Homeಮುಖಪುಟಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಕೋರ್ಟ್ ತೀರ್ಮಾನದ ಮೇಲೆ ರಾಜಸ್ಥಾನ ಸರ್ಕಾರ ಉಳಿವು ಅಳಿವು

ಬಿಎಸ್ ಪಿ ಶಾಸಕರ ಕಾಂಗ್ರೆಸ್ ಸೇರ್ಪಡೆ ರಾಜಸ್ಥಾನ ಹೈಕೋರ್ಟ್ ನಲ್ಲಿ ನಾಳೆ ವಿಚಾರಣೆ

- Advertisement -
- Advertisement -

ರಾಜಸ್ಥಾನದಲ್ಲಿ 2019 ರ ಸೆಪ್ಟೆಂಬರ್‌ನಲ್ಲಿ ಬಹುಜನ ಸಮಾಜ ಪಕ್ಷದ ಆರು ಮಂದಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಮುಖ್ಯಮಂತ್ರಿ ಗೆಹ್ಲೋಟ್ ಸರ್ಕಾರಕ್ಕೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಆಗಸ್ಟ್ 11ರಂದು ನಡೆಯಲಿದೆ.

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸಿದ ವಿಧಾನಸಭಾಧ್ಯಕ್ಷ ಸಿ. ಪಿ. ಜೋಶಿ ಕ್ರಮ ಸರಿಯಾಗಿಲ್ಲ. ಇದಕ್ಕೆ ತಡೆಯಾಜ್ಞೆ ನೀಡಬೇಕೆಂದು ಬಿಜೆಪಿ ಶಾಸಕ ಮದನ್ ದಿಲಾವರ್ ಮತ್ತು ಬಿಎಸ್‌‌‌‌‌ಪಿ ರಾಷ್ಟ್ರೀಯ ಕಾರ್ಯದರ್ಶಿ ಸತೀಶ್ ಮಿಶ್ರ ಅವರು ಹೈಕೋರ್ಟ್ ಏಕಸದಸ್ಯ ಪೀಠದ ಮುಂದೆ ಪ್ರಶ್ನಿಸಿದ್ದರು.

ಅರ್ಜಿದಾರರ ಅರ್ಜಿಯನ್ನು ಸ್ವೀಕರಿಸಿದ ಏಕಸದಸ್ಯ ಪೀಠದ ನ್ಯಾ. ಮಹೇಂದ್ರ ಕುಮಾರ್ ಗೋಯಲ್ ತಡೆಯಾಜ್ಞೆ ನೀಡಲು ನಿರಾಕರಿಸಿದ್ದರು. ಆದರೆ ಸ್ಪೀಕರ್, ವಿಧಾನಸಭಾ ಕಾರ್ಯದರ್ಶಿ ಮತ್ತು ಬಿಎಸ್ಪಿ ಶಾಸಕರಿಗೆ ನೋಟಿಸ್ ನೀಡಿದ್ದರು.

ಏಕಸದಸ್ಯ ಪೀಠದ ತೀರ್ಮಾನ ತೃಪ್ತಿ ತಾರದ ಹಿನ್ನೆಲೆಯಲ್ಲಿ ಅರ್ಜಿದಾರರು ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದರು. ಮುಖ್ಯನ್ಯಾಯಮೂರ್ತಿ ಇಂದ್ರಜಿತ್ ಮಹಂತಿ, ನ್ಯಾ. ಪ್ರಕಾಶ್ ಗುಪ್ತ ಅವರಿದ್ದ ಪೀಠ ಮೇಲ್ಮನವಿ ತಿರಸ್ಕರಿಸಿದರು. ಆದರೆ ಜೈಸಲ್‌ಮರ್ ಜಿಲ್ಲಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿ ಪತ್ರಿಕೆಗಳಿಗೆ ನೋಟಿಸ್ ನೀಡುವಂತೆ ತಿಳಿಸಿತು.

ಕಾಂಗ್ರೆಸ್ ಸೇರ್ಪಡೆಯಾಗಿರುವ ಬಿಎಸ್‌ಪಿ ಆರು ಮಂದಿ ಶಾಸಕರು ಅನರ್ಹತೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗೆ ವರ್ಗಾಯಿಸಬೇಕೆಂದು ಮನವಿ ಮಾಡಿದ್ದಾರೆ.

ಇದರ ನಡುವೆಯೇ ರಾಜಸ್ಥಾನ ಹೈಕೋರ್ಟ್ ನಲ್ಲಿ ಆಗಸ್ಟ್ 11ರಂದು ಸ್ಪೀಕರ್ ತೀರ್ಮಾನದ ವಿರುದ್ದ  ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಯಲಿದೆ.

ರಾಜಸ್ಥಾನದ ಗೆಹ್ಲೋಟ್ ನೇತೃತ್ವದ ಸರ್ಕಾರ ಆಗಸ್ಟ್ 14ರಂದು ಬಹುಮತ/ವಿಶ್ವಾಸ ಮತ ಯಾಚಿಸುವ ಸಾಧ್ಯತೆ ಇದೆ. 200 ಶಾಸಕರನ್ನೊಳಗೊಂಡ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 107 ಶಾಸಕರನ್ನು ಹೊಂದಿದೆ. ಇದರಲ್ಲಿ ಆರು ಮಂದಿ ಬಿಎಸ್‌ಪಿ ಶಾಸಕರು ಸೇರಿದ್ದಾರೆ. 10 ಮಂದಿ ಪಕ್ಷೇತರ ಶಾಸಕರು ಒಳಗೊಂಡಿದ್ದಾರೆ.

ಕಳೆದ ತಿಂಗಳು ಸಚಿನ್ ಪೈಲಟ್ ಸೇರಿದಂತೆ 19 ಮಂದಿ ಶಾಸಕರು ಗೆಹ್ಲೋಟ್ ನಾಯಕತ್ವದ ವಿರುದ್ದ ಬಂಡಾಯವೆದ್ದಿದ್ದು ರಾಜಸ್ಥಾನ ಸರ್ಕಾರ ಅಲ್ಪಮತಕ್ಕೆ ಕುಸಿಯುವಂತೆ ಮಾಡಿದ್ದಾರೆ.

ಹೀಗಾಗಿ 194ಕ್ಕೆ ಶಾಸಕರಲ್ಲಿ ಬಹುಮತಕ್ಕೆ 98 ಶಾಸಕರ ಬಲ ಬೇಕು. ಬಿಎಸ್ ಪಿ ಶಾಸಕರು ಸೇರಿ ಕಾಂಗ್ರೆಸ್ ಬಲ 98 ಇದೆ. ಒಂದೊಮ್ಮೆ ಸ್ಪೀಕರ್ ತೀರ್ಮಾನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದರೆ ಗೆಹ್ಲೋಟ್ ಬೆಂಬಲ 92ಕ್ಕೆ ಕುಸಿಯಲಿದೆ. ಸಿಪಿಎಂ, ಬಿಟಿಪಿ ಸೇರಿದತೆ ಕಾಂಗ್ರೆಸ್ ಬಲ 95 ಆಗುತ್ತದೆ. ಸ್ಫೀಕರ್ ಸೇರಿದರೆ 96 ಆಗುತ್ತದೆ.

ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ 72 ಶಾಸಕರನ್ನು ಹೊಂದಿದೆ. ಪೈಲಟ್ ಬೆಂಬಲಿಗ ಶಾಸಕರು ಸೇರಿದರೆ 97 ಶಾಸಕರ ಬಲ ಬಂದಂತೆ ಆಗುತ್ತದೆ. ಆಗ ಬಿಜೆಪಿ ಕೇವಲ ಒಂದು ಸ್ಥಾನದ ಕೊರತೆ ಬೀಳುತ್ತದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತೀರ್ಪಿನ ಮೇಲೆ ಗೆಹ್ಲೋಟ್ ಸರ್ಕಾರ ಏಳುಬೀಳು ನಿಂತಿದೆ.


ಓದಿ: ರಾಹುಲ್ ಭೇಟಿಯಾದ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಗರಿಗೆದರಿದ ರಾಜಕೀಯ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...