Homeಮುಖಪುಟಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

ಟಿವಿ ಡಿಬೇಟ್ ನಂತರ ಹೃದಯಾಘಾತದಿಂದ ಕಾಂಗ್ರೆಸ್ ವಕ್ತಾರ ಸಾವು: ಅರೆಸ್ಟ್ ಸಂಬಿತ್ ಪಾತ್ರ ಟ್ರೆಂಡಿಂಗ್

"ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ" ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

- Advertisement -
- Advertisement -

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ ತ್ಯಾಗಿ (53) ಬೆಂಗಳೂರು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿಂದಿ ವಾಹಿನಿಯೊಂದರ ಟಿವಿ ಡಿಬೇಟ್‌ನಲ್ಲಿ ಭಾಗವಹಿಸಿದ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಘಾಜಿಯಾಬಾದ್‌ನಲ್ಲಿನ ಸೆಕ್ಟರ್‌ 16ರಲ್ಲಿನ ತಮ್ಮ ನಿವಾಸದಿಂದ ಆಜ್‌ತಕ್ ವಾಹಿನಿಯ ಟಿವಿ ಚರ್ಚೆಯಲ್ಲಿ ಅವರು ಭಾಗವಹಿಸಿದ್ದರು. ಚರ್ಚೆಯ ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ. ರಾಜೀವ್‌ರವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ.

ರಾಜೀವ್ ಸಂಜೆ 5 ಗಂಟೆ ಸುಮಾರಿಗೆ ಲೈವ್‌ ಡಿಬೇಟ್‌ನಲ್ಲಿ ಭಾಗವಹಿಸಿದ್ದರು. ನಂತರ 6-6.15 ರ ಹೊತ್ತಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಡಲು ಕಷ್ಟವಾಗಿದೆ. ಆಗ ಅವರ ಕುಟುಂಬದವರನ್ನು ಅವರನ್ನು ಸ್ಥಳೀಯ ಯಶೋಧಾ ಹಾಸ್ಪಿಟಲ್‌ಗೆ ದಾಖಲು ಮಾಡಿದ್ದಾರೆ. 6.30ರ ವೇಳೆಗೆ ಅವರು ಮೃತರಾಗಿದ್ದಾರೆ ಎಂದು ವೈದ್ಯರಾದ ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ಅವರು ನಮ್ಮ ಆಸ್ಪತ್ರೆಗೆ ಬರುತ್ತಿದ್ದಾರೆ. ನಮ್ಮ ದಾಖಲೆಗಳ ಪ್ರಕಾರ ಅವರಿಗೆ ಯಾವುದೇ ಗಂಭೀರ ಸಮಸ್ಯೆಗಳಿರಲಿಲ್ಲ. ಸಣ್ಣ ಮಟ್ಟಿಗಿನ ಕೊಲೆಸ್ಟ್ರಾಲ್ ಸಮಸ್ಯೆ ಮಾತ್ರ ಇತ್ತು ಎಂದು ಡಾ.ಸುನೀಲ್ ದಾಗರ್ ತಿಳಿಸಿದ್ದಾರೆ.

ಟಿವಿ ಚರ್ಚೆಗಳಲ್ಲಿ ರಾಜೀವ್ ತ್ಯಾಗಿ ಹೆಸರುವಾಸಿಯಾಗಿದ್ದರು. ತಮ್ಮ ಹರಿತ ಮಾತುಗಳ ಮೂಲಕ ಗಮನ ಸೆಳೆದಿದ್ದರು. ಎರಡು ದಿನದ ಹಿಂದೆ ಬೆಂಗಳೂರಿನಲ್ಲಿ ಫೇಸ್‌ಬುಕ್ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಭೆಯ ಕುರಿತು ಅವರು ಚರ್ಚೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಕೂಡ ಆ ಚರ್ಚೆಯಲ್ಲಿದ್ದರು. ಸಾವಿನ ಸುದ್ದಿ ತಿಳಿದ ಕೂಡಲೇ “ನನ್ನ ಸ್ನೇಹಿತ ರಾಜೀವ್ ತ್ಯಾಗಿ ನಿಧನರಾದರು ಎಂದು ನಂಬಲು ಆಗುತ್ತಿಲ್ಲ. 5 ಗಂಟೆ ಸುಮಾರಿಗೆ ನಾವಿಬ್ಬರೂ ಟಿವಿ ಚರ್ಚೆಯಲ್ಲಿದ್ದವು. ಜೀವನ ಎಷ್ಟು ಅನಿರೀಕ್ಷಿತ. ನನ್ನ ಭಾವನೆಗಳನ್ನು ವ್ಯಕ್ತಪಡಿಸಲು ಪದಗಳಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಗುಲಾಂ ನಬಿ ಅಜಾದ್‌ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ರಾಜೀವ್ ನಿಧನಕ್ಕೆ ಸಂತಾಪ  ವ್ಯಕ್ತಪಡಿಸಿದ್ದಾರೆ. “ಒಬ್ಬ ದೃಢ ಕಾಂಗ್ರೆಸಿಗ ಮತ್ತು ನಿಜ ದೇಶಭಕ್ತ ರಾಜೀವ್ ತ್ಯಾಗಿಯವರ ಹಠಾತ್ ನಿಧನದಿಂದ ದುಃಖಿತವಾಗಿದ್ದೇವೆ. ಈ ನೋವಿನ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಇದ್ದೇವೆ” ಎಂದು ಕಾಂಗ್ರೆಸ್ ಟ್ವೀಟ್‌ ಮಾಡಿದೆ.

ಸರಳ ಮತ್ತು ಸಂಯಮವುಳ್ಳವರನ್ನು ಈ ವಿಷಕಾರಿ ಡಿಬೀಟ್‌ಗಳು ಮತ್ತು ವಿಷಕಾರಿ ವಕ್ತಾರರು ಎಷ್ಟು ಸಮಯದವರೆಗೂ ಕೊಲ್ಲುತ್ತಾರೆ? ಟಿಆರ್‌ಪಿಗಾಗಿ ನಡೆಯುವ ಈ ಡಿಬೇಟ್‌ಗಳು ಎಷ್ಟು ಕಾಲ ಮುಂದುವರೆಯುತ್ತವೆ? ಹಿಂದು ಮುಸ್ಲಿಂ ಎಂಬ ವಿಷಕಾರಿ ವಿಭಾಗವು ಎಷ್ಟು ದಿನಗಳ ಕಾಲ ಈ ದೇಶದ ಆತ್ಮವನ್ನು ತಿನ್ನುತ್ತದೆ? ಎಂದು ಕಾಂಗ್ರೆಸ್ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೇವಾಲ ಕಿಡಿಕಾರಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ ವಿ ಟ್ವೀಟ್ ಮಾಡಿ, “ಚರ್ಚೆಯ ಸಮಯದಲ್ಲಿ ರಾಜೀವ್‌ ತ್ಯಾಗಿ ಅವರನ್ನು‘ ಜೈಚಂದ್ ’ಎಂದು ಕರೆಯಲಾಯಿತು. ಅವರನ್ನು ‘ನಕಲಿ ಹಿಂದೂ’ ಎಂದು ಕರೆಯಲಾಯಿತು, ಅವರ ನಂಬಿಕೆಯನ್ನು ಪ್ರಶ್ನಿಸಲಾಯಿತು. ಆನಂತರ ಅವರು ಹೃದಯಾಘಾತದಿಂದ ಬಳಲಿದ್ದಾರೆ” ಎಂದು ಆರೋಪಿಸಿದ್ದಾರೆ.

ರಾಜೀವ್‌ ತ್ಯಾಗಿ ಅವರಿಗೆ ಹೃದಯಾಘಾತ ಆಗವು ಕೆಲವೇ ಕ್ಷಣಗಳ ಮೊದಲು ಸಂಬಿತ್ ಪಾತ್ರ ಅವರನ್ನು ನಿಂದಿಸಿದ್ದರು. ಅಲ್ಲದೇ ಮತ್ತಷ್ಟು ವಿಷ ಹರಡಲು ಮತ್ತೊಂದು ಚರ್ಚೆಗೆ ಹೋದರು.

ನನಗೆ ಮಾತನಾಡಲು ಅವಕಾಶಕೊಡಿ ಎಂಬುದು ರಾಜೀವ್ ತ್ಯಾಗಿಯವರ ಕೊನೆಯ ಮಾತಾಗಿತ್ತು ಎಂಬುದನ್ನು ನೆನೆದು ನನಗೆ ದುಃಖವಾಗುತ್ತಿದೆ. ಸಂಬಿತ್ ಪಾತ್ರ ಮತ್ತು ಆಜ್‌ತಜ್ ಅವರನ್ನು ಕೊಂದಿದೆ. ಅರೆಸ್ಟ್ ಸಂಬಿತ್ ಪಾತ್ರ ಎಂದು ಮಾಹಿತ ಹಕ್ಕು ಕಾರ್ಯಕರ್ತ ಸಾಕೇತ್ ಗೋಖುಲೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ #ArrestSambitPatra ಹ್ಯಾಷ್‌ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...