Homeಮುಖಪುಟಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಬಿಎಸ್ ಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ರಾಜಸ್ಥಾನ ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

- Advertisement -
- Advertisement -

ರಾಜಸ್ಥಾನದಲ್ಲಿ 2019 ರ ಸೆಪ್ಟೆಂಬರ್‌ನಲ್ಲಿ ಬಹುಜನ ಸಮಾಜ ಪಕ್ಷದ ಆರು ಮಂದಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮುಖ್ಯಮಂತ್ರಿ ಗೆಹ್ಲೋಟ್ ಸರ್ಕಾರಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಆಗಸ್ಟ್ 11ರಂದು ನಡೆಯಲಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದ ವಿಧಾನಸಭಾಧ್ಯಕ್ಷ ಸಿ. ಪಿ. ಜೋಶಿ ಕ್ರಮ ಸರಿಯಾಗಿಲ್ಲ. ಇದಕ್ಕೆ ತಡೆಯಾಜ್ಞೆ ನೀಡಬೇಕೆಂದು ಬಿಜೆಪಿ ಶಾಸಕ ಮದನ್ ದಿಲಾವರ್ ಮತ್ತು ಬಿಎಸ್‌‌‌‌‌ಪಿ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಮಿಶ್ರ ಅವರು ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಪ್ರಶ್ನಿಸಿದ್ದರು.

ಅರ್ಜಿದಾರರ ಅರ್ಜಿಯನ್ನು ಸ್ವೀಕರಿಸಿದ ಏಕಸದಸ್ಯ ಪೀಠದ ನ್ಯಾ. ಮಹೇಂದ್ರ ಕುಮಾರ್ ಗೋಯಲ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಸ್ಪೀಕರ್, ವಿಧಾನಸಭಾ ಕಾರ್ಯದರ್ಶಿ ಮತ್ತು ಬಿಎಸ್ಪಿ ಶಾಸಕರಿಗೆ ನೋಟಿಸ್ ನೀಡಿದ್ದರು.

ಏಕಸದಸ್ಯ ಪೀಠದ ತೀರ್ಮಾನ ತೃಪ್ತಿ ತಾರದ ಹಿನ್ನೆಲೆಯಲ್ಲಿ ಅರ್ಜಿದಾರರು ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದರು. ಮುಖ್ಯನ್ಯಾಯಮೂರ್ತಿ ಇಂದ್ರಜಿತ್ ಮಹಂತಿ, ನ್ಯಾ. ಪ್ರಕಾಶ್ ಗುಪ್ತ ಅವರಿದ್ದ ಪೀಠ ಮೇಲ್ಮನವಿ ತಿರಸ್ಕರಿಸಿದರು. ಆದರೆ ಜೈಸಲ್‌ಮರ್ ಜಿಲ್ಲಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ ಪತ್ರಿಕೆಗಳಿಗೆ ನೋಟಿಸ್ ನೀಡುವಂತೆ ತಿಳಿಸಿತು.

ಕಾಂಗ್ರೆಸ್ ಸೇರ್ಪಡೆಯಾಗಿರುವ ಬಿಎಸ್‌ಪಿ ಆರು ಮಂದಿ ಶಾಸಕರು ಅನರ್ಹತೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಇದರ ನಡುವೆಯೇ ರಾಜಸ್ಥಾನ ಹೈಕೋರ್ಟ್ ನಲ್ಲಿ ಆಗಸ್ಟ್ 11ರಂದು ಸ್ಪೀಕರ್ ತೀರ್ಮಾನದ ವಿರುದ್ದ  ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಲಿದೆ.

ರಾಜಸ್ಥಾನದ ಗೆಹ್ಲೋಟ್ ನೇತೃತ್ವದ ಸರ್ಕಾರ ಆಗಸ್ಟ್ 14ರಂದು ಬಹುಮತ/ವಿಶ್ವಾಸ ಮತ ಯಾಚಿಸುವ ಸಾಧ್ಯತೆ ಇದೆ. 200 ಶಾಸಕರನ್ನೊಳಗೊಂಡ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಶಾಸಕರನ್ನು ಹೊಂದಿದೆ. ಇದರಲ್ಲಿ ಆರು ಮಂದಿ ಬಿಎಸ್‌ಪಿ ಶಾಸಕರು ಸೇರಿದ್ದಾರೆ. 10 ಮಂದಿ ಪಕ್ಷೇತರ ಶಾಸಕರು ಒಳಗೊಂಡಿದ್ದಾರೆ.

ಕಳೆದ ತಿಂಗಳು ಸಚಿನ್ ಪೈಲಟ್ ಸೇರಿದಂತೆ 19 ಮಂದಿ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ದ ಬಂಡಾಯವೆದ್ದಿದ್ದು ರಾಜಸ್ಥಾನ ಸರ್ಕಾರ ಅಲ್ಪಮತಕ್ಕೆ ಕುಸಿಯುವಂತೆ ಮಾಡಿದ್ದಾರೆ.

ಹೀಗಾಗಿ 194ಕ್ಕೆ ಶಾಸಕರಲ್ಲಿ ಬಹುಮತಕ್ಕೆ 98 ಶಾಸಕರ ಬಲ ಬೇಕು. ಬಿಎಸ್ ಪಿ ಶಾಸಕರು ಸೇರಿ ಕಾಂಗ್ರೆಸ್ ಬಲ 98 ಇದೆ. ಒಂದೊಮ್ಮೆ ಸ್ಪೀಕರ್ ತೀರ್ಮಾನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಗೆಹ್ಲೋಟ್ ಬೆಂಬಲ 92ಕ್ಕೆ ಕುಸಿಯಲಿದೆ. ಸಿಪಿಎಂ, ಬಿಟಿಪಿ ಸೇರಿದತೆ ಕಾಂಗ್ರೆಸ್ ಬಲ 95 ಆಗುತ್ತದೆ. ಸ್ಫೀಕರ್ ಸೇರಿದರೆ 96 ಆಗುತ್ತದೆ.

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 72 ಶಾಸಕರನ್ನು ಹೊಂದಿದೆ. ಪೈಲಟ್ ಬೆಂಬಲಿಗ ಶಾಸಕರು ಸೇರಿದರೆ 97 ಶಾಸಕರ ಬಲ ಬಂದಂತೆ ಆಗುತ್ತದೆ. ಆಗ ಬಿಜೆಪಿ ಕೇವಲ ಒಂದು ಸ್ಥಾನದ ಕೊರತೆ ಬೀಳುತ್ತದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನ ಮೇಲೆ ಗೆಹ್ಲೋಟ್ ಸರ್ಕಾರ ಏಳುಬೀಳು ನಿಂತಿದೆ.


ಓದಿ: ರಾಹುಲ್ ಭೇಟಿಯಾದ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಗರಿಗೆದರಿದ ರಾಜಕೀಯ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...