Homeಕರ್ನಾಟಕಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರಿನ ಡಿ.ಜೆ. ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯನ್ನು ’ಅಕ್ಷಮ್ಯ’ ಎಂದು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಅವರು ಹೇಳಿದ್ದಾರೆ.

ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಸರ್ಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ‌ಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ, ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ.
ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ.
ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು-ಸೆಡವು ಸ್ಫೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಾಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅವರು ಹೇಳಿದ್ದಾರೆ.

“ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ” ಎಂಬ ಕುರಾನಿನ ಆಲ್ ಹಿಜ್ರ್ ಅಧ್ಯಾಯದ ವಾಕ್ಯವನ್ನು ಉಲ್ಲೇಖಿಸಿ ಜೊತೆಗೆ, ದಯವಿಲ್ಲದ ಧರ್ಮವಾವುದಯ್ಯಾ?/ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ/ದಯವೇ ಧರ್ಮದ ಮೂಲವಯ್ಯಾ/ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಬಸವಣ್ಣನ ವಚನವನ್ನು ನೆನಪಿದ್ದಾರೆ.


ಓದಿ: ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...