Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...