Homeಅಂತರಾಷ್ಟ್ರೀಯVIVO ಬದಲು ಪತಂಜಲಿಯಿಂದ ಐಪಿಎಲ್ ಪ್ರಾಯೋಜಕತ್ವ ಸಾಧ್ಯತೆ!

VIVO ಬದಲು ಪತಂಜಲಿಯಿಂದ ಐಪಿಎಲ್ ಪ್ರಾಯೋಜಕತ್ವ ಸಾಧ್ಯತೆ!

ಹರಿದ್ವಾರ ಮೂಲದ ಪತಂಜಲಿ ಸಮೂಹವು ಸುಮಾರು 10,500 ಕೋಟಿ ರೂ. ವಹಿವಾಟು ಹೊಂದಿದೆ. ಪತಂಜಲಿ ಆಯುರ್ವೇದವು 2018-19ನೇ ಹಣಕಾಸು ವರ್ಷದಲ್ಲಿ 8,329 ಕೋಟಿ ರೂ. ಆದಾಯವನ್ನು ಗಳಿಸಿತ್ತು.

- Advertisement -
- Advertisement -

ಅಕ್ಟೋಬರ್ ನವೆಂಬರ್‌ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಶೀರ್ಷಿಕೆ ಪ್ರಾಯೋಜಕತ್ವಕ್ಕೆ ಬಿಡ್ ಮಾಡಲು ಬಾಬಾ ರಾಮದೇವ್ ಅವರ ಪತಂಜಲಿ ಆಯುರ್ವೇದ ಕಂಪನಿ ಚಿಂತನೆ ನಡೆಸಿದೆ ಎಂದು ಕಂಪನಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಚೀನಾದ ಮೊಬೈಲ್ ತಯಾರಕ ವಿವೊ ಕಂಪನಿ ಪ್ರಾಯೋಜಕತ್ವದಿಂದ ಹೊರಬರಲು ನಿರ್ಧರಿಸಿದ ನಂತರ ಹೊಸದಾಗಿ ಐಪಿಎಲ್‌ನ ಶೀರ್ಷಿಕೆ ಪ್ರಾಯೋಜಕತ್ವಕ್ಕೆ ಬಿಡ್‌ ಕರೆಯಲಾಗುತ್ತದೆ.

ತನ್ನ ಆಯುರ್ವೇದ ಮೂಲದ ಎಫ್‌ಎಂಸಿಜಿ ಉತ್ಪನ್ನಗಳಿಗೆ ರಫ್ತು ಮಾಡುವತ್ತ ಗಮನ ಹರಿಸಿರುವ ಪತಂಜಲಿ, ಐಪಿಲ್ ಟೈಟಲ್ ಪ್ರಾಯೋಜಕತ್ವ ವಹಿಸಿಕೊಂಡಲ್ಲಿ ಜಾಗತಿಕವಾಗಿ ಗಮನ ಸೆಳೆಯಬಹದು ಎಂಬ ಅಂದಾಜು ಮಾಡಿದೆ.

ಪತಂಜಲಿ ವಕ್ತಾರ ಎಸ್ ಕೆ ತಿಜರಾವಾಲಾ ಮಾತನಾಡಿ ಟೈಟಲ್ ಪ್ರಾಯೋಜಕತ್ವ ಪಡೆಯಲು ಪ್ರಯತ್ನಿಸುತ್ತೇವೆ. ವೋಕಲ್ ಫಾರ್ ಲೋಕಲ್ ಮತ್ತು ಭಾರತೀಯ ಬ್ರಾಂಡ್ ಅನ್ನು ಜಾಗತಿಕಗೊಳಿಸುವುದಕ್ಕೆ ಇದು ಸರಿಯಾದ ವೇದಿಕೆಯಾಗಿದೆ ಎಂದು ಪಿಟಿಐಗೆ ಹೇಳಿದ್ದಾರೆ.

ಆದರೆ, ಈ ವಿಷಯದ ಬಗ್ಗೆ ಕಂಪನಿಯು ಇನ್ನೂ ಅಂತಿಮ ತೀರ್ಮಾನವನ್ನು ತೆಗೆದುಕೊಂಡಿಲ್ಲ ಎಂದು ತಿಜರಾವಾಲಾ ಹೇಳಿದ್ದಾರೆ.

ಸೆಪ್ಟೆಂಬರ್ 19 ರಿಂದ ಯುಎಇಯಲ್ಲಿ ನಡೆಯುವ 2020 ರ ಐಪಿಎಲ್‌ಗಾಗಿ ತಮ್ಮ ಪಾಲುದಾರಿಕೆಯನ್ನು ಸ್ಥಗಿತಗೊಳಿಸಲು ವಿವೊ ನಿರ್ಧರಿಸಿತ್ತು.

ಚೀನಾ-ಭಾರತ ಗಡಿ ಬಿಕ್ಕಟ್ಟು ಹಿನ್ನೆಲೆಯಲ್ಲಿ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ವಿವೊ ಹಿಂದೆ ಸರಿದಿತ್ತು.

ಶೀರ್ಷಿಕೆ ಪ್ರಾಯೋಜಕತ್ವವು ಐಪಿಎಲ್‌ನ ವಾಣಿಜ್ಯ ಆದಾಯದ ಮಹತ್ವದ ಭಾಗವಾಗಿದೆ. ವಿವೋ ಐಪಿಎಲ್ ಶೀರ್ಷಿಕೆ ಪ್ರಾಯೋಜಕತ್ವದ ಹಕ್ಕುಗಳನ್ನು 2018 ರಿಂದ 2022 ರವರೆಗೆ ಐದು ವರ್ಷಗಳ ಕಾಲ 2,190 ಕೋಟಿ ರೂ. ಕೊಟ್ಟು ಖರೀದಿತ್ತು. ಆದರೆ ತೀವ್ರ ಪ್ರತಿರೋಧ ವ್ಯಕ್ತವಾದಾಗ ಹಿಂದೆ ಸರಿಯಿತು.

ಹರಿದ್ವಾರ ಮೂಲದ ಪತಂಜಲಿ ಸಮೂಹವು ಸುಮಾರು 10,500 ಕೋಟಿ ರೂ. ವಹಿವಾಟು ಹೊಂದಿದೆ. ಪತಂಜಲಿ ಆಯುರ್ವೇದವು 2018-19ನೇ ಹಣಕಾಸು ವರ್ಷದಲ್ಲಿ 8,329 ಕೋಟಿ ರೂ. ಆದಾಯವನ್ನು ಗಳಿಸಿತ್ತು.


ಇದನ್ನು ಓದಿ: ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...