Homeಮುಖಪುಟಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು.

- Advertisement -
- Advertisement -

ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ ‘ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ’ ಎಂಬ ಹೇಳಿಕೆ ಕೊಡುವ ಮೂಲಕ ಮಾಜಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್‌ಕುಮಾರ್ ಹೆಗಡೆ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ.

ಕುಮುಟಾದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಬಹುದೊಡ್ಡ ಕಂಪನಿ ಬಿಎಸ್‌ಎನ್‌ನಲ್ಲಿ ಬರೀ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ಅವರನ್ನು ಸರಿಪಡಿಸಲು ನಮ್ಮ ಸರ್ಕಾರದಿಂದ ಸಾಧ್ಯವಾಗಿಲ್ಲ. ಹಾಗಾಗಿ ಹಂತ ಹಂತವಾಗಿ ಅವರನ್ನು ಕೆಲಸದಿಂದ ತೆಗೆದುಹಾಕುವ ಮೂಲಕ ಖಾಸಗೀಕರಣ ಮಾಡುತ್ತೇವೆ ಎಂದು ಸಂಸದರು ಹೇಳಿದ್ದಾರೆ.

ಬಿಎಸ್‌ಎನ್‌ಎಲ್‌ ಎಷ್ಟು ಜಿಡ್ಡು ಹಿಡಿದು ಹೋಗಿದೆ ಎಂದರೆ ನಮ್ಮ ಸರ್ಕಾರಕ್ಕೂ ಅದನ್ನು ಸರಿಪಡಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹೂಡಿಕೆ ಹಿಂತೆಗೆತದ ಮೂಲಕ ಅದನ್ನು ಮುಚ್ಚಿ ಆ ಜಾಗದಲ್ಲಿ ಖಾಸಗಿಯವರಿಗೆ ಅವಕಾಶ ಮಾಡಿಕೊಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಸಂಸದರ ಈ ವಿವಾದಾತ್ಮಕ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದೆ. ಅವರ ಬಾಯಲ್ಲಿ ದೇಶದ್ರೋಹ ಬಿಟ್ಟರೆ ಮತ್ತೇನೂ ಬರುವುದಿಲ್ಲ. ಎಲ್ಲರನ್ನೂ ದೇಶದ್ರೋಹಿಗಳೆಂದು ಕರೆಯುವುದು ಅವರಿಗೆ ಖಯಾಲಿ ಆಗಿಬಿಟ್ಟಿದೆ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರಿದ್ದಾರೆ.

ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ

ದೆಹಲಿಯ ನನ್ನ ಮನೆಯಲ್ಲಿಯೂ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಬರುವುದಿಲ್ಲ. ಈ ವಿಚಾರದಲ್ಲಿ ಬೆಂಗಳೂರಿಗೆ ಹೋಲಿಸಿಕೊಂಡರೆ ಉತ್ತರ ಕನ್ನಡವೇ ಬೆಸ್ಟ್. ಅಲ್ಲಿರುವವರು ಅಧಿಕಾರಿಗಳಲ್ಲ ಕೇವಲ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ. ನಾನು ಬಳಸವು ಭಾಷೆಯಲ್ಲಿ ನಿಖರತೆಯಿದೆ. ಹಾಗಾಗಿ ಹೂಡಿಕೆ ಹಿಂತೆಗೆತ ಮೂಲಕ ಬಿಎಸ್‌ಎನ್‌ಎಲ್‌ ಮುಗಿಸುತ್ತೇವೆ ಎಂದು ಅನಂತ್‌ ಕುಮಾರ್ ಹೆಗಡೆ ಹೇಳಿದ್ದಾರೆ.

ವಿಡಿಯೋ ನೋಡಿ

ಖಾಸಗಿ ಸಂಸ್ಥೆಗಳನ್ನು ಹೇಗೆ ಮುಗಿಸಲಾಗುತ್ತಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಿದ್ದಾರೆ ಈ ವಿಡಿಯೋ ಬಿಎಸ್‌ಎನ್‌‌ಎಲ್ ಅನ್ನು ಉದಾಹರಣೆಯಾಗಿ ಇಟ್ಟುಕೊಂಡು ಇನ್ನು ಮುಂದೆ ಖಾಸಗಿಯವರಿಗೆ ಮಾರಾಟವಾಗಲಿರುವ ಸರ್ಕಾರಿ ಸಂಸ್ಥೆಗಳನ್ನು ದೇಶದ್ರೂಹಿಗಳು ಇರೋ ಸಂಸ್ಥೆಗಳು ಎಂದು ಹೇಳಲಾಗುತ್ತದೆ ಅನಿಸುತ್ತೆ. #NaanuGauri #ananthakumarhegde

Posted by Naanu Gauri on Tuesday, August 11, 2020

ಸರ್ಕಾರ ಹಣ ಕೊಟ್ಟಿದೆ, ದೇಶದ ಜನರಿಗೆ ಅಗತ್ಯವಿದೆ, ಸೌಲಭ್ಯವಿದೆ ಎಲ್ಲವೂ ಇದೆ. ಆದರು ಅವರು ಕೆಲಸ ಮಾಡುವುದಿಲ್ಲ. ಅವರು ಕೆಲಸ ಮಾಡಲಿಕ್ಕೆ ಸಿದ್ದರಿಲ್ಲ. ಈಗಾಗಲೇ 85 ಸಾವಿರ ಜನರನ್ನು ತೆಗೆಯುತ್ತಿದ್ದೇವೆ. ಮುಂದೆ ಮತ್ತಷ್ಟು ಜನರನ್ನು ತೆಗೆದು, ಏನಾದರೂ ಸರಿ ಅದನ್ನು ಖಾಸಗೀಕರಣ ಮಾಡುತ್ತೇವೆ, ನಮಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ.

ಸಂಸದರ ಹೇಳಿಕೆಗೆ ಭಾರೀ ವಿರೋಧ

ನಾನುಗೌರಿ.ಕಾಂ ಜೊತೆ ಮಾತನಾಡಿದ ಬಿಎಸ್‌ಎನ್‌ಎಲ್‌ನ ಮಂಗಳೂರಿನ ಸಬ್‌ಡಿವಿಸಿನ್‌ ಅಧಿಕಾರಿಗಳಾಗಿ ಕೆಲಸ ಮಾಡಿ ನಿವೃತ್ತರಾದ ಚಂದ್ರಹಾಸ್ ಉಲ್ಲಾಳ್‌ರವರು, BSNL ಮತ್ತು ಅದರ ನೌಕರರ ಕುರಿತು ಸಂಸದರು ಹಗುರವಾಗಿ ಮಾತನಾಡುವುದು ನಿಲ್ಲಿಸಬೇಕು. ಈ ದೇಶದ ಮೂಲೆ ಮೂಲೆಗೂ, ಹಳ್ಳಿ ಹಳ್ಳಿಗೂ, ಬೆಟ್ಟ ಗುಡ್ಡ, ಕಾಡು ಮೇಡು ಲೆಕ್ಕಿಸದೇ ಆಫ್ಟಿಕ್‌ ಫೈಬರ್‌ಗಳನ್ನು ಜೋಡಿಸಿದವರು ಬಿಎಸ್‌ಎನ್‌ಎಲ್‌ ನೌಕರರು ಎಂಬುದನ್ನು ಸಂಸದರು ಮರೆಯಬಾರದು ಎಂದಿದ್ದಾರೆ.

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಅದಕ್ಕೂ ಮುಂಚೆ ಬಾರೀ ದುಬಾರಿಯಾಗಿತ್ತು. ಬಿಎಸ್‌ಎನ್‌ಎಲ್‌ನಿಂದ ಜನಗಳಿಗೆ ಒಳ್ಳೇಯ ಸೇವೆ ಸಿಕ್ಕಿದೆ. ಇಂದು ಬಿಎಸ್‌ಎನ್‌ಎಲ್‌ ತಲುಪಿರುವ ಸ್ಥಿತಿಗೆ ಕಾರಣ ಕೇಂದ್ರ ಸರ್ಕಾರದ ದುರುದ್ದೇಶದ ನೀತಿಗಳೇ ಹೊರತು ನೌಕರರಲ್ಲ. ಖಾಸಗಿ ದೂರವಾಣಿ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಏಕೈಕ ಉದ್ದೇಶದಿಂದ ಬಿಎಸ್‌ಎನ್ಎಲ್‌ ಅನ್ನು ಸರ್ಕಾರ ನಿರ್ಲಕ್ಷಿಸಿ ಈಗ ನೌಕರರನ್ನು ದೂರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಎಲ್ಲವನ್ನೂ ಖಾಸಗೀ ಮಾಲೀಕತ್ವಕ್ಕೆ ನೀಡಲು ಹೊರಟಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಗೆ ಆಡಳಿತ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ನೇರವಾಗಿ ಒಪ್ಪಿಕೊಂಡಿದೆ ಇನ್ನು ಸರ್ಕಾರದ ಅಧೀನ ಸಂಸ್ಥೆಯಾದ BSNL ಉದ್ಯೋಗಿಗಳನ್ನು ದೇಶದ್ರೋಹಿಗಳು ಎಂದ ಸಂಸದ ಅನಂತ್ ಕುಮಾರ್ ಅವರು ತಮ್ಮ ಅಯೋಗ್ಯತನವನ್ನು ತೋರಿದ್ದಾರೆ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.


ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿ ಪಡೆದ ಸಾಹಿತಿಯನ್ನು ’ಬೌದ್ಧಿಕ ಜಿಹಾದಿ’ ಎಂದ ಬಿಜೆಪಿ ಶಾಸಕ: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...