Homeಕರ್ನಾಟಕ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

- Advertisement -
- Advertisement -

ಭಾಷೆಯ ಕಾರಣಕ್ಕೆ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ವಿಮಾನ ನಿಲ್ದಾಣದಲ್ಲಿ ‘ನೀವು ಭಾರತೀಯರೇ’ ಎಂದು ಪ್ರಶ್ನಿಸಿದ್ದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ’ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ’ ಎಂದು ಹೇಳಿದ್ದಾರೆ.

ಈ ವಿಚಾರದಲಿ ಕನಿಮೋಳಿ ಪರವಾಗಿ ನನ್ನ ಧ್ವನಿ ಕೂಡಾ ಇದೆ ಎಂದು ಅವರು ಕನಿಮೋಳಿ ಅವರನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ 


ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್.ಡಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಇಂತಹದ್ದೇ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #ibpsmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.


ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ದಕ್ಷಿಣ ಭಾರತದ ರಾಜಕಾರಣಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...