Homeಮುಖಪುಟಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ 'ಇಲಿನಾ ಸೇನ್' ನಿಧನ

ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ‘ಇಲಿನಾ ಸೇನ್’ ನಿಧನ

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದರು.

- Advertisement -
- Advertisement -

ಹಲವಾರು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಲೇಖಕಿ, ಸಾಮಾಜಿಕ ಕಾರ್ಯಕರ್ತೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದ ಇಲಿನಾ ಸೇನ್ ಆಗಸ್ಟ್ 9 ರಂದು ನಿಧನರಾದರು. ಅವರಿಗೆ ಪತಿ ಡಾ. ಬಿನಾಯಕ್ ಸೇನ್ ಮತ್ತು ಇಬ್ಬರು ಹೆಣ್ಣುಮಕ್ಕಳಾದ ಪ್ರಹ್ನಿತಾ ಮತ್ತು ಅಪರಾಜಿತಾ ಇದ್ದಾರೆ.

ಅವರು ಭಾನುವಾರ ಸಂಜೆ 7 ರ ಸುಮಾರಿಗೆ ಕೊಲ್ಕತ್ತಾದಲ್ಲಿ ನಿಧನರಾದರು ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರೈಟ್ಸ್ ಪದಾಧಿಕಾರಿ ರಂಜಿತ್ ಸುರ್ ತಿಳಿಸಿದ್ದಾರೆ.

ಕಾರ್ಮಿಕ ಸಂಘಗಳು, ದೀನದಲಿತರು ಮತ್ತು ಆದಿವಾಸಿ ಸಮುದಾಯದೊಂದಿಗೆ ಕೆಲಸ ಮಾಡಲು ಸೇನ್ ಚತ್ತೀಸ್‌ಘಡದಲ್ಲಿ ಹಲವು ವರ್ಷ ಉಳಿದುಕೊಂಡಿದ್ದರು. ಅವರು ಇನ್ಸೈಡ್ ಚತ್ತೀಸ್‌ಘಡ: ಎ ಪೊಲಿಟಿಕಲ್ ಮೆಮೋಯಿರ್ ಅಂಡ್ ಸುಖವಾಸಿನ್ ಮತ್ತು ದಿ ಮೈಗ್ರಂಟ್ ವುಮನ್ ಆಫ್ ಚತ್ತೀಸ್‌ಘಡ ಎರಡು ಪುಸ್ತಕಗಳನ್ನು ಬರೆದಿದ್ದಾರೆ.

ಇವರು ಮಹಾರಾಷ್ಟ್ರದ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ನಂತರ ಮುಂಬೈಗೆ ತೆರಳಿ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್‌ನಲ್ಲಿ ಮಹಿಳಾ ಅಧ್ಯಯನಕ್ಕಾಗಿ ಸುಧಾರಿತ ಕೇಂದ್ರಕ್ಕೆ ಸೇರಿದ್ದರು.

ವೈದ್ಯರು ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆಯಾಗಿದ್ದ ಅವರ ಪತಿ ಬಿನಾಯಕ್ ಸೇನ್ ಗೆ 2010 ರಲ್ಲಿ ಛತ್ತೀಸ್ ಗಡದ ವಿಚಾರಣಾ ನ್ಯಾಯಾಲಯವು ದೇಶದ್ರೋಹಕ್ಕೆ ಸಂಚು ರೂಪಿಸಿದ ಆರೋಪ ಮತ್ತು ಮಾವೋವಾದಿಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ರಾಯಪುರ ಸೆಷನ್ಸ್ ನ್ಯಾಯಾಲಯವು ದೇಶದ್ರೋಹದ ಆರೋಪದ ಮೇಲೆ ಮತ್ತು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಶಿಕ್ಷೆಗೊಳಪಡಿಸಿತು

ಇಲಿನಾ ಪತಿಯ ಬಿಡುಗಡೆಗಾಗಿ ಕಾನೂನು ಹೋರಾಟಕ್ಕೆ ಮುಂದಾದರು. ಮಧ್ಯ ಭಾರತದ ಆದಿವಾಸಿ ಸಮುದಾಯದ ಹಲವಾರು ಯುವಕರನ್ನು ಕಾರಣವಿಲ್ಲದೇ ಬಂಧಿಸುವುದರ ವಿರುದ್ಧ ಪ್ರಚಾರ ನಡೆಸಿದ್ದರು. 2011 ರಲ್ಲಿ ಸುಪ್ರೀಂ ಕೋರ್ಟ್ ಬಿನಾಯಕ್ ಅವರಿಗೆ ಜಾಮೀನು ನೀಡಿ, ಇವರ ವಿರುದ್ಧ ದೇಶದ್ರೋಹದ ಯಾವುದೇ ಪ್ರಕರಣವನ್ನು ದಾಖಲಿಸಲಾಗುವುದಿಲ್ಲ ಎಂದಿತ್ತು.

ಇಲಿನಾ ಸಾವಿನ ಸುದ್ದಿ ಪ್ರಕಟವಾದ ತಕ್ಷಣ, ಹಲವಾರು ಮಾಹಿತಿ ಹಕ್ಕು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರು ತಮ್ಮ ದುಃಖವನ್ನು ವ್ಯಕ್ತಪಡಿಸಲು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ಛತ್ತೀಸ್ ಗಡದಲ್ಲಿ ಅತಿಯಾದ ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಇಲಿನಾ ತೀವ್ರವಾಗಿ ಟೀಕಿಸಿದ್ದರು.

ದೆಹಲಿಯ ಸ್ವತಂತ್ರ ಸ್ತ್ರೀಸಮಾನತಾವಾದಿ ಪ್ರಕಾಶನ ಕೇಂದ್ರವಾದ ಜುಬಾನ್ ಪ್ರಕಟಿಸಿದ ಎ ಸ್ಪೇಸ್ ವಿಥಾನ್ ದಿ ಸ್ಟ್ರಗಲ್ ಎಂಬ ಪುಸ್ತಕದಲ್ಲಿ, ಇಲಿನಾ ಸಾಮಾಜಿಕ ಚಳುವಳಿಗಳಲ್ಲಿ ಹಲವಾರು ಮಹಿಳೆಯರ ಬಗ್ಗೆ ಮತ್ತು ಅವರೊಳಗಿನ ಪಿತೃಪ್ರಭುತ್ವವನ್ನು ಪ್ರಶ್ನಿಸಿದ್ದರು.

1970 ರ ದಶಕದ ಉತ್ತರಾರ್ಧ ಮತ್ತು 80 ರ ದಶಕದ ಆರಂಭದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿ,  ವರದಕ್ಷಿಣೆ ಸಾವು ಮತ್ತು ಮಥುರಾ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಇಬ್ಬರೂ ಸೇರಿ ರೂಪಾಂತರ್ ಎಂಬ ಸರ್ಕಾರೇತರ ಸಂಸ್ಥೆಯೊಂದನ್ನು ಸ್ಥಾಪಿಸಿದರು. ಇದರ ಕಾರ್ಯಗಳು ಲಿಂಗ ಸಮಸ್ಯೆಗಳು ಮತ್ತು ತರಬೇತಿಗಳು ಮತ್ತು ಕೃಷಿ ಜೀವವೈವಿಧ್ಯತೆಯ ಮೇಲೆ ಕೇಂದ್ರೀಕರಿಸಿತ್ತು.

ಆರೋಗ್ಯವು ಹದಗೆಟ್ಟಾಗಲೂ, ಇಲಿನಾ ಹಲವಾರು ಜನರ ಚಳವಳಿಯಲ್ಲಿ ಸಕ್ರಿಯರಾಗಿದ್ದರು ಮತ್ತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ನೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದರು.

ಇತ್ತೀಚೆಗೆ ಮಹಾರಾಷ್ಟ್ರದ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಮಾನವ ಹಕ್ಕುಗಳ ಕಾರ್ಯಕರ್ತರನ್ನು ಹೆಚ್ಚಾಗಿ ಬಂಧಿಸುತ್ತಿರುವ ಬಗ್ಗೆ ತನ್ನ ಭಿನ್ನಾಭಿಪ್ರಾಯ ಮತ್ತು ಆಕ್ಷೇಪ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ಪ್ರಾಧ್ಯಾಪಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...