Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...