Homeಮುಖಪುಟ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ...

’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ಎಂದು ಪರಿಸರ ಕಾರ್ಯಕರ್ತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಈಶಾ ಪ್ರತಿಷ್ಠಾನದ “ಕಾವೇರಿ ಕೂಗು” ಯೋಜನೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ ಎಂದು ಈಶ ಪ್ರತಿಷ್ಠಾನದ ಮುಖ್ಯಸ್ಥ ಜಗ್ಗಿ ವಾಸುದೇವ್ ಹೇಳಿದ್ದಾರೆ. ಆದರೆ ವರ್ಷಾಂತ್ಯಕ್ಕೆ 2.5 ಕೋಟಿ ಸಸಿಗಳನ್ನು ವಿತರಿಸುವ ಗುರಿ ಹೊಂದಿದ್ದ ಯೋಜನೆಯು ಕೊರೊನಾ ಕಾರಣಕ್ಕೆ 1.2 ಕೋಟಿ ಸಸಿಗಳಿಗೆ ಇಳಿಸಲಾಗಿದೆ. ಈಗಾಗಲೆ 60 ಲಕ್ಷದಷ್ಟು ಸಸಿಗಳನ್ನು ವಿತರಿಸಿ ಆಗಿದೆ ಎಂದು ಅವರು ಹೇಳಿದ್ದಾರೆ.

ಈಶಾ ಫೌಂಡೇಷನ್‌ನ ಜಗ್ಗಿ ವಾಸುದೇವ್, ಒಣಗುತ್ತಿರುವ ನದಿಯ ಪುನಶ್ಚೇತನಕ್ಕಾಗಿ ಹಾಗೂ ಮಣ್ಣಿನಲ್ಲಿರುವ ಪೌಷ್ಟಿಕಾಂಶ ಹೆಚ್ಚಿಸಲು ಕಾವೇರಿಯ ದಡದಾದ್ಯಂತ 242 ಕೋಟಿ ಮರಗಳನ್ನು ನೆಡುವ ಯೋಜನೆಯನ್ನು ಈಶ ಫೌಂಡೇಶನ್ ಕೈಗೆತ್ತಿಕೊಂಡಿತ್ತು.

ಆದರೆ ಈ ಕಾರ್ಯಕ್ರಮಕ್ಕೆ ಜನರಿಂದ ಬಲವಂತವಾಗಿ ಗಿಡವೊಂದಕ್ಕೆ 42 ರೂ. ಪಡೆಯುತ್ತಾರೆ ಎಂದು ವಕೀಲರೊಬ್ಬರು ಹೈಕೋರ್ಟ್‌ಗೆ ಅರ್ಜಿ ನೀಡಿದ್ದು, ಹೈಕೋರ್ಟ್ ಅದರ ವಿಚಾರಣೆ ನಡೆಸಿ, ಆಧ್ಯಾತ್ಮದ ಹೆಸರಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದಿಲ್ಲ, ಆಧ್ಯಾತ್ಮದ ವಿಚಾರಗಳು ಕೂಡಾ ಕಾನೂನಿನ ಚೌಕಟ್ಟಿಗೆ ಒಳಪಡಬೇಕು ಎಂದು ಚಾಟಿ ಬೀಸಿತ್ತು.


ಇದನ್ನು ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.


ಅಲ್ಲದೆ ಯೋಜನೆಗೆ ಈವರೆಗೆ ಯಾವ ಮಾರ್ಗದಲ್ಲಿ ಮತ್ತು ಎಷ್ಟು ಹಣ ಸಂಗ್ರಹ ಮಾಡಿದ್ದೀರಿ ಎಂಬುದನ್ನು ಬಹಿರಂಗಪಡಿಸುವಂತೆ ಹೈಕೋರ್ಟ್ ಹೇಳಿತ್ತು.

ಈಶಾ ಫೌಂಡೇಶನ್ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿದೆ. ಸರ್ಕಾರವು ಇದರ ಸಾಧಕ ಬಾಧಕಗಳನ್ನು ಅಧ್ಯಯನ ಮಾಡದೆ ಒಂದು ಖಾಸಗಿ ಸಂಸ್ಥಗೆ ಹೇಗೆ ಅನುಮತಿ ನೀಡಿದೆ ಎಂದು ಹೈಕೋರ್ಟ್‌ನಲ್ಲಿ ಅರ್ಜಿದಾರ ವಕೀಲರು ಪ್ರಶ್ನಿಸಿದ್ದರು.

ಇದಕ್ಕೆ ರಾಜ್ಯ ಸರ್ಕಾರ ಕೂಡಾ ಚಂದಾ ಎತ್ತಲು ಯಾವುದೇ ಸಂಸ್ಥಗಳಿಗೆ ಅನುಮತಿ ನೀಡಿಲ್ಲ ಎಂದು ಪ್ರಮಾಣ ಪತ್ರವನ್ನು ಹೈಕೋರ್ಟಿಗೆ ಸಲ್ಲಿಸಿತ್ತು. ಈಶ ಪ್ರತಿಷ್ಠಾನವು ತನ್ನ ಅಭಿಯಾನದಲ್ಲಿ 10,626 ಕೋಟಿ ರೂ. ದೇಣಿಗೆ ಸಂಗ್ರಹಿಸುವ ನಿರೀಕ್ಷೆಯಿದ್ದು, ಜನರಿಂದ ಭಾರೀ ಪ್ರಮಾಣದ ಹಣ ಸಂಗ್ರಹಿಸುವುದು ಕಳವಳಕಾರಿಯಾಗಿದೆ ಎಂದು ದೂರುದಾರ ವಕೀಲರು ವಾದಿಸಿದ್ದರು.


ಇದನ್ನೂ ಓದಿ: ಜಗ್ಗಿ ವಾಸುದೇವ್ ಹಣ ಸಂಗ್ರಹಿಸುವಂತಿಲ್ಲ: ಹೈಕೋರ್ಟ್ ನಲ್ಲಿ ಪಿ.ಐ.ಎಲ್


ನನ್ನ ಮೇಲಿನ ಆರೋಪದಲ್ಲಿ ಹುರುಳಿಲ್ಲ, ನಾವು ಯಾವುದೇ ಸರ್ಕಾರಿ ಭೂಮಿಯಲ್ಲಿ ಗಿಡಗಳನ್ನು ನೆಡುತ್ತಿಲ್ಲ. ಅಲ್ಲದೆ ರೈತರಿಂದ ಹಣವನ್ನು ಪಡೆಯುತಿಲ್ಲ ಎಂದು ಹೇಳಿದ್ದಾರೆ. ಇದುವರೆಗೆ 123 ದೇಶಗಳು ಈ ಅಭಿಯಾನಕ್ಕೆ ಪ್ರಾಯೋಜಕತ್ವ ನೀಡುತ್ತಿದೆ ಎಂದಿರುವ ಅವರು, ವಿಶ್ವದಾದ್ಯಂತ ಸ್ಪಂದನೆ ದೊರಕಿರುವುದನ್ನು ದೂರುದಾರರು ಗಮನಿಸಬೇಕು ಹಾಗೂ ಇನ್ನುಳಿದಂತೆ ನ್ಯಾಯಾಲಯ ತನ್ನ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಜಗ್ಗಿ ವಾಸುದೇವ್ ಹೇಳಿದ್ದಾರೆ.

ಈ ಬಗ್ಗೆ Environment Support Group ನ ಮುಖ್ಯಸ್ಥ ಲಿಯೋ ಎಫ್‌. ಸಲ್ಡಾನ ಮಾತನಾಡಿ, ಒಂದು ನದಿಯನ್ನು ಉಳಿಸುವುದು ಎಂದರೆ ಕೇವಲ ಮರಗಳನ್ನು ನೆಡವುದು ಮಾತ್ರವಲ್ಲ. ನದಿ ದಡದಲ್ಲಿ ಇರುವ ಪರಿಸರ ವೈವಿಧ್ಯತೆಯನ್ನು ಕೂಡಾ ಉಳಿಸುವುದಾಗಿದೆ. ಅಲ್ಲಿನ ಸೂಕ್ಷ್ಮ ಪರಿಸರಕ್ಕೆ ಏಟು ಕೊಟ್ಟು ಕೇವಲ ಮರಗಳನ್ನು ಮಾತ್ರ ನೆಟ್ಟರೆ ಅದು ಅಲ್ಲಿನ ಪರಿಸರಕ್ಕೆ ಹಾನಿಯುಂಟು ಮಾಡುತ್ತದೆ. ಒಟ್ಟಿನಲ್ಲಿ ಹೇಳಬೇಕೆಂದರೆ ಈ ಕಾಯಕ್ರಮ ಒಂದು ರಾಜಕೀಯವಾಗಿದೆ. 2019 ರಲ್ಲಿ ಮರ ನೆಡುತ್ತೇವೆ ’ಮಿಸ್‌ಕಾಲ್’ ಕೊಡಿ ಎಂದಿದ್ದರು. ಆ ಸಮಯದಲ್ಲಿ ಮಿಸ್‌ಕಾಲ್ ಮಾಡಿದ್ದ ಕೋಟ್ಯಾಂತರ ಸಂಖ್ಯೆಗಳನ್ನು ಬಿಜೆಪಿಯ ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಪರಿಸರ ಕಾರ್ಯಕರ್ತ ಹಾಗೂ ಗ್ರಾಮ ಸೇವಾ ಸಂಘದ ಅಧ್ಯಕ್ಷರಾದ ಸಿ. ಯತಿರಾಜುರವರು ಮಾತನಾಡಿ “ಈ ಒಟ್ಟು ಕಾರ್ಯಕ್ರಮ ಕಾರ್ಪೊರೇಟ್ ಕಂಪೆನಿಗಳಿಂದ ದುಡ್ಡು ವಸೂಲಿ ಮಾಡಲು ರೂಪಿಸಿರುವಂತದ್ದು. ಪರಿಸರಕ್ಕೆ ಹಾನಿ ಮಾಡುವ ಕಾರ್ಪೊರೇಟ್ ಕಂಪೆನಿಗಳ ಹಣದಿಂದ ಇವರು ಯಾವ ಪರಿಸರ ಸಂರಕ್ಷಣೆ ಮಾಡುತ್ತಾರೆ? ನದಿಯ ದಂಡೆಗಳನ್ನು ಹಸಿರೀಕರಣ ಮಾಡುವುದೇಂದರೆ ನದಿ ಉಳಿಯುವುದಿಲ್ಲ. ನದಿ ಪಾತ್ರವನ್ನು ಸಮಗ್ರವಾಗಿ ಅಧ್ಯಯನ ಮಾಡದೆ ಕೇವಲ ಒಂದೆರೆಡು ವರ್ಷದಲ್ಲಿ ನದಿ ಹಸಿರೀಕರಣ ಮಾಡುತ್ತೇವೆ ಎಂದರೆ ಅದೊಂದು ಮೋಸ. ಸಮುದಾಯದ ನೇತೃತ್ವ ಇಲ್ಲದೆ ಕಾರ್ಪೊರೇಟ್ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮ ದೊಡ್ಡ ನಾಟಕ” ಎಂದು ಹೇಳಿದ್ದಾರೆ.


ಓದಿ: ’ಕಾವೇರಿ ಕೂಗು’ ಅಭಿಯಾನ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...