Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...