Homeಕರ್ನಾಟಕಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ 'ನಾವು ಭಾರತೀಯರು' ಮನವಿ

ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡಿ: ಮಾಧ್ಯಮಗಳಿಗೆ ‘ನಾವು ಭಾರತೀಯರು’ ಮನವಿ

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

- Advertisement -
- Advertisement -

ಡಿಜೆ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದ ಹಿಂಸಾಚಾರವನ್ನು ನಾವು ಖಂಡಿಸುತ್ತೇವೆ. ಮಾಧ್ಯಮಗಳು ಕೇವಲ ವಾಸ್ತವಾಂಶಗಳನ್ನು ಮಾತ್ರ ವರದಿ ಮಾಡುವಂತೆ ಮತ್ತು ಉದ್ರಿಕ್ತತೆಯನ್ನು ಇನ್ನಷ್ಟು ಹೆಚ್ಚಿಸುವ ಅಭಿಪ್ರಾಯಗಳನ್ನು ಹಂಚಿಕೊಳ್ಳಬಾರದೆಂದು ಮನವಿ ಮಾಡುತ್ತೇವೆ ಎಂದು ನಾವು ಭಾರತೀಯರು ಸಂಘಟನೆ ತಿಳಿಸಿದೆ.

ಪ್ರವಾದಿ ಮುಹಮ್ಮದರ ಮೇಲೆ ಮಾಡಿದ ಅವಹೇಳನಕಾರಿ, ಅವಮಾನಕರ ಸಾಮಾಜಿಕ ಮಾಧ್ಯಮದ ಪೋಸ್ಟನ್ನು ನಾವು ಖಂಡಿಸುತ್ತೇವೆ. ಕಾನೂನುರೀತಿ ಕ್ರಮ ಜರುಗಲಿ ಎಂದು ನಾವು ಭಾರತೀಯರು ಸಂಘಟನೆ ಹೇಳಿಕೆಯಲ್ಲಿ ಒತ್ತಾಯಿಸಿದೆ.

ಪ್ರವಾದಿ ಮುಹಮ್ಮದರ ಕುರಿತ ಅತ್ಯಂತ ಖಂಡನೀಯ ಅವಹೇಳನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟಿನ ಕಾರಣದಿಂದ ಗಲಭೆ ನಡೆಯಿತು ಎಂದು ಹೇಳಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಯಾವುದೇ ಕೃತ್ಯವು ಅಸ್ವೀಕಾರಾರ್ಹ ಮತ್ತು ಶಾಂತಿಗೆ ಹಾನಿಕಾರಕವಾಗಿದ್ದು, ಕಾನೂನು ಅನುಷ್ಟಾನ ಸಂಸ್ಥೆಗಳು ಅಂತವುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಧರ್ಮಗಳನ್ನು ಗೌರವಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನಾವೀಗ ಶಾಂತಿಯನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ. ಯಾರೂ ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದು. ಇಡೀ ಬೆಂಗಳೂರು ಕೊರೋನ ಪಿಡುಗು ಮತ್ತು ಅಯೋಜಿತ ಲಾಕ್‌ಡೌನ್ ಕಾರಣದಿಂದ ಈಗಾಗಲೇ ಕಷ್ಟಕ್ಕೆ ಗುರಿಯಾಗಿರುವಾಗ, ಈ ರೀತಿಯ ಘಟನೆಗಳು ಜನರನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತವೆ. ನಾವು ಎಲ್ಲಾ ಬೆಂಗಳೂರಿಗರಿಗೆ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡುತ್ತೇವೆ. ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ಹಿಂಸಾಚಾರವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಹೇಳಲಾಗಿದೆ.


ಇದನ್ನೂ ಓದಿ; ಹಸಿದ ಮಾಧ್ಯಮಗಳಿಗೆ ತಿಳಿಗೇಡಿಗಳು ಕೊಟ್ಟ ಅಸ್ತ್ರ: ಡಿ.ಜೆ ಹಳ್ಳಿ ಪ್ರಕರಣ ಎತ್ತುತ್ತಿರುವ ಪ್ರಶ್ನೆಗಳು


ಮೌಲಾನಾ ಮಝಾಮಿಲ್ ಸಾಬ್, ಅಮೀರ್ ಎ ಶರಿಯತ್ ಮೌಲಾನಾ ಹಜ್ರತ್ ಸಗೀರ್ ಆಹ್ಮದ್ ಸಾಬ್ ಅವರಂತಹ ಹಲವಾರು ಹಿರಿಯ ಧಾರ್ಮಿಕ ನಾಯಕರು, ಹಲವಾರು ಜನ ಸಾಮಾನ್ಯರು ಮತ್ತು ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರು ಕೂಡಾ ನಿನ್ನೆ ರಾತ್ರಿಯೇ ಶಾಂತಿಗಾಗಿ ಕರೆಗಳನ್ನು ನೀಡಿದ್ದಾರೆ. ಹಲವಾರು ಮುಸ್ಲಿಮ್ ಯುವಕರು ಇತರ ಧಾರ್ಮಿಕ ಸ್ಥಳಗಳನ್ನು ಕೂಡ ರಕ್ಷಿಸಲು ಮಾನವ ಸರಪಳಿಗಳನ್ನು ರಚಿಸಿದ್ದಾರೆ ಈ ಮಾದರಿ ನಮ್ಮದಾಗಲಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವದಂತಿಗಳು ಮತ್ತು ಪ್ರಚೋದನೆಗಳಿಗೆ ಬಲಿ ಬೀಳಬಾರದು ಎಂದು  ಜನರಿಗೆ ಮನವಿ ಮಾಡುತ್ತೇವೆ. ಮತ್ತು ನಿನ್ನೆಯ ಎಲ್ಲಾ ಘಟನೆಗಳ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಹಾಗೂ ಯಾವುದೇ ಮುಗ್ಧ ವ್ಯಕ್ತಿಯನ್ನು ಶಿಕ್ಷೆಗೆ ಗುರಿಪಡಿಸದಂತೆ ಖಾತರಿಗೊಳಿಸಬೇಕು ಎಂದು ಪೊಲೀಸರಿಗೆ ನಾವು ಮನವಿ ಮಾಡುತ್ತೇವೆ. ನಾವೆಲ್ಲರೂ ಶಾಂತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಎಲ್ಲವೂ ತಕ್ಷಣ ಸಾಮಾನ್ಯ ಸ್ಥಿತಿಗೆ ಮರಳುವಂತೆ ಮಾಡಲು ಶ್ರಮಿಸೋಣ. ನಾವೆಲ್ಲರೂ ಜೊತೆಸೇರಿ ಸಾಂಕ್ರಾಮಿಕ ಪಿಡುಗು ಮತ್ತು ಯಾವುದೇ ವಿಭಜನಕಾರಿ ಪ್ರಯತ್ನಗಳ ವಿರುದ್ಧ ಹೋರಾಡೋಣ. ಯಾವುದೇ ಹಿಂಸಾಚಾರವು ನಮ್ಮ ಸಮಾಜದ ಶಾಂತಿಯ ಹಾದಿಯಲ್ಲಿ ಅಡ್ಡನಿಲ್ಲಲು ಬಿಡದಿರೋಣ  ದಯವಿಟ್ಟು ಶಾಂತಿಗಾಗಿ ಕೈಜೋಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಡಿಜೆ ಹಳ್ಳಿ ಘಟನೆ ಅಕ್ಷಮ್ಯ; ತಪ್ಪು ಮಾಡಿದವರಿಗೆ ಶಿಕ್ಷಯಾಗಬೇಕು: ಹೆಚ್‌. ಡಿ. ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...