Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...