Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...