮಾದರಿಯಲ್ಲಿ ಆಯ್ಕೆಯಾದ ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ವಿಫಲಗೊಳಿಸಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ.

ಪ್ರಜಾಪ್ರಭುತ್ವವನ್ನು ರಕ್ಷಿಸುವಂತೆ ಎಲ್ಲರಿಗೂ ಮನವಿ ಮಾಡುತ್ತೇವೆ. ನಮ್ಮ ಮೇಲೆ ಜನರು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸವನ್ನು ಉಳಿಸಿಕೊಳ್ಳಬೇಕು, ಮತ್ತು ಕೆಟ್ಟ ಸಂಪ್ರದಾಯವನ್ನು ದೂರವಿಡಬೇಕು. ಜನರ ಅಭಿಪ್ರಾಯ ಕೇಳಬೇಕು ಎಂದು ಸಲಹೆ ನೀಡಿದ್ದಾರೆ.

ನೀವು ಯಾವುದೇ ಪಕ್ಷದಲ್ಲಿರಿ, ಆದರೆ ಜನರ ಭಾವನೆಗಳನ್ನು ಗೌರವಿಸಿ. ಸತ್ಯವನ್ನು ಮನಸ್ಸಿನಲ್ಲಿಟ್ಟುಕೊಂಡು ಜನರಿಂದ ಆಯ್ಕೆಯಾದ ಸರ್ಕಾರ ಜನರಿಗೆ ಹೇಗೆ ಕೆಲಸ ಮಾಡಿಕೊಡಬೇಕೆಂಬ ಬಗ್ಗೆ ಚಿಂತನೆ ನಡೆಸಬೇಕು ಎಂಬ ಬಗ್ಗೆ ಆಲೋಚಿಸಿರಿ ಎಂದು ಮನವಿ ಮಾಡಿದ್ದಾರೆ.

2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ರಾಜಸ್ಥಾನ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿರುವ ಗೆಹ್ಲೋಟ್, ಕೊರೊನಾ ಸಂದರ್ಭದಲ್ಲಿ ಸರ್ಕಾರ ಅದರ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಆರ್ಥಿಕತೆಯನ್ನು ಬಲಪಡಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೊರೊನ ಸೋಂಕು ವಿರುದ್ಧ ಹೋರಾಟ ನಡೆಸುತ್ತಿರುವ ಸಂದರ್ಭದಲ್ಲೇ ನಮ್ಮ ಸ್ವಂತ ಜನರು ಪ್ರತಿಪಕ್ಷ ಬಿಜೆಪಿ ಮುಖಂಡರೊಂದಿಗೆ ಸೇರಿಕೊಂಡು ಜನರಿಂದ ಆಯ್ಕೆಯಾದ ಸರ್ಕಾರವನ್ನು ಅಸ್ಥಿರ ಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಸಚಿನ್ ಪೈಲಟ್ ಸೇರಿ 19 ಕಾಂಗ್ರೆಸ್ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ಧ ಬಂಡಾಯ ಎದ್ದಿರುವ ಹಿನ್ನೆಲೆಯಲ್ಲಿ ರಾಜಸ್ಥಾನದ ವಿಧಾನಸಭೆ ಅಧಿವೇಶನ ಆಗಸ್ಟ್ 14 ರಂದು ನಡೆಯಲಿದೆ.

ಅಧಿವೇಶನದ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಹಲವು ಶಾಸಕರನ್ನು ಗುಜರಾತ್‌ನ ರೆಸಾರ್ಟ್‌ಗೆ ರವಾನಿಸುತ್ತಿದೆ.

ಗೆಹ್ಲೊಟ್ ಬರೆದಿರುವ ಬಹಿರಂಗ ಪತ್ರದಲ್ಲಿ ವಿಶ್ವಾಸಮತ ಯಾಚಿಸುವ ಕುರಿತು ಯಾವುದೇ ಉಲ್ಲೇಖ ಮಾಡಿಲ್ಲ. ಆದರೆ ಬಿಜೆಪಿ ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದು ಸರ್ಕಾರ ಉರುಳಿಸಲು ಪಿತೂರಿ ನಡೆಸಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ರಾಜಸ್ಥಾನ ಬಿಕ್ಕಟ್ಟು: ಅಧಿವೇಶನ ಕರೆಯಲು ಆಗ್ರಹಿಸಿ ತಡರಾತ್ರಿವರೆಗೂ ಪ್ರತಿಭಟನೆ – 102 ಶಾಸಕರ ಪಟ್ಟಿ ರವಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...