Homeಕರ್ನಾಟಕ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

- Advertisement -
- Advertisement -

ಭಾಷೆಯ ಕಾರಣಕ್ಕೆ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ವಿಮಾನ ನಿಲ್ದಾಣದಲ್ಲಿ ‘ನೀವು ಭಾರತೀಯರೇ’ ಎಂದು ಪ್ರಶ್ನಿಸಿದ್ದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ’ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ’ ಎಂದು ಹೇಳಿದ್ದಾರೆ.

ಈ ವಿಚಾರದಲಿ ಕನಿಮೋಳಿ ಪರವಾಗಿ ನನ್ನ ಧ್ವನಿ ಕೂಡಾ ಇದೆ ಎಂದು ಅವರು ಕನಿಮೋಳಿ ಅವರನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ 


ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್.ಡಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಇಂತಹದ್ದೇ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #ibpsmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.


ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ದಕ್ಷಿಣ ಭಾರತದ ರಾಜಕಾರಣಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...