Homeಕರ್ನಾಟಕಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ - ಆರೋಪ

ಎಳವಜೋಗರ ಗುಡಿಸಲಿಗೆ ಬೆಂಕಿ: ಅನಾಹುತದಿಂದ ಪಾರಾದ ಕುಟುಂಬವನ್ನು ಒಕ್ಕಲೆಬ್ಬಿಸುವ ಹುನ್ನಾರ – ಆರೋಪ

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

- Advertisement -
- Advertisement -

ತುಮಕೂರು ನಗರದ ಬನಶಂಕರಿ ಎರಡನೇ ಹಂತದಲ್ಲಿ ಹಲವು ವರ್ಷಗಳಿಂದ ವಾಸವಾಗಿರುವ ಎಳವ ಜೋಗರ ಕುಟುಂಬಗಳನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಯುತ್ತಿದೆ. ಕನಿಷ್ಠ ನಾಗರಿಕ ಸೌಲಭ್ಯಗಳೂ ಇಲ್ಲದ ಇಲ್ಲಿನ ಗುಡಿಸಲುಗಳಿಗೆ ಬೆಂಕಿ ಹಚ್ಚುವ ಪ್ರಕರಣಗಳು ನಡೆಯುತ್ತಲೇ ಇವೆ. ಕಿಡಿಗೇಡಿಗಳ ಇಂತಹ ಕ್ರಮಗಳಿಂದ ಎಳವ ಜೋಗರ ಕುಟುಂಬಗಳು ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಜೀವನ ಸಾಗಿಸುವಂತಹ ಪರಿಸ್ಥಿತಿ ಇದೆ.

ಇಸ್ಮಾಯಿಲ್ ನಗರ ಸಮೀಪವೇ ಪೊದೆಯ ನಡುವೆ 40 ಕುಟುಂಬಗಳು ವಾಸಿಸುತ್ತಿವೆ. ಎಳವ ಜೋಗರು, ರಂಗೋಲಿ ಪುಡಿ ಮಾಡಿ ಮಾರುವ ಲಂಬಾಣಿಗಳ ಕುಟುಂಬಗಳು ಇಲ್ಲಿವೆ. ಬೆಳಕಿನ ಸೌಕರ್ಯ ಇಲ್ಲ. ಕುಡಿವ ನೀರಿನ ಸೌಲಭ್ಯ ಇಲ್ಲ. ಇಂತಹ ಸಂಕಷ್ಟದಲ್ಲಿ ಬದುಕು ಕಟ್ಟಿಕೊಳ್ಳುತ್ತಿರುವ ಈ ಕುಟುಂಬಗಳ ಗುಡಿಸಲುಗಳಿಗೆ ಪದೇಪದೇ ಬೆಂಕಿ ಹಚ್ಚಿ ಅವರನ್ನು ಅಲ್ಲಿಂದ ಓಡಿಸುವ ತಂತ್ರಗಳು ನಡೆಯುತ್ತಲೇ ಬರುತ್ತಿವೆ.

ಆಗಸ್ಟ್ 11ರ ಮುಂಜಾನೆ ಸುಮಾರು 1.30 ರ ಸಮಯದಲ್ಲಿ ಗುರುಸ್ವಾಮಿ ಮತ್ತು ಗಂಗಮ್ಮ ಅವರಿಗೆ ಸೇರಿದ ಗುಡಿಸಲಿಗೆ ಬೆಂಕಿ ಹಚ್ಚಲಾಗಿದೆ. ಪರಿಣಾಮ ಗುಡಿಸಲಿನಲ್ಲಿ ಮಲಗಿದ್ದ ಎಂಟು ಮಂದಿ ನೂಲೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ತಂದೆತಾಯಿಗಳು ಸೇರಿ ಆರು ಮಂದಿ ಮಕ್ಕಳ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ದವಸ ಧಾನ್ಯಗಳು ಬೆಂಕಿಯಲ್ಲಿ ಬೂದಿಯಾಗಿವೆ. ಇದು ಅಲ್ಲಿನ ನಿವಾಸಿಗಳನ್ನು ಆತಂಕಗೊಳ್ಳುವಂತೆ ಮಾಡಿದೆ.

ಎಳವ ಜೋಗರು ಮತ್ತು ಲಂಬಾಣಿಗಳು ವಾಸಿಸುವ ಪ್ರದೇಶದ ಸುತ್ತಲೂ ಶ್ರೀಮಂತರ ಮಹಲುಗಳಿವೆ. ಹಂದಿಗಳನ್ನು ಇಲ್ಲಿಯೇ ಸಾಗುವುದರಿಂದ ಶ್ರೀಮಂತರು ಈ ಬಡಕುಟುಂಬಗಳನ್ನು ಒಕ್ಕಲೆಬ್ಬಿಸಲು ಪಿತೂರಿ ನಡೆಸುತ್ತಲೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬೆಂಕಿ ಹಚ್ಚುವುದನ್ನು ಯಾರು ಮಾಡುತ್ತಿದ್ದಾರೆ ಎಂಬ ಮಾಹಿತಿ ಇದುವರೆಗೂ ಗೊತ್ತಾಗಿಲ್ಲ. ಈ ಕುಟುಂಬಗಳು ನೀಡುವ ದೂರನ್ನು ದಾಖಲಿಸಿಕೊಳ್ಳುವ ಪೊಲೀಸರು ಮತ್ತೆ ಅದರ ಬಗ್ಗೆ ಕ್ರಮ ವಹಿಸುವ ಗೋಜಿಗೇ ಹೋಗುತ್ತಿಲ್ಲ ಎಂದು ದೂರಲಾಗಿದೆ.

ನಾನು ಗೌರಿ.ಕಾಂ ಜೊತೆ ಸ್ಲಂ ಜನಾಂದೋಲನ ಸಂಚಾಲಕ ಎ. ನರಸಿಂಹಮೂರ್ತಿ ಮಾತನಾಡಿದರು. ಬೆಂಕಿ ಹಚ್ಚುವ ಪ್ರಕರಣಗಳಿಂದ ಎಳವ ಜೋಗರು ಮತ್ತು ಲಂಬಾಣಿ ಕುಟುಂಬಗಳು ಜೀವಭಯದಿಂದ ಬದುಕು ನಡೆಸುವಂತಾಗಿದೆ. ಇಲ್ಲಿ ವಾಸವಾಗಿರುವ ಕುಟುಂಬಗಳಿಗೆ ಪುನರ್ ವಸತಿಯನ್ನು ಕಲ್ಪಿಸುವ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ತುಮಕೂರು ಹೊರವಲಯದ ಅಣ್ಣೇನಹಳ್ಳಿ ಬಳಿ ಇವರ ವಾಸಕ್ಕೆ ಜಾಗ ಗುರಿತಿಸಿದರು. ಆದರೆ ಸ್ಥಳೀಯರಿಂದ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಅಲ್ಲಿಗೆ ಕೈಬಿಡಲಾಯಿತು.

ಅಜ್ಜಗೊಂಡನಹಳ್ಳಿಯ ಘನತ್ಯಾಜ್ಯ ವಿಲೇವಾರಿ ಘಟಕದ ಸಮೀಪ ಮತ್ತೆ ಸ್ಥಳ ಗುರುತಿಸಲಾಯಿತು. ಘಟಕದ ನಿರ್ವಹಣೆಯಿಲ್ಲದೆ ದುರ್ನಾತ ಬೀರುತ್ತಿರುವ ಕಾರಣದಿಂದ ಎಳವ ಜೋಗಿ ಕುಟುಂಬಗಳು ಅಲ್ಲಿಗೆ ಹೋಗಲು ನಿರಾಕರಿಸಿದವು. ಅವರಿಗೆ ಪುನರ್ ವಸತಿ ಕಲ್ಪಿಸಲು ಯಾರೂ ಜಾಗ ನೀಡಲು ಮುಂದೆ ಬರುತ್ತಿಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. ಪಾಲಿಕೆಯೂ ಸಮರ್ಪಕ ಜಾಗ ಗುರುತಿಸಿಲ್ಲ. ಕೂಡಲೇ ಅವರಿಗೆ ಪರ್ಯಾಯ ಜಾಗ ಗುರುತಿಸಿ ಪುನರ್ ವಸತಿ ಕಲ್ಪಿಸಬೇಕು. ಇಲ್ಲದಿದ್ದರೆ ಅವರ ಗೋಳು ತಪ್ಪಿದ್ದಲ್ಲ ಎಂದು ಹೇಳಿದರು.

ಗುಡಿಸಲಿಗೆ ಬೆಂಕಿ ಬಿದ್ದು ಬಟ್ಟೆಗಳು ಮತ್ತು ದವಸ ಧಾನ್ಯಗಳನ್ನು ಕಳೆದುಕೊಂಡಿರುವ ಗುರುಸ್ವಾಮಿ ಕುಟುಂಬ ಇದೀಗ ಜೀವನ ನಿರ್ವಹಣೆಗೆ ತೊಂದರೆಪಡುತ್ತಿದೆ. ಗುಡಿಸಲಿಗೆ ಹಾಕಿದ್ದ ಟಾರ್ಪಲ್ ಕೂಡ ಅರ್ಧ ಸುಟ್ಟು ಹೋಗಿದೆ. ಹಾಗಾಗಿ ಕೋವಿಡ್-19ರ ಸಮಯದಲ್ಲಿ ಸಮಸ್ಯೆ ಎದುರಿಸುತ್ತಿರುವ ಈ ಕುಟುಂಬಗಳ ನೆರವಿಗೆ ಜಿಲ್ಲಾಡಳಿತ ಮತ್ತು ಪಾಲಿಕೆ ಬರಬೇಕಾಗಿದೆ.

ನಗರದ ನಡುವೆಯೂ ಗುಡಿಸಲುಗಳಲ್ಲಿ ಬದುಕುತ್ತಿರುವ 40 ಕ್ಕೂ ಹೆಚ್ಚು ಕುಟುಂಬಗಳು ಮಳೆಗಾಲದಲ್ಲಿ ಇಡೀ ವಾಸಸ್ಥಳ ಜಲಾವೃತವಾಗುತ್ತದೆ. ಸುತ್ತಲೂ ಪೋದೆ ಇರುವುದರಿಂದ ಹಾವು, ಚೇಳು, ಸೊಳ್ಳೆಗಳು ಸೇರಿ ವಿಷಜಂತುಗಳ ಹಾವಳಿ ಇದೆ. ಇಂತಹ ಅಮಾನವೀಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಈ ಕುಟುಂಬಗಳಿಗೆ ಮಾನವೀಯ ನೆರವಿನ ಹಸ್ತ ನೀಡಬೇಕಾಗಿದೆ. ನಾಗರಿಕರೆಂದು ಕರೆಸಿಕೊಳ್ಳುವವರು ಬಡಕುಟುಂಬಗಳ ಸಂಕಷ್ಟಕ್ಕೆ ಮನ ಮಿಡಿಯಬೇಕಾಗಿದೆ.


ಓದಿ: ವಿಶ್ವ ನಿರಾಶ್ರಿತರ ದಿನ: ನಿರಾಶ್ರಿತರ ಪಾಡು ಹೇಳುವ ಕೆಲವು ಪದ್ಯಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...