Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...