Homeಮುಖಪುಟಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

ಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

2014 ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ನಂತರ ಅದರ ಬೆಲೆಯನ್ನು 70 ರುಪಾಯಿಗೆ ಇಳಿಸಲಾಗಿತ್ತು. ಈಗ ಇನ್ನೂ ಅಗ್ಗವಾಗಿದೆ.

- Advertisement -
- Advertisement -

ಗ್ರಾಮೀಣ ಪ್ರದೇಶಗಳಿಗೆ ಎಲ್‌ಇಡಿ ಬಲ್ಬ್ ಒಂದಕ್ಕೆ 10 ರುಪಾಯಿಯಂತೆ ನೀಡಲು ಭಾರತದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ ನಿಂದ (EESL) ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದ ಬೆಂಬಲ ಅಥವಾ ಪ್ರೋತ್ಸಾಹಧನ ಏನನ್ನೂ ಪಡೆಯದೆ ಆರು ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲು ಅದು ಮುಂದಾಗಿದೆ.

ಸರ್ಕಾರಿ ಸ್ಯಾಮ್ಯದ EESLನ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಜಾಗತಿಕ ಮಟ್ಟದಲ್ಲೇ ಅತ್ಯಂತ ಕಡಿಮೆ ಬೆಲೆಗೆ EESL ಎಲ್‌ಇಡಿ ಬಲ್ಬ್ ಒದಗಿಸಲಿದೆ. ಆ ಮೂಲಕ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಿದೆ ಎಂದಿದ್ದಾರೆ.

ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ UJALA (ಉನ್ನತ್ ಜ್ಯೋತಿ ಬೈ ಅಫೋರ್ಡಬಲ್ ಲೈಟಿಂಗ್ ಫಾರ್ ಆಲ್) ಯೋಜನೆ ಅಡಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದೆ, ಇದರಿಂದ ವಿದ್ಯುತ್ ಸಹ ಉಳಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಕ್ಲೀನ್ ಡೆವಲಪ್‌ಮೆಂಟ್ ಮೆಕಾನಿಸಂ (ಸಿಡಿಎಂ) ಅಡಿಯಲ್ಲಿ ಗ್ರಾಮ UJALA ದಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಆ ಮೂಲಕ ಕಾರ್ಬನ್ ಕ್ರೆಡಿಟ್ಸ್ ಬರಲಿದ್ದು, 2014ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ಸರ್ಕಾರದ UJALA ಯೋಜನೆ ಅಡಿ ಅದರ ಬೆಲೆಯನ್ನು 70 ರುಪಾಯಿಗೆ ಕಡಿತ ಮಾಡಲಾಯಿತು. ಈಗಿನ ಯೋಜನೆಯು ಅದನ್ನು ಇನ್ನು ದರಕ್ಕೆ ಒದಗಿಸಲಾಗುತ್ತಿದೆ ಎನ್ನಲಾಗಿದೆ.

ಈಗಿನ ಹೊಸ ಯೋಜನೆ ಅಡಿಯಲ್ಲಿ ಕಾರ್ಬನ್ ಕ್ರೆಡಿಟ್ಸ್‌ನಿಂದ 60 ರುಪಾಯಿ ಬಂದರೆ, ಬಾಕಿ 10 ರುಪಾಯಿಯನ್ನು ಗ್ರಾಮೀಣ ಭಾಗದ ಗ್ರಾಹಕರು ಪಾವತಿಸುತ್ತಾರೆ. ಮೊದಲ ಹಂತವಾಗಿ 1 ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲಾಗುತ್ತದೆ ಎನ್ನಲಾಗಿದ್ದು, ಒಟ್ಟಾರೆ 4000 ಕೋಟಿ ಹೂಡಿಕೆಯಲ್ಲಿ 600 ಕೋಟಿ ರೂ ಗ್ರಾಮೀಣ ಗ್ರಾಹಕರು ಪಾವತಿಸಿದರೆ, 3400 ಕೋಟಿ ರುಪಾಯಿ ಕಾರ್ಬನ್ ಕ್ರೆಡಿಟ್ ಆದಾಯದ ಮೂಲಕ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

EESL ಪ್ರಕಾರ, ಮೌಲ್ಯದ ದೃಷ್ಟಿಯಿಂದ ವಿಶ್ವದ ಎರಡನೇ ದೊಡ್ಡ ಮಾರುಕಟ್ಟೆ ಭಾರತವಾಗಿದೆ. ಈಗಿನ ವಿದ್ಯುತ್‌ ಬಲ್ಬ್‌ಗಳ ಮೂಲಕ ಹೆಚ್ಚಿನ ವಿದ್ಯುತ್ ವ್ಯರ್ಥವಾಗುತ್ತಿದೆ. ಸದ್ಯದ ವಿದ್ಯುತ್ ಬೇಡಿಕೆ ಉಚ್ಛ್ರಾಯ ಮಟ್ಟದ 9428 ಮೆಗಾವ್ಯಾಟ್ ತಲುಪುವುದನ್ನು UJALA ಯೋಜನೆಯ ಎಲ್‌ಇಡಿ ಬಲ್ಬ್‌ಗಳನ್ನು ಬಳಸುವ ಮೂಲಕ ತಡೆಯಬಹುದು.


ಓದಿ: ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...