Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...