Homeಅಂತರಾಷ್ಟ್ರೀಯಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಕೊರೊನಾ ಸಾಮುದಾಯಿಕ ಸೋಂಕು ಪ್ರಸರಣವಿಲ್ಲದೇ 100 ದಿನ ಪೂರೈಸಿದ ನ್ಯೂಜಿಲ್ಯಾಂಡ್

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

- Advertisement -
- Advertisement -

ಸಮುದಾಯದಲ್ಲಿ ಸೋಂಕು ಪ್ರಸರಣವಿಲ್ಲದೇ 100 ದಿನಗಳನ್ನು ಪೂರೈಸಿ ನ್ಯೂಜಿಲ್ಯಾಂಡ್ ಮಹತ್ವದ ಮೈಲಿಗಲ್ಲನ್ನು ಸೃಷ್ಟಿಸಿದೆ. ಆದರೆ ಈಗಲೇ ತೃಪ್ತಿಪಡುವಂತಿಲ್ಲ ಎಂದು ಆರೋಗ್ಯ ಅಧಿಕಾರಗಳು ಎಚ್ಚರಿಸಿದ್ದಾರೆ.

ಸದ್ಯಕ್ಕೆ ವಿದೇಶಿಗರು ನ್ಯೂಜಿಲ್ಯಾಂಡನ್ನು ಪ್ರವೇಶಿಸುವಾಗ ಹೊಸದಾಗಿ 23 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು ಅವರನ್ನು ಪ್ರತ್ಯೇಕ ಸೌಲಭ್ಯ ಕೇಂದ್ರಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

“ಸಮುದಾಯ ಪ್ರಸರಣವಿಲ್ಲದೆ 100 ದಿನಗಳನ್ನು ಪೂರೈಸುವುದು ಮಹತ್ವದ ಮೈಲಿಗಲ್ಲು. ಆದರೂ ನಾವೆಲ್ಲರೂ ತಿಳಿದಿರುವಂತೆ ಇಷ್ಟಕ್ಕೆ ನಾವು ತೃಪ್ತಿ ಹೊಂದಲು ಸಾಧ್ಯವಿಲ್ಲ” ಎಂದು ಆರೋಗ್ಯ ಮಹಾನಿರ್ದೇಶಕ ಆಶ್ಲೇ ಬ್ಲೂಮ್‌ಫೀಲ್ಡ್ ಹೇಳಿದ್ದಾರೆ.

“ಈ ಹಿಂದೆ ವೈರಸ್ ನಿಯಂತ್ರಣದಲ್ಲಿದ್ದ ಸ್ಥಳಗಳಲ್ಲಿ ವೈರಸ್ ಎಷ್ಟು ಬೇಗನೆ ಮತ್ತೆ ಹರಡಬಹುದು ಎಂಬುದನ್ನು ನಾವು ವಿದೇಶಗಳಲ್ಲಿ ನೋಡಿದ್ದೇವೆ. ಹಾಗಾಗಿ ನ್ಯೂಜಿಲೆಂಡ್‌ನಲ್ಲಿ ಭವಿಷ್ಯದ ಯಾವುದೇ ಪ್ರಕರಣಗಳನ್ನು ತ್ವರಿತವಾಗಿ ನಿವಾರಿಸಲು ನಾವು ಸಿದ್ಧರಾಗಿರಬೇಕು” ಎಂದು ಅವರು ಹೇಳಿದ್ದಾರೆ.

50 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನ್ಯೂಜಿಲೆಂಡ್, ಮಾರ್ಚ್ 19 ರಂದು ತನ್ನ ಗಡಿಗಳನ್ನು ನಿರ್ಬಂಧಿಸಿದಾಗಿನಿಂದ ಕೊರೊನಾ ವೈರಸ್ ಅನ್ನು ಪರಿಣಾಮಕಾರಿಯಾಗಿ ನಿರ್ವಹಿಸಿದ್ದಕ್ಕಾಗಿ ಜಗತ್ತಿನಾದ್ಯಂತ ವ್ಯಾಪಕ ಪ್ರಶಂಸೆ ಗಳಿಸಿದೆ.

ಸಮುದಾಯ ಪ್ರಸರಣವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಈ ದೇಶವನ್ನು ಇತರೆ ದೇಶಗಳಿಗೆ ಮಾದರಿಯೆಂದು ಶ್ಲಾಘಿಸಿದೆ.

ಫೆಬ್ರವರಿಯಲ್ಲಿ ಮೊದಲ ಸೋಂಕಿತನನ್ನು ಪತ್ತೆಹಚ್ಚಿದಾಗಿನಿಂದ, ನ್ಯೂಜಿಲೆಂಡ್‌ನಲ್ಲಿ 1,569 ವೈರಸ್‌ ಪ್ರಕರಣಗಳು ದೃಢಪಟ್ಟಿದ್ದು, 1524 ಜನ ಚೇತರಿಸಿಕೊಂಡಿದ್ದಾರೆ. 22 ಸಾವುಗಳು ವರದಿಯಾಗಿದ್ದು, 23 ಸಕ್ರಿಯ ಪ್ರಕರಣಗಳಿವೆ. ಮೇ 1 ಸಮುದಾಯ ಪ್ರಸರಣದ ಕೊನೆಯ ಪ್ರಕರಣ ದಾಖಲಾಗಿದೆ. ಅಂದಿನಿಂದ ಇಂದಿನವರೆಗೂ ಸಮುದಾಯ ಹರಡುವಿಕೆಯನ್ನು ನ್ಯೂಜಿಲೆಂಡ್ ಪರಿಣಾಮಕಾರಿಯಾಗಿ ನಿಭಾಯಿಸಿದೆ.

ಇದರ ಫಲವಾಗಿ, ನ್ಯೂಜಿಲೆಂಡ್‌ ಜನತೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ ಮತ್ತು ಪ್ರೇಕ್ಷಕರಿಗೆ ತೊಂದರೆಯಿಲ್ಲದೇ, ಕೊರೊನಾ ಸಾಂಕ್ರಾಮಿಕದ ಪೂರ್ವ ಜೀವನ ಶೈಲಿಯನ್ನೇ ಮರಳಿ ಪಡೆದಿದ್ದಾರೆ.

ಆದರೆ ಗಡಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತಿದೆ. ಹೊರಗಿನಿಂದ ಬರುವ ಎಲ್ಲರೂ 14 ದಿನಗಳ ಸಂಪರ್ಕತಡೆಯಲ್ಲಿರಬೇಕಾದ ನಿಬಂಧನೆಗಳನ್ನು ವಿಧಿಸಲಾಗಿದೆ.

ಅಲ್ಲಿನ ಸರ್ಕಾರವು ಎರಡನೇ ಅಲೆಯ ನಿರೀಕ್ಷೆಯನ್ನಿಟ್ಟುಕೊಂಡಿದೆ. ಹಾಗಾಗಿ ಎಲ್ಲಾ ಮನೆಗಳಿಗೆ ಮಾಸ್ಕ್ ಸೇರಿದಂತೆ ತುರ್ತು ಪೂರೈಕೆ ಕಿಟ್‌ಗಳನ್ನು ಇರಿಸಿಕೊಳ್ಳಲು ಒತ್ತಾಯಿಸಿದೆ.


ಇದನ್ನೂ ಓದಿ: ನ್ಯೂಜಿಲೆಂಡ್: ಕೊರೊನಾ ವಿರುದ್ದದ ಸಮರದಲ್ಲಿ ಗೆಲುವಿನತ್ತ ದಾಪುಗಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...