Homeಮುಖಪುಟಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿಮಾನ ನಿಲ್ದಾಣದಲ್ಲಿನ ಅಧಿಕಾರಿಯೊಬ್ಬರು ನಾನು ಹಿಂದಿಯಲ್ಲಿ ಮಾತನಾಡದ ಕಾರಣಕ್ಕೆ ‘ನೀವು ಭಾರತೀಯರೆ’ ಎಂದು ಪ್ರಶ್ನಿಸಿದ್ದಾರೆ. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ? ಇದು ಯಾವಾಗಿನಿಂದ ಆಗಿದೆ ಎಂದು ತಮಿಳುನಾಡಿ ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನಿಸಿದ ಬೆನ್ನಲ್ಲೇ ಹಿಂದಿ ಹೇರಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಕುರಿತು ಕರ್ನಾಟಕದಲ್ಲಿಯೂ ಚರ್ಚೆಗಳು ಆರಂಭವಾಗಿದ್ದು, ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ “ಭಾಷೆ ಕಾರಣಕ್ಕೆ ಡಿಎಂಕೆ ಸಂಸದೆ ಕನಿಮೊಳಿಯವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೊಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ” ಎಂದಿದ್ದಾರೆ.

ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ, ಸಮಾನ ಭಾಷಾ ನೀತಿಗಾಗಿ, ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶದ ಪ್ರತಿಯೊಬ್ಬ ಪ್ರಜೆಯು ತನ್ನ ಭಾಷೆಯಲ್ಲಿ ಮಾಹಿತಿಯನ್ನು ಪಡೆಯುವುದು ಅವನ/ಳ ಮೂಲಭೂತ ಹಕ್ಕು. ಜನರ ಭಾಷೆಯಲ್ಲಿ ಮಾಹಿತಿ ಪಡೆಯುವುದಕ್ಕೆ ಕಾನೂನು ಬೇಕು, ಹೋರಾಟ ಬೇಕು ಎಂದರೆ ಅದು ಪ್ರಜಾಪ್ರಭುತ್ವ ದೇಶವೇ? ಹೈಕೋರ್ಟ್ ಮೂರು ಬಾರಿ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ನೀಡಿದೆ ಎಂದು ಆದೇಶ ನೀಡಿದರೂ ಕೇಂದ್ರ ಸರ್ಕಾರ ವಿಧಿ 343ರ ಅಡಿಯಲ್ಲಿ ನಾವು ಮಾಹಿತಿ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ವಿಧಿ 343 ರಿಂದ 351 ರವರೆಗೆ ಹಿಂದಿ ಭಾಷೆಗೆ ಹೆಚ್ಚುಗಾರಿಕೆ ನೀಡಲಾಗಿದೆ. ಅಲ್ಲಿಂದಲೇ ಇತರ ಭಾಷೆಗಳ ಕಡೆಗಣಿಸುವಿಕೆ ಆರಂಭವಾಗಿದೆ. ಇದು ಹಿಂದಿಯೇತರರನ್ನು ತಮ್ಮ ಅಡಿಯಾಳನ್ನಾಗಿ ಮಾಡಿಕೊಳ್ಳುವ ಉತ್ತರ ಭಾರತ ರಾಜಕೀಯದ ಸ್ಪಷ್ಟ ಹುನ್ನಾರ. ಹಾಗಾಗಿ ಹಿಂದಿಯೇತರ ಸಂಸದರು ಈ ವಿಧಿಗಳ ತಿದ್ದುಪಡಿಗೆ ಹೋರಾಡುವುದೊಂದೆ ಶಾಶ್ವತ ಪರಿಹಾರ” ಎಂದಿದ್ದಾರೆ.

ಏಕತೆ ಎಂಬುದು ಭಾಷಾ ಸಮಾನತೆಯಲ್ಲಿದೆ. ಹಿಂದಿ ಹೇರಿಕೆಯಲ್ಲಿಲ್ಲ ಎಂಬ ಪೋಸ್ಟರ್

ಇನ್ನು ಈ ಕುರಿತು ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪಿ ಚಿದಂಬರಂ ಸರಣಿ ಟ್ವೀಟ್‌ಗಳನ್ನು ಮಾಡಿ ‘ಚನ್ನೈ ವಿಮಾನ ನಿಲ್ದಾಣದಲ್ಲಿ ಕನಿಮೊಳಿಯವರಿಗಾಗಿರುವ ಈ ಅಹಿತಕರ ಅನುಭವವು ಸಾಮಾನ್ಯವಾದುದ್ದಲ್ಲ’ ಎಂದಿದ್ದಾರೆ.

ಕೆಲವು ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ, ಕೆಲವು ಸಾಮಾನ್ಯ ಜನರೊಂದಿಗೆ ಫೋನಿನಲ್ಲಿ ಮಾತನಾಡುವಾಗ, ಕೆಲವೊಮ್ಮೆ ನೇರವಾಗಿಯೂ ಹಿಂದಿಯಲ್ಲಿಯೇ ಮಾತನಾಡುವಂತೆ ಒತ್ತಡ ಹಾಕುವ ಇದೇ ರೀತಿಯ ಹಲವು ಅಹಿತಕರ ಅನುಭವಗಳು ನನಗೂ ಆಗಿವೆ ಎಂದು ಚಿದಂಬರಂ ತಿಳಿಸಿದ್ದಾರೆ.

ಭಾನುವಾರ ಚನ್ನೈ ವಿಮಾನ ನಿಲ್ದಾಣದಲ್ಲಿ ತನಗೆ ಹಿಂದಿ ಬಾರದ ಕಾರಣ ಇಂಗ್ಲಿಷ್ ಇಲ್ಲವೇ ತಮಿಳಿನಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ನೀವು ಭಾರತೀಯರೆ ಎಂದು ಸಿಐಎಸ್ಎ‌ಫ್ ಭದ್ರತಾ ಅಧಿಕಾರಿ ಪ್ರಶ್ನಿಸಿದ್ದಾರೆ ಎಂದು ಡಿಎಂಕೆ ಸಂಸದೆ ಕನಿಮೊಳಿ ಆರೋಪಿಸಿದ್ದರು. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ ಎಂದು ಅವರು ಕಿಡಿಕಾರಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಪಿ.ಚಿದಂಬರಂ ಸರ್ಕಾರವು ತನ್ನ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಸಲಹೆ ನೀಡಿದ್ದಾರೆ.

ಉತ್ತರ ಭಾರತದಲ್ಲಿ ಹಿಂದಿ ಹೇರಿಕೆಯ ವಿರುದ್ಧ ದನಿ.

ಕೇಂದ್ರ ಸರ್ಕಾರಕ್ಕೆ ಹಿಂದಿ ಮತ್ತು ಇಂಗ್ಲಿಷ್ ಎರಡೂ ಅಧಿಕೃತ ಭಾಷೆಗಳೆಂಬ ನಿಜವಾದ ಕಾಳಜಿಯಿದ್ದರೆ ಅದು ಕೇಂದ್ರದ ಅಡಿಯಲ್ಲಿ ಬರುವ ಎಲ್ಲಾ ಉದ್ಯೋಗಿಗಳಿಗೂ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಹಿಂದಿಯೇತರರು ಕೇಂದ್ರೀಯ ಹುದ್ದೆಗಳಿಗೆ ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಸ್ಪೋಕನ್ ಹಿಂದಿಯನ್ನು ಕೂಡಲೇ ಕಲಿತುಕೊಳ್ಳುತ್ತಾರೆ. ಆದರೆ ಹಿಂದಿ ಭಾಷಿಕರು ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಇತರ ಭಾಷೆಗಳನ್ನು, ಸ್ಪೋಕನ್ ಇಂಗ್ಲಿಷ್‌ ಅನ್ನು ಕಲಿಯಬಾರದೇಕೆ?” ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಈ ಸಮಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿಯೆದ್ದಿದೆ. “ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಬಂಗಾಳಿ ಭಾಷೆಯನ್ನು ಗೌರವಿಸಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ” ಎನ್ನುವ ಪೋಸ್ಟರ್‌ ಇರುವ ಫೋಟೊವೊಂದು ವೈರಲ್ ಆಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಬೇಕು, ಕನ್ನಡವನ್ನು ಗೌರವಿಸಿ, ಇಲ್ಲ ಜಾಗ ಖಾಲಿ ಮಾಡಿ ಎಂದು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.

ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೊಷ್ ಹಿಂದಿ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಕನಿಮೊಳಿಯವರಿಗೆ ತೀಕ್ಷ್ಣ ಪ್ರತಿಕ್ರಿಯೆ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಮೀಕರಿಸಿರುವ ಅವರು, ಇನ್ನು 8 ತಿಂಗಳಿನಲ್ಲಿ ರಾಜ್ಯ ಚುನಾವಣೆಯಿದೆ… ಆಗಲೇ ಪ್ರಚಾರ ಆರಂಭವಾಗಿದೆ.. ಎಂದು ಟೀಕಿಸಿದ್ದಾರೆ.

ಕಳೆದ ವರ್ಷ ಕರ್ನಾಟಕದಲ್ಲಿ ಸೆಪ್ಟಂಬರ್ 14 ರಂದು ಹಿಂದಿ ದಿವಸ್ ವಿರೋದಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟಿಸಿರುವುದು.

ಒಟ್ಟಿನಲ್ಲಿ ಹಿಂದಿ ಹೇರಿಕೆ ಸರಿಯೇ ತಪ್ಪೇ ಎಂಬುದರ ಕುರಿತು ಚರ್ಚೆಗಳು ದೊಡ್ಡ ಮಟ್ಟದಲ್ಲಿ ಆರಂಭವಾಗಿವೆ. ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯ ಮೂಲಕ ತ್ರಿಭಾಷಾ ಸೂತ್ರ ಜಾರಿಗೊಳಿಸಲು ಮುಂದಾದಾಗ ಬಿಜೆಪಿ ಮಿತ್ರಪಕ್ಷ ಎಐಡಿಎಂಕೆ ಅದನ್ನು ತೀವ್ರವಾಗಿ ವಿರೋಧಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅದನ್ನು ನೋವಿನ ಮತ್ತು ದುಃಖಕರ ಸಂಗತಿ ಎಂದು ಕರೆದಿದ್ದು, ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಸಾರಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...