Homeಕರ್ನಾಟಕ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

- Advertisement -
- Advertisement -

ಭಾಷೆಯ ಕಾರಣಕ್ಕೆ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ವಿಮಾನ ನಿಲ್ದಾಣದಲ್ಲಿ ‘ನೀವು ಭಾರತೀಯರೇ’ ಎಂದು ಪ್ರಶ್ನಿಸಿದ್ದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ’ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ’ ಎಂದು ಹೇಳಿದ್ದಾರೆ.

ಈ ವಿಚಾರದಲಿ ಕನಿಮೋಳಿ ಪರವಾಗಿ ನನ್ನ ಧ್ವನಿ ಕೂಡಾ ಇದೆ ಎಂದು ಅವರು ಕನಿಮೋಳಿ ಅವರನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ 


ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್.ಡಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಇಂತಹದ್ದೇ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #ibpsmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.


ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ದಕ್ಷಿಣ ಭಾರತದ ರಾಜಕಾರಣಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...