HomeUncategorizedಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ಕಾಂಗ್ರೆಸ್ ಹಾಗೂ ಸ್ವಪಕ್ಷೀಯ ನಾಯಕರೆ ಅವರ ವಿರುದ್ದ ಕಿಡಿ ಕಾರಿದ್ದು ಕ್ಷಮೆ ಕೇಳುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವಾರು ಪ್ರಶಸ್ತಿ ಪಡೆದ ಅಸ್ಸಾಮಿ ಸಾಹಿತಿ ಸೈಯದ್ ಅಬ್ದುಲ್ ಮಲಿಕ್ ಅವರನ್ನು “ಬೌದ್ಧಿಕ ಜಿಹಾದಿ” ಎಂದು ಕರೆದಿದ್ದ ಅಸ್ಸಾಂನ ವಿವಾದಾತ್ಮಕ ಬಿಜೆಪಿ ಶಾಸಕ ಶಿಲಾದಿತ್ಯ ದೇವ್ ವಿರುದ್ಧ ವಿವಿಧ ಸಂಸ್ಥೆಳಿಂದ ಹಲವಾರು ದೂರುಗಳು ದಾಖಲಾಗಿದೆ.

ಸೈಯ್ಯದ್ ಅಬ್ದುಲ್ ಮಲಿಕ್ ಅಸ್ಸಾಮಿ ಸಾಹಿತ್ಯದ ಪ್ರಸಿದ್ದ ಬರಹಗಾರರಾಗಿದ್ದು, 1977 ರಲ್ಲಿ ಅಭಯಪುರಿಯಲ್ಲಿ ನಡೆದ ಅಸಮ್ ಸಾಹಿತ್ಯ ಸಭೆಯ ಅಧ್ಯಕ್ಷರಾಗಿದ್ದರು. ಅವರಿಗೆ ಪದ್ಮಶ್ರೀ, ಪದ್ಮ ಭೂಷಣ್, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಬಿಜೆಪಿ ಮುಖಂಡ ಮತ್ತು ಅಸ್ಸಾಂ ಅಲ್ಪಸಂಖ್ಯಾತ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅವಾಲ್ ಈ ಹೇಳಿಕೆಯನ್ನು ಖಂಡಿಸಿ ಶಿಲಾದಿತ್ಯ ಅವರನ್ನು ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಶಿಲಾದಿತ್ಯ ದೇವ್ ಅವರನ್ನು “ಹುಚ್ಚು ವ್ಯಕ್ತಿ” ಎಂದು ಕರೆದಿದೆ. ಆಗಾಗ್ಗೆ ವಿವಾದಾತ್ಮಕ ಮತ್ತು ಕೋಮು-ಸೂಕ್ಷ್ಮ ಹೇಳಿಕೆ ಕೊಡುತ್ತಿರುವ ಅವರನ್ನು “ಮಾನಸಿಕ ಆಶ್ರಯ” ಕ್ಕೆ ಕಳುಹಿಸಬೇಕು ಎಂದಿದೆ. ಅಲ್ಲದೆ ವಿವಾದಾತ್ಮಕ ಟೀಕೆಗಳಿಗೆ ಹೆಸರುವಾಸಿಯಾದ ಬಾಲಿವುಡ್ ನಟಿಯನ್ನ ಉಲ್ಲೇಖಿಸಿ, ಅವರು “ಬಿಜೆಪಿಯ ರಾಖಿ ಸಾವಂತ್” ಎಂದು ಕಾಂಗ್ರೆಸ್ ಬಣ್ಣಿಸಿದೆ.

ಶಿಲಾದಿತ್ಯ ದೇವ್ ವಿರುದ್ಧ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಗುವಾಹಟಿಯ ಹಟಿಗಾಂವ್ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದು, ಶಾಸಕರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದೆ.

ಸದೌ ಅಸೋಮ್ ಗೋರಿಯಾ ದೇಶಿ ಜತಿ ಪರಿಷತ್ ಬಾರ್‌ಪೇಟಾ, ಧುಬ್ರಿ ಮತ್ತು ಮೊರಿಗಾಂವ್ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದೆ. ಸದೌ ಅಸೋಮ್ ಗೋರಿಯಾ ಯುವ-ಛಾತ್ರ ಪರಿಷತ್ ಗುವಾಹಟಿಯ ಜಲುಕ್ಬರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದೆ.

ಅಸೋಮ್ ಸೋಂಗ್ರಾಮಿ ಯುವ ಮಂಚ್ ಕೂಡ ಹತಿಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

“ಶಿಲಾದಿತ್ಯ ಹೇಳಿದ್ದನ್ನು ನಾನು ವಿರೋಧಿಸುತ್ತೇನೆ ಮತ್ತು ಅದನ್ನು ಬಲವಾಗಿ ಖಂಡಿಸುತ್ತೇನೆ” ಎಂದು ಬಿಜೆಪಿ ನಾಯಕ ಅವಾಲ್ ಹೇಳಿದ್ದಾರೆ. “ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ, ಅವರ ವಿರುದ್ಧ ಬಲವಾದ ನಿಲುವನ್ನು ಯಾವಾಗಲೂ ತೆಗೆದುಕೊಳ್ಳುತ್ತೇನೆ” ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಕವಿ, ಕಾದಂಬರಿಕಾರ ಮತ್ತು ಸಣ್ಣಕಥೆಗಾರ ಮಲಿಕ್ ವಿರುದ್ಧ ಶಿಲಾದಿತ್ಯ ನೀಡಿದ ಅವಹೇಳನಕಾರಿ ಹೇಳಿಕೆಗಳನ್ನು ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ತೀವ್ರವಾಗಿ ಖಂಡಿಸಿದರು.

ಕಾಂಗ್ರೆಸ್ ಲೋಕಸಭಾ ಸಂಸದ ಅಬ್ದುಲ್ ಖಲೇಕ್ ಅವರು ಬಿಜೆಪಿ ಶಾಸಕರನ್ನು “ಮಾನಸಿಕ ಆಶ್ರಯಕ್ಕೆ ಕಳುಹಿಸಬೇಕಾದ ಹುಚ್ಚು ವ್ಯಕ್ತಿ” ಎಂದು ಬಣ್ಣಿಸಿದ್ದಾರೆ.

ಕಾಂಗ್ರೆಸ್‌ನ ಮತ್ತೊಬ್ಬರಾದ ಮುಖಂಡ ಕಮಲ್ ಕುಮಾರ್ ಮೇಧಿ, “ಶಿಲಾದಿತ್ಯ ದೇವ್ ಬಿಜೆಪಿಯ ರಾಖಿ ಸಾವಂತ್. ಅಸ್ಸಾಮೀ ಸಮಾಜ ಅವರಿಗೆ ಯಾವುದೇ ಪ್ರಾಮುಖ್ಯತೆ ನೀಡಬಾರದು” ಎಂದಿದ್ದಾರೆ.

ಅಸ್ಸಾಮ್ ಸಾಹಿತ್ಯ ಸಭೆಯ ಅಧ್ಯಕ್ಷ ಕುಲಾಧರ್ ಸೈಕಿಯಾ ಸಾಹಿತ್ಯ ಸಂಸ್ಥೆಯ ಅಧ್ಯಕ್ಷರೂ ಆಗಿದ್ದ ಮಲಿಕ್ ವಿರುದ್ಧದ “ವಿವಾದಾತ್ಮಕ ಹೇಳಿಕೆಗಳನ್ನು” ಖಂಡಿಸಿದರು.

ಕವಿ ಮಲಿಕ್ ಅವರನ್ನು “ಬೌದ್ಧಿಕ ಜಿಹಾದ್” ನಲ್ಲಿ ತೊಡಗಿಸಿಕೊಂಡಿದ್ದರು ಎಂದು ಶಿಲಾದಿತ್ಯ ದೇವ್ ಕಳೆದ ಶುಕ್ರವಾರ ಹೇಳಿದ್ದರು. ರಾಮ ದೇವಸ್ಥಾನಕ್ಕೆ ಶಿಲಾನ್ಯಾಸ ಮಾಡಿದ ದಿನದಂದು ಸೋನಿತ್‌ಪುರ ಜಿಲ್ಲೆಯಲ್ಲಿ ನಡೆದ ಕೋಮು ಸಂಘರ್ಷದ ಕುರಿತು ಪ್ರತಿಕ್ರಿಯಿಸುವಾಗ ಅವರು ಈ ಮಾತುಗಳನ್ನಾಡಿದರು.

ರಾಜಕೀಯ ಸಂಬಂಧಗಳಾಚೆ ಇದು ರಾಜ್ಯಾದ್ಯಂತ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದ್ದು ಅನೇಕ ಸಂಘಟನೆಗಳು ಅವರ ವಿರುದ್ದ ಪ್ರತಿಭಟನೆ ನಡೆಸಿವೆ.

ಶಿಲಾದಿತ್ಯ ಕಳೆದ ತಿಂಗಳಷ್ಟೆ, ಬಿಜೆಪಿ ನಾಯಕರ ನಿರ್ಲಕ್ಷ್ಯ ಮತ್ತು ಗುಂಪುಗಾರಿಕೆಯನ್ನು ಆರೋಪಿಸಿ ಜುಲೈ 14 ರಂದು ಬಿಜೆಪಿಯಿಂದ ಹೊರಗುಳಿಯುವುದಾಗಿ ಹೇಳಿದ್ದರು. ಆದರೆ ನಂತರ ಅವರು ಯು-ಟರ್ನ್ ರಾಜೀನಾಮೆ ನೀಡಲಿಲ್ಲ.

ಈ ಹಿಂದಿನಿಂದಲೂ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಶಿಲಾದಿತ್ಯ ಸುದ್ದಿಯಲ್ಲಿದ್ದಾರೆ. ಅಸ್ಸಾಮೀ ಮತ್ತು ಬಂಗಾಳಿಗಳನ್ನು ವಿಭಜಿಸಲು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ 2018 ರಲ್ಲಿ ಸಿಲ್ಚಾರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿತ್ತು.


ಓದಿ: ಬಿಜೆಪಿ ತೊರೆಯುವುದಾಗಿ ಘೋಷಿಸಿದ ಅಸ್ಸಾಂ ಶಾಸಕ ಶಿಲಾದಿತ್ಯ ದೇವ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...