Homeಕರೋನಾ ತಲ್ಲಣಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

ಪ್ಲಾಸ್ಮಾ ದಾನ ಮಾಡಿ 4 ಜನರ ಜೀವ ಉಳಿವಿಗೆ ಕಾರಣವಾದ ಯುವ ಉದ್ಯಮಿ!

- Advertisement -
- Advertisement -

ಬೆಂಗಳೂರಿನ ಕುನಾಲ್ ಗಾರ್ನಾ ಎಂಬ 21 ವರ್ಷದ ಉದ್ಯಮಿ ಎರಡು ಬಾರಿ ಪ್ಲಾಸ್ಮಾ ದಾನ ಮಾಡಿ ನಾಲ್ಕು ಜೀವಗಳು ಉಳಿಯಲು ಕಾರಣವಾಗಿದ್ದು, ಅವರಿಗೆ ಜನರಿಂದ ಅಭಿನಂದನೆಗಳ ಮಹಾಪೂರ ಹರಿದುಬಂದಿದೆ.

ಮಾರ್ಚ್‌ನಲ್ಲಿ ಕುನಾಲ್ ತನ್ನ ಅಧ್ಯಯನ ಮುಗಿಸಿದ ನಂತರ ಯುಕೆಯಿಂದ ಹಿಂದಿರುಗಿದಾಗ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಆದರೆ ಸಾಂಕ್ರಾಮಿಕ ರೋಗ ಹರಡುತ್ತಿದ್ದ ಮೊದಲ ಕೆಲವು ತಿಂಗಳುಗಳಲ್ಲಿ, ಪ್ಲಾಸ್ಮಾ ದಾನ ಪ್ರಕ್ರಿಯೆಯು ಪ್ರಾರಂಭವಾಗಲಿಲ್ಲ. ಅದೂ ಅಲ್ಲದೆ ನಗರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯೂ ಕಡಿಮೆಯಿತ್ತು. ಪ್ರಕರಣಗಳು ಹೆಚ್ಚಿದಂತೆ ಜೂನ್‌ನಲ್ಲಿ, ಎಚ್‌ಸಿಜಿ ಆಸ್ಪತ್ರೆಯಿಂದ, ಪ್ಲಾಸ್ಮಾ ದಾನ ಮಾಡಲು ಅವರ ಒಪ್ಪಿಗೆಯನ್ನು ಕೇಳಲಾಗಿತ್ತು. ಅವರು ತಕ್ಷಣ ಒಪ್ಪಿದ್ದರು.

ಜೂನ್ 15 ರಂದು ಮೊದಲ ಬಾರಿಗೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದ್ದರು. ನಂತರ ಆಸ್ಪತ್ರೆಯ ಅಧಿಕಾರಿಗಳಿಗೆ ತಮ್ಮ ಪ್ಲಾಸ್ಮಾವನ್ನು ಹೆಚ್ಚು ಬಾರಿ ದಾನ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದ್ದರು.

“ಕೆಲವು ವರ್ಷಗಳ ಹಿಂದೆ ನಾನು ಪ್ಲೇಟ್‌ಲೆಟ್‌ಗಳನ್ನು ದಾನ ಮಾಡಿದ್ದೇನೆ. ನಾನು ಸಾಮಾನ್ಯವಾಗಿ ರಕ್ತದಾನ ಮಾಡುತ್ತಿದ್ದೆ. ಆದ್ದರಿಂದ, ನಾನು ಪ್ಲಾಸ್ಮಾ ದಾನಕ್ಕೂ ಒಪ್ಪಿದ್ದೆ. ಆರಂಭದಲ್ಲಿ, ನನ್ನ ಪೋಷಕರು ಸ್ವಲ್ಪ ಭಯಭೀತರಾಗಿದ್ದರು. ಆದರೆ ಇದು ರೋಗಿಗಳ ಜೀವ ಉಳಿಸಲು ಸಹಾಯ ಮಾಡುತ್ತದೆ ಎಂದು ಅವರಿಗೆ ಹೇಳಿದ ನಂತರ ಒಪ್ಪಿದರು. ನನ್ನ ಬಳಿ ಬಿ-ಪಾಸಿಟಿವ್ ಪ್ಲಾಸ್ಮಾ ಇದೆ. ನಾನು ಅದನ್ನು ಮೊದಲ ಬಾರಿಗೆ ದಾನ ಮಾಡಿದಾಗ ನನಗೆ ಏನೂ ತೊಂದರೆಯಾಗಲಿಲ್ಲ. ಇದು ನೋವುರಹಿತವಾಗಿರುತ್ತದೆ, ಜೊತೆಗೆ ಕೇವಲ ಒಂದು ಗಂಟೆ ಸಮಯವನಷ್ಟೇ ತೆಗೆದುಕೊಳ್ಳುತ್ತದೆ” ಎಂದು ಕುನಾಲ್ ದಿ ನ್ಯೂ ಸಂಡೇ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ನಾನು ಹೆಚ್ಚು ಪ್ಲಾಸ್ಮಾ ದಾನಕ್ಕೆ  ಸಿದ್ಧನಾಗಿದ್ದೇನೆ ಎಂದು ಎಚ್‌ಸಿಜಿ ವೈದ್ಯರಿಗೆ ಹೇಳಿದೆ. ಎರಡು ಪ್ಲಾಸ್ಮಾ ದಾನಗಳ ನಡುವಿನ ಅಂತರವು ಕನಿಷ್ಠ 15 ದಿನಗಳಿರಬೇಕು ಎಂದು ಅವರು ತಿಳಿಸಿದ್ದಾರೆ.

ಜುಲೈನಲ್ಲಿ, ಜಯದೇವ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯೋವಾಸ್ಕುಲರ್ ಸೈನ್ಸಸ್‌ನ ಹಿರಿಯ ಹೃದ್ರೋಗ ತಜ್ಞ ಡಾ.ನಟೇಶ್ ಬಿ ಎಚ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತು. ಆದರೆ ವೇಗವಾಗಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತು. ಹಾಗಾಗಿ ಅವರನ್ನು ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಅವರಿಗೆ ವೆಂಟಿಲೇಟರ್ ಮತ್ತು ರೆಮ್ಡೆಸಿವಿರ್ ಔಷಧಿಯನ್ನು ನೀಡಲಾಗಿದ್ದರೂ, ಅವರ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಂತರ ಪ್ಲಾಸ್ಮಾ ಚಿಕಿತ್ಸೆಯನ್ನು ಪರಿಗಣಿಸಲಾಯಿತು. ಜುಲೈ ಅಂತ್ಯದಲ್ಲಿ, ಕುನಾಲ್ ಮತ್ತೆ ತಮ್ಮ ಪ್ಲಾಸ್ಮಾವನ್ನು ದಾನ ಮಾಡಿದರು. ಅದನ್ನು ಡಾ.ನಾಟೇಶ್ ಅವರಿಗೆ ನೀಡಲಾಯಿತು.

ಅವರು ಮೂರು ದಿನಗಳಲ್ಲಿ ಚೇತರಿಸಿಕೊಂಡರು. ಐಸಿಯುನಲ್ಲಿ ಐದು ದಿನಗಳನ್ನು ಕಳೆದ ನಂತರ ಅವರನ್ನು ವಾರ್ಡ್‌ಗೆ ಸ್ಥಳಾಂತರಿಸಲಾಯಿತು.

‘ನನ್ನ ಪ್ಲಾಸ್ಮಾವನ್ನು ಯಾರಿಗೆ ನೀಡಲಾಗಿದೆ ಎಂಬುದರ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ. ವೈದ್ಯರು ನನ್ನೊಂದಿಗೆ ವೀಡಿಯೊ-ಕಾನ್ಫರೆನ್ಸ್ ಮೂಲಕ ಸಂಪರ್ಕ ಮಾಡಿ ನನಗೆ ಧನ್ಯವಾದಗಳನ್ನು ತಿಳಿಸಿದರು. ನನ್ನ ಪ್ಲಾಸ್ಮಾ ನಾಲ್ಕುಕ್ಕೂ ಹೆಚ್ಚು ಜೀವಗಳನ್ನು ಉಳಿಸಲು ಸಹಾಯ ಮಾಡಿದೆ ಎಂದು ತಿಳಿಸಲಾಯಿತು’ ಎಂದು ಅವರು ಹೇಳಿದರು.

“ನಿರ್ಣಾಯಕ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆಯು ಮುಖ್ಯವಾಗಿದೆ. ರೋಗ ನಿಯಂತ್ರಿಸಲು ನಮಗೆ ಹೆಚ್ಚಿನ ದಾನಿಗಳು ಬೇಕು” ಡಾ. ನಟೇಶ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಚಿಕಿತ್ಸೆಗೆ ಪ್ಲಾಸ್ಮಾ ನೀಡಲು ಮುಂದಾದ 200 ತಬ್ಲೀಘಿ ಜಮಾಅತ್ ಸದಸ್ಯರು

ರಾಜ್ಯದಲ್ಲಿ ಕೊರೊನಾ ವಿರುದ್ದ ಪ್ಲಾಸ್ಮಾ ಥೆರಪಿ ಮುಂದುವರೆಸಲಾಗುವುದು: ಆರೋಗ್ಯ ಸಚಿವ ಶ್ರೀರಾಮುಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...