Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...