Homeಮುಖಪುಟಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ 'ಇಲಿನಾ ಸೇನ್' ನಿಧನ

ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ‘ಇಲಿನಾ ಸೇನ್’ ನಿಧನ

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದರು.

- Advertisement -
- Advertisement -

ಹಲವಾರು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದ ಇಲಿನಾ ಸೇನ್ ಆಗಸ್ಟ್ 9 ರಂದು ನಿಧನರಾದರು. ಅವರಿಗೆ ಪತಿ ಡಾ. ಬಿನಾಯಕ್ ಸೇನ್ ಮತ್ತು ಇಬ್ಬರು ಹೆಣ್ಣುಮಕ್ಕಳಾದ ಪ್ರಹ್ನಿತಾ ಮತ್ತು ಅಪರಾಜಿತಾ ಇದ್ದಾರೆ.

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದ್ದಾರೆ.

ಕಾರ್ಮಿಕ ಸಂಘಗಳು, ದೀನದಲಿತರು ಮತ್ತು ಆದಿವಾಸಿ ಸಮುದಾಯದೊಂದಿಗೆ ಕೆಲಸ ಮಾಡಲು ಸೇನ್ ಚತ್ತೀಸ್‌ಘಡದಲ್ಲಿ ಹಲವು ವರ್ಷ ಉಳಿದುಕೊಂಡಿದ್ದರು. ಅವರು ಇನ್ಸೈಡ್ ಚತ್ತೀಸ್‌ಘಡ: ಎ ಪೊಲಿಟಿಕಲ್ ಮೆಮೋಯಿರ್ ಅಂಡ್ ಸುಖವಾಸಿನ್ ಮತ್ತು ದಿ ಮೈಗ್ರಂಟ್ ವುಮನ್ ಆಫ್ ಚತ್ತೀಸ್‌ಘಡ ಎರಡು ಪುಸ್ತಕಗಳನ್ನು ಬರೆದಿದ್ದಾರೆ.

ಇವರು ಮಹಾರಾಷ್ಟ್ರದ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಮುಂಬೈಗೆ ತೆರಳಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ಮಹಿಳಾ ಅಧ್ಯಯನಕ್ಕಾಗಿ ಸುಧಾರಿತ ಕೇಂದ್ರಕ್ಕೆ ಸೇರಿದ್ದರು.

ವೈದ್ಯರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆಯಾಗಿದ್ದ ಅವರ ಪತಿ ಬಿನಾಯಕ್ ಸೇನ್ ಗೆ 2010 ರಲ್ಲಿ ಛತ್ತೀಸ್ ಗಡದ ವಿಚಾರಣಾ ನ್ಯಾಯಾಲಯವು ದೇಶದ್ರೋಹಕ್ಕೆ ಸಂಚು ರೂಪಿಸಿದ ಆರೋಪ ಮತ್ತು ಮಾವೋವಾದಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ರಾಯಪುರ ಸೆಷನ್ಸ್ ನ್ಯಾಯಾಲಯವು ದೇಶದ್ರೋಹದ ಆರೋಪದ ಮೇಲೆ ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಶಿಕ್ಷೆಗೊಳಪಡಿಸಿತು

ಇಲಿನಾ ಪತಿಯ ಬಿಡುಗಡೆಗಾಗಿ ಕಾನೂನು ಹೋರಾಟಕ್ಕೆ ಮುಂದಾದರು. ಮಧ್ಯ ಭಾರತದ ಆದಿವಾಸಿ ಸಮುದಾಯದ ಹಲವಾರು ಯುವಕರನ್ನು ಕಾರಣವಿಲ್ಲದೇ ಬಂಧಿಸುವುದರ ವಿರುದ್ಧ ಪ್ರಚಾರ ನಡೆಸಿದ್ದರು. 2011 ರಲ್ಲಿ ಸುಪ್ರೀಂ ಕೋರ್ಟ್ ಬಿನಾಯಕ್ ಅವರಿಗೆ ಜಾಮೀನು ನೀಡಿ, ಇವರ ವಿರುದ್ಧ ದೇಶದ್ರೋಹದ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದಿತ್ತು.

ಇಲಿನಾ ಸಾವಿನ ಸುದ್ದಿ ಪ್ರಕಟವಾದ ತಕ್ಷಣ, ಹಲವಾರು ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತಮ್ಮ ದುಃಖವನ್ನು ವ್ಯಕ್ತಪಡಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ಛತ್ತೀಸ್ ಗಡದಲ್ಲಿ ಅತಿಯಾದ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಇಲಿನಾ ತೀವ್ರವಾಗಿ ಟೀಕಿಸಿದ್ದರು.

ದೆಹಲಿಯ ಸ್ವತಂತ್ರ ಸ್ತ್ರೀಸಮಾನತಾವಾದಿ ಪ್ರಕಾಶನ ಕೇಂದ್ರವಾದ ಜುಬಾನ್ ಪ್ರಕಟಿಸಿದ ಎ ಸ್ಪೇಸ್ ವಿಥಾನ್ ದಿ ಸ್ಟ್ರಗಲ್ ಎಂಬ ಪುಸ್ತಕದಲ್ಲಿ, ಇಲಿನಾ ಸಾಮಾಜಿಕ ಚಳುವಳಿಗಳಲ್ಲಿ ಹಲವಾರು ಮಹಿಳೆಯರ ಬಗ್ಗೆ ಮತ್ತು ಅವರೊಳಗಿನ ಪಿತೃಪ್ರಭುತ್ವವನ್ನು ಪ್ರಶ್ನಿಸಿದ್ದರು.

1970 ರ ದಶಕದ ಉತ್ತರಾರ್ಧ ಮತ್ತು 80 ರ ದಶಕದ ಆರಂಭದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ,  ವರದಕ್ಷಿಣೆ ಸಾವು ಮತ್ತು ಮಥುರಾ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇಬ್ಬರೂ ಸೇರಿ ರೂಪಾಂತರ್ ಎಂಬ ಸರ್ಕಾರೇತರ ಸಂಸ್ಥೆಯೊಂದನ್ನು ಸ್ಥಾಪಿಸಿದರು. ಇದರ ಕಾರ್ಯಗಳು ಲಿಂಗ ಸಮಸ್ಯೆಗಳು ಮತ್ತು ತರಬೇತಿಗಳು ಮತ್ತು ಕೃಷಿ ಜೀವವೈವಿಧ್ಯತೆಯ ಮೇಲೆ ಕೇಂದ್ರೀಕರಿಸಿತ್ತು.

ಆರೋಗ್ಯವು ಹದಗೆಟ್ಟಾಗಲೂ, ಇಲಿನಾ ಹಲವಾರು ಜನರ ಚಳವಳಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದರು.

ಇತ್ತೀಚೆಗೆ ಮಹಾರಾಷ್ಟ್ರದ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತರನ್ನು ಹೆಚ್ಚಾಗಿ ಬಂಧಿಸುತ್ತಿರುವ ಬಗ್ಗೆ ತನ್ನ ಭಿನ್ನಾಭಿಪ್ರಾಯ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...