Homeಕರ್ನಾಟಕಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

- Advertisement -
- Advertisement -

ಪುಲಕೇಶಿ ನಗರ ಕಾಂಗ್ರೆಸ್ ಶಾಸಕ‌ ಅಖಂಡ ಶ್ರೀನಿವಾಸ ಮೂರ್ತಿಯವರ ತಂಗಿಯ ಮಗ ನವೀನ್‌ ಎಂಬಾತ ಪ್ರವಾದಿ ಮುಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಲು ಹಲವರು ಮುಂದಾಗಿದ್ದರು. ಅದೇ ಸಮಯದಲ್ಲಿ ತಮ್ಮ ಪ್ರವಾದಿ ಮುಹಮ್ಮದ್ ಪೈಗಂಬರರ ಬಗ್ಗೆ ಅವಹೇಳನಕಾರಿ ಕಮೆಂಟ್ ನೋಡಿ ಇನ್ನೊಂದೆಡೆ ಶಾಸಕ ಅಖಂಡ ಶ್ರೀನಿವಾಸ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕ್ಯಾಂಪೇನ್‌ಗಳು ಆರಂಭವಾಗಿತ್ತು ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಒಂದು ನಿರ್ದಿಷ್ಟ ಗುಂಪು ರಾತ್ರಿ ಸಮಯದಲ್ಲಿ ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಮುಂದೆ ಜಮಾಯಿಸಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಉದ್ರಿಕ್ತಗೊಂಡ ಗುಂಪೊಂದು ಶಾಸಕರ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿತ್ತು. ಬಳಿಕ ಪರಿಸ್ಥಿತಿ ನಿಯಂತ್ರಣ ಕೈತಪ್ಪಿತ್ತಲ್ಲದೆ, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರ ಸಾಹಸಪಟ್ಟರು.

ಇದರ ನಡುವೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವೀಡಿಯೋ ಒಂದರ ಮೂಲಕ ಪ್ರತಿಕ್ರಿಯಿಸಿ, “ಕಿಡಿಗೇಡಿಗಳ ತಪ್ಪಿಗೆ ಯಾರೂ ಗಲಾಟೆ ಮಾಡಬಾರದು, ತಪ್ಪು ಮಾಡಿದವರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ”. ಯಾವುದೇ ಕಾರಣಕ್ಕೂ ಗಲಾಟೆ ಮಾಡದಂತೆ ವಿನಂತಿಸಿದರು.

ಅಷ್ಟೊತ್ತಿಗಾಗಲೇ ಪ್ರತಿಭಟನೆಯ ಸ್ವರೂಪ ಬದಲಾಗಿತ್ತು, ಪೊಲೀಸ್ ಠಾಣೆಗಳಿಗೆ ಕಲ್ಲು ತೂರಾಟ, ಪೊಲೀಸರ ಮೇಲೆ ಕಲ್ಲು ತೂರುವ ಮೂಲಕ ಗುಂಪೊಂದು ಪರಿಸ್ಥಿತಿ ಕೈಮೀರುವಂತೆ ಮಾಡಿತು.

ಈ ಸಂದರ್ಭದಲ್ಲಿ ಶಾಸಕ ಝಮೀರ್ ಹಾಗೂ ರಿಝ್ವಾನ್ ಅರ್ಶದ್ ಅವರನ್ನು ಸ್ಥಳಕ್ಕೆ ಕರೆಸಿಕೊಂಡ ಪೊಲೀಸರು ಗಲಭೆಯಲ್ಲಿ ಪಾಲ್ಗೊಂಡವರನ್ನು ಸಮಾಧಾನ ಪಡಿಸುವ ಪ್ರಯತ್ನಕ್ಕೆ ಮುಂದಾದರೂ ಸಹ ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗಿಲ್ಲ. ಶಾಸಕ ಝಮೀರ್ ಅವರ ಕೈಗೂ ಈ ಸಂದರ್ಭದಲ್ಲಿ ಗಾಯವಾಗಿತ್ತು ಎನ್ನಲಾಗಿದೆ.

ಪೊಲೀಸರು ಗಲಭೆ ನಿತಂತ್ರಣಕ್ಕೆ ಅಶ್ರುವಾಯು ಪ್ರಯೋಗ, ಗೊಲೀಬಾರ್ ನಡೆಸಿದರು. ಈ ವೇಳೆ ಗೋಲಿಬಾರ್ ಗೆ 3 ಮಂದಿ ಗಾಯಾಳುಗಳು ಬಲಿಯಾಗಿದ್ದಾರೆ.

ಏನು ಮಾಡಬೇಕಾಗಿತ್ತು…

ಪ್ರವಾದಿ ನಿಂದನೆ ಮಾಡಿದ್ದು ಖಂಡನೀಯ. ೧೦ ಜನ ಹೋಗಿ ಪ್ರಕರಣ ದಾಖಲಿಸಬಹುದಿತ್ತು. ಆದರೆ ಇದೆ ಕೋಪದಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡಿದ್ದು ಸರಿ ಅಲ್ಲ. ಬೆಂಕಿ ಹಚ್ಚುವುದು, ಅಮಾಯಾಕರ ಆಸ್ತಿಗಳನ್ನು ನಷ್ಟ ಮಾಡುವುದು ಯಾರು ಕೂಡ ಮಾಡಬಾರದು.

ಪ್ರವಾದಿ (ಸ) ನೈಜ ಅನುಯಾಯಿಗಳು ಎಂದಿಗೂ ಬೆಂಕಿ ಹಚ್ಚುವವರಲ್ಲ ಮತ್ತು ಅದನ್ನು ಸಮರ್ಥಿಸುವವರಲ್ಲ. ತೀವ್ರವಾಗಿ ಕಲ್ಲು ತೂರಾಟ ಆದಾಗ ಅಲ್ಲೇ ಸಮೀಪದಲ್ಲಿರುವ ದೇವಸ್ಥಾನಕ್ಕೆ ಹಾನಿಯಾಗದಂತೆ ರಕ್ಷಣೆಗೆ ನಿಂತಿದ್ದು ಮುಸ್ಲಿಂ ಸಹೋದರರು.. ಇದು ನಮ್ಮ ಪ್ರವಾದಿ ಕಲಿಸಿದ ಶಿಕ್ಷಣ.

ಮಾಧ್ಯಮಗಳು ಹಸಿದಿತ್ತು, ಕೊರೋನ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾಗಿತ್ತು. ದೆಹಲಿಯ ಜಾಮಿಯತ್ ಮೇಲೆ ಎಲ್ಲರ ಕಣ್ಣಿತ್ತು. ಕೆಲದಿನಗಳು ಕಳೆದ ನಂತರ ಕೊರೋನ ಜಾತ್ಯಾತೀತ ಅಂತ ತಿಳಿದ ಮೇಲೆ ಕೆಲ ಕನ್ನಡ ಸುದ್ದಿ ವಾಹಿನಿಗಳು ವಿಷಯಗಳೇ ಇಲ್ಲದೆ ಬರಗೆಟ್ಟು ಹೋಗಿದ್ದವು. ಆದರೆ ಕೆಲ ಮುಸ್ಲಿಮ್ ಮತಿಗೇಡಿ ಅಜ್ಞಾನಿಗಳು ನಿನ್ನೆ ರಾತ್ರಿ ಅದನ್ನು ಸರಿದೂಗಿಸಿದರು.

ಒಟ್ಟಾರೆ ಈ ಘಟನೆ ನಡೆಯಬಾರದಿತ್ತು. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರವಾದಿ ನಿಂದನೆ, ಇದರ ವಿರುದ್ಧ ಒಂದೆಡೆ ಆಕೋಶದ ಮಾತುಗಳು ಕೇಳಿ ಬರುತ್ತಲೇ ಇದ್ದರೂ ಸರಕಾರಕ್ಕೆ ಈ ಗಲಭೆಯ ಮುನ್ಸೂಚನೆ ಯಾಕೆ ಸಿಕ್ಕಿಲ್ಲ? ಪೊಲೀಸರು ಎಫ್‌ಐಆರ್‌ ದಾಖಲಿಸಲು ವಿಳಂಬ ಮಾಡಿದ್ದೇಕೆ? ಗುಪ್ತಚರ ಇಲಾಖೆ ಏನು ಮಾಡ್ತಾ ಇತ್ತು? ಗಲಭೆ ಸುಮಾರು 3 ಗಂಟೆಗಳ ಕಾಲ ನಡೆಯುತ್ತಿದ್ದರೂ ಹೆಚ್ಚಿನ ಪೊಲೀಸರ ನಿಯೋಜನೆ ಯಾಕೆ ವಿಳಂಬವಾಯಿತು? ಈ ಎಲ್ಲಾ ಪ್ರಶ್ನೆಗಳು ಪ್ರಶ್ನೆಯಾಗಿಯೇ ಉಳಿದಿದೆ.

-ನಾಝಿಯಾ ಕೌಸರ್. (ಯುವ ಪತ್ರಕರ್ತರು, ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ – ಶಾಂತಿ ಕಾಪಾಡಲು ಮುಖಂಡರ ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...