Homeಕರೋನಾ ತಲ್ಲಣಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷಾ ಶುಲ್ಕ ಭರಿಸಲು ಆಗಸ್ಟ್ 15ರಂದು ಕೊನೆಯ ದಿನಾಂಕ ಎಂದು ಘೋಷಿಸಿದೆ. ಅಲ್ಲದೇ ಹೊಸ ಶೈಕ್ಷಣಿಕ ವರ್ಷದ ಕಾಲೇಜು ದಾಖಲಾತಿ ಶುಲ್ಕವನ್ನು ಭರಿಸಲು ಹೇಳಿದೆ.

ವಿವಿಯ ಈ ನಿಲುವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಖಂಡಿಸಿದೆ. ಕೂಡಲೇ ವಿವಿಯು ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲಿದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಇಡೀ ಪ್ರಪಂಚವನ್ನೇ ಭಯಾನಕವಾಗಿ ಕಾಡಿಸುತ್ತಿದೆ. ಭಾರತ ಕರೋನಾದಲ್ಲಿ ಸೋಂಕಿತರ ಪಟ್ಟಿಯಲ್ಲಿ ವಿಶ್ವಗುರು ಆಗುವತ್ತ ಸಾಗಿದೆ. ಇನ್ನು ಯಾವುದೇ ತಯಾರಿ ಇಲ್ಲದೆ ಮೇಲಿಂದ ಮೇಲೆ ಹೇರಿದ ಲಾಕ್‌ಡೌನ್‌ನಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರೈತರು, ಬೀದಿ ವ್ಯಾಪಾರಿಗಳ ಕುಟುಂಬಗಳು ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭವನ್ನು ಅವಕಾಶ ಎಂಬಂತೆ ಖಾಸಗೀ ಸಂಸ್ಥೆಗಳು ಬಳಸಿಕೊಳ್ಳುತ್ತಿರುವುದು ವಿಷಾಧನೀಯ. ಇದೇ ದಾರಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅನುಸರಿಸುವುದು ಎಂದರೆ ಏನರ್ಥ? ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಈ ಸಮಯದಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಎಂದು ಕೆವಿಎಸ್ ರಾಜ್ಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಮೊದಲ ಸುತ್ತಿನ ಲಾಕ್ ಡೌನ್ ಘೋಷಣೆ ಆದಾಗಲೇ ‘ಪರೀಕ್ಷಾ ಶುಲ್ಕ ಮತ್ತು ಈ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ವಿದ್ಯಾರ್ಥಿ/ಪೋಷಕರಿಂದ ಪಡೆಯದೇ ಸರ್ಕಾರವೇ ಭರಿಸಬೇಕು ಅಥವಾ ಶುಲ್ಕ ಕಡಿಮೆಗೊಳಿಸಿ ಹೆಚ್ಚಿನ ಕಲಾವಾಕಾಶ ನೀಡಿ ಕಂತುಗಳಲ್ಲಿ ಶುಲ್ಕ ಪಡೆಯಬೇಕು ಎಂದು’ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಒತ್ತಾಯಿಸಿದ್ದೆವು. ಆದರೆ ಇದನ್ನು ಕಿವಿಗೆ ಹಾಕಿಕೊಳ್ಳದೆ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ-ಪೋಷಕರ ಸುಲಿಗೆಗೆ ನಿಂತಿದೆ! ಇದರಿಂದಾಗಿ ಪೋಷಕರು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಗಾಗಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಮ್ ಕೇರ್ಸ್ ಗೆ ದೇಶದ ಜನರು ನೀಡಿದ ಕೋಟ್ಯಾಂತರ ರೂಪಾಯಿಗಳು ಏನಾದವು? ಕೊರೊನಾ ವಿಶೇಷ ಪ್ಯಾಕೇಜ್ ಎಂದು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ವಿದ್ಯಾರ್ಥಿಗಳಿಗೆ ಏನು ಇಲ್ಲವೆ?, ವಿದ್ಯಾರ್ಥಿಗಳಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...