Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...