Homeಮುಖಪುಟಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ವಿಮಾನ ನಿಲ್ದಾಣದಲ್ಲಿನ ಅಧಿಕಾರಿಯೊಬ್ಬರು ನಾನು ಹಿಂದಿಯಲ್ಲಿ ಮಾತನಾಡದ ಕಾರಣಕ್ಕೆ ‘ನೀವು ಭಾರತೀಯರೆ’ ಎಂದು ಪ್ರಶ್ನಿಸಿದ್ದಾರೆ. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ? ಇದು ಯಾವಾಗಿನಿಂದ ಆಗಿದೆ ಎಂದು ತಮಿಳುನಾಡಿ ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನಿಸಿದ ಬೆನ್ನಲ್ಲೇ ಹಿಂದಿ ಹೇರಿಕೆಯ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಕುರಿತು ಕರ್ನಾಟಕದಲ್ಲಿಯೂ ಚರ್ಚೆಗಳು ಆರಂಭವಾಗಿದ್ದು, ಒಬ್ಬ ಸಂಸದೆಗೆ ಇಷ್ಟು ಸಮಸ್ಯೆಯಾದರೆ ಜನಸಾಮಾನ್ಯರು ದಿನನಿತ್ಯ ಎಷ್ಟು ಅವಮಾನ ಅನುಭವಿಸಬೇಕು ಯೋಚಿಸಿ, ಅದಕ್ಕಾಗಿಯೇ ಈ ಹಿಂದಿ ಹೇರಿಕೆ ಬೇಡ ಎಂದು ಹಲವಾರು ಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿ “ಭಾಷೆ ಕಾರಣಕ್ಕೆ ಡಿಎಂಕೆ ಸಂಸದೆ ಕನಿಮೊಳಿಯವರನ್ನು ‘ನೀವು ಭಾರತೀಯರೇ?’ ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಸೋದರಿ ಕನಿಮೊಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ. ಇದೇ ಹೊತ್ತಲ್ಲೇ, ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ” ಎಂದಿದ್ದಾರೆ.

ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ, ಸಮಾನ ಭಾಷಾ ನೀತಿಗಾಗಿ, ಒಕ್ಕೂಟ ವ್ಯವಸ್ಥೆಯ ಬಲವರ್ಧನೆಯ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಅರುಣ್ ಜಾವಗಲ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ದೇಶದ ಪ್ರತಿಯೊಬ್ಬ ಪ್ರಜೆಯು ತನ್ನ ಭಾಷೆಯಲ್ಲಿ ಮಾಹಿತಿಯನ್ನು ಪಡೆಯುವುದು ಅವನ/ಳ ಮೂಲಭೂತ ಹಕ್ಕು. ಜನರ ಭಾಷೆಯಲ್ಲಿ ಮಾಹಿತಿ ಪಡೆಯುವುದಕ್ಕೆ ಕಾನೂನು ಬೇಕು, ಹೋರಾಟ ಬೇಕು ಎಂದರೆ ಅದು ಪ್ರಜಾಪ್ರಭುತ್ವ ದೇಶವೇ? ಹೈಕೋರ್ಟ್ ಮೂರು ಬಾರಿ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ನೀಡಿದೆ ಎಂದು ಆದೇಶ ನೀಡಿದರೂ ಕೇಂದ್ರ ಸರ್ಕಾರ ವಿಧಿ 343ರ ಅಡಿಯಲ್ಲಿ ನಾವು ಮಾಹಿತಿ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ವಿಧಿ 343 ರಿಂದ 351 ರವರೆಗೆ ಹಿಂದಿ ಭಾಷೆಗೆ ಹೆಚ್ಚುಗಾರಿಕೆ ನೀಡಲಾಗಿದೆ. ಅಲ್ಲಿಂದಲೇ ಇತರ ಭಾಷೆಗಳ ಕಡೆಗಣಿಸುವಿಕೆ ಆರಂಭವಾಗಿದೆ. ಇದು ಹಿಂದಿಯೇತರರನ್ನು ತಮ್ಮ ಅಡಿಯಾಳನ್ನಾಗಿ ಮಾಡಿಕೊಳ್ಳುವ ಉತ್ತರ ಭಾರತ ರಾಜಕೀಯದ ಸ್ಪಷ್ಟ ಹುನ್ನಾರ. ಹಾಗಾಗಿ ಹಿಂದಿಯೇತರ ಸಂಸದರು ಈ ವಿಧಿಗಳ ತಿದ್ದುಪಡಿಗೆ ಹೋರಾಡುವುದೊಂದೆ ಶಾಶ್ವತ ಪರಿಹಾರ” ಎಂದಿದ್ದಾರೆ.

ಏಕತೆ ಎಂಬುದು ಭಾಷಾ ಸಮಾನತೆಯಲ್ಲಿದೆ. ಹಿಂದಿ ಹೇರಿಕೆಯಲ್ಲಿಲ್ಲ ಎಂಬ ಪೋಸ್ಟರ್

ಇನ್ನು ಈ ಕುರಿತು ಇಂದು ಬೆಳಿಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪಿ ಚಿದಂಬರಂ ಸರಣಿ ಟ್ವೀಟ್‌ಗಳನ್ನು ಮಾಡಿ ‘ಚನ್ನೈ ವಿಮಾನ ನಿಲ್ದಾಣದಲ್ಲಿ ಕನಿಮೊಳಿಯವರಿಗಾಗಿರುವ ಈ ಅಹಿತಕರ ಅನುಭವವು ಸಾಮಾನ್ಯವಾದುದ್ದಲ್ಲ’ ಎಂದಿದ್ದಾರೆ.

ಕೆಲವು ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ, ಕೆಲವು ಸಾಮಾನ್ಯ ಜನರೊಂದಿಗೆ ಫೋನಿನಲ್ಲಿ ಮಾತನಾಡುವಾಗ, ಕೆಲವೊಮ್ಮೆ ನೇರವಾಗಿಯೂ ಹಿಂದಿಯಲ್ಲಿಯೇ ಮಾತನಾಡುವಂತೆ ಒತ್ತಡ ಹಾಕುವ ಇದೇ ರೀತಿಯ ಹಲವು ಅಹಿತಕರ ಅನುಭವಗಳು ನನಗೂ ಆಗಿವೆ ಎಂದು ಚಿದಂಬರಂ ತಿಳಿಸಿದ್ದಾರೆ.

ಭಾನುವಾರ ಚನ್ನೈ ವಿಮಾನ ನಿಲ್ದಾಣದಲ್ಲಿ ತನಗೆ ಹಿಂದಿ ಬಾರದ ಕಾರಣ ಇಂಗ್ಲಿಷ್ ಇಲ್ಲವೇ ತಮಿಳಿನಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ನೀವು ಭಾರತೀಯರೆ ಎಂದು ಸಿಐಎಸ್ಎ‌ಫ್ ಭದ್ರತಾ ಅಧಿಕಾರಿ ಪ್ರಶ್ನಿಸಿದ್ದಾರೆ ಎಂದು ಡಿಎಂಕೆ ಸಂಸದೆ ಕನಿಮೊಳಿ ಆರೋಪಿಸಿದ್ದರು. ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ ಎಂದು ಅವರು ಕಿಡಿಕಾರಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಪಿ.ಚಿದಂಬರಂ ಸರ್ಕಾರವು ತನ್ನ ಅಧಿಕಾರಿಗಳಿಗೆ, ಉದ್ಯೋಗಿಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಸಲಹೆ ನೀಡಿದ್ದಾರೆ.

ಉತ್ತರ ಭಾರತದಲ್ಲಿ ಹಿಂದಿ ಹೇರಿಕೆಯ ವಿರುದ್ಧ ದನಿ.

ಕೇಂದ್ರ ಸರ್ಕಾರಕ್ಕೆ ಹಿಂದಿ ಮತ್ತು ಇಂಗ್ಲಿಷ್ ಎರಡೂ ಅಧಿಕೃತ ಭಾಷೆಗಳೆಂಬ ನಿಜವಾದ ಕಾಳಜಿಯಿದ್ದರೆ ಅದು ಕೇಂದ್ರದ ಅಡಿಯಲ್ಲಿ ಬರುವ ಎಲ್ಲಾ ಉದ್ಯೋಗಿಗಳಿಗೂ ಹಿಂದಿ ಮತ್ತು ಇಂಗ್ಲಿಷ್‌ ಎರಡು ಭಾಷೆಯಲ್ಲಿಯೂ ವ್ಯವಹರಿಸುವಂತೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.

“ಹಿಂದಿಯೇತರರು ಕೇಂದ್ರೀಯ ಹುದ್ದೆಗಳಿಗೆ ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಸ್ಪೋಕನ್ ಹಿಂದಿಯನ್ನು ಕೂಡಲೇ ಕಲಿತುಕೊಳ್ಳುತ್ತಾರೆ. ಆದರೆ ಹಿಂದಿ ಭಾಷಿಕರು ಆಯ್ಕೆಯಾದಾಗ ವ್ಯವಹರಿಸಲು ಸಾಧ್ಯವಾಗುವ ಇತರ ಭಾಷೆಗಳನ್ನು, ಸ್ಪೋಕನ್ ಇಂಗ್ಲಿಷ್‌ ಅನ್ನು ಕಲಿಯಬಾರದೇಕೆ?” ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಇನ್ನು ಕರ್ನಾಟಕದಲ್ಲಿಯೂ ಈ ಸಮಯದಲ್ಲಿ ಹಿಂದಿ ಹೇರಿಕೆ ವಿರುದ್ಧ ದನಿಯೆದ್ದಿದೆ. “ಹಿಂದಿ ನಮ್ಮ ರಾಷ್ಟ್ರೀಯ ಭಾಷೆಯಲ್ಲ, ಬಂಗಾಳಿ ಭಾಷೆಯನ್ನು ಗೌರವಿಸಿ ಇಲ್ಲದಿದ್ದರೆ ಜಾಗ ಖಾಲಿ ಮಾಡಿ” ಎನ್ನುವ ಪೋಸ್ಟರ್‌ ಇರುವ ಫೋಟೊವೊಂದು ವೈರಲ್ ಆಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ಪೋಸ್ಟರ್‌ಗಳನ್ನು ಅಂಟಿಸಬೇಕು, ಕನ್ನಡವನ್ನು ಗೌರವಿಸಿ, ಇಲ್ಲ ಜಾಗ ಖಾಲಿ ಮಾಡಿ ಎಂದು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಬರೆದಿದ್ದಾರೆ.

ಇನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೊಷ್ ಹಿಂದಿ ಪರ ಬ್ಯಾಟಿಂಗ್ ಆರಂಭಿಸಿದ್ದಾರೆ. ಕನಿಮೊಳಿಯವರಿಗೆ ತೀಕ್ಷ್ಣ ಪ್ರತಿಕ್ರಿಯೆ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಮೀಕರಿಸಿರುವ ಅವರು, ಇನ್ನು 8 ತಿಂಗಳಿನಲ್ಲಿ ರಾಜ್ಯ ಚುನಾವಣೆಯಿದೆ… ಆಗಲೇ ಪ್ರಚಾರ ಆರಂಭವಾಗಿದೆ.. ಎಂದು ಟೀಕಿಸಿದ್ದಾರೆ.

ಕಳೆದ ವರ್ಷ ಕರ್ನಾಟಕದಲ್ಲಿ ಸೆಪ್ಟಂಬರ್ 14 ರಂದು ಹಿಂದಿ ದಿವಸ್ ವಿರೋದಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟಿಸಿರುವುದು.

ಒಟ್ಟಿನಲ್ಲಿ ಹಿಂದಿ ಹೇರಿಕೆ ಸರಿಯೇ ತಪ್ಪೇ ಎಂಬುದರ ಕುರಿತು ಚರ್ಚೆಗಳು ದೊಡ್ಡ ಮಟ್ಟದಲ್ಲಿ ಆರಂಭವಾಗಿವೆ. ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯ ಮೂಲಕ ತ್ರಿಭಾಷಾ ಸೂತ್ರ ಜಾರಿಗೊಳಿಸಲು ಮುಂದಾದಾಗ ಬಿಜೆಪಿ ಮಿತ್ರಪಕ್ಷ ಎಐಡಿಎಂಕೆ ಅದನ್ನು ತೀವ್ರವಾಗಿ ವಿರೋಧಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅದನ್ನು ನೋವಿನ ಮತ್ತು ದುಃಖಕರ ಸಂಗತಿ ಎಂದು ಕರೆದಿದ್ದು, ತಮ್ಮ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಸಾರಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...