Homeಅಂತರಾಷ್ಟ್ರೀಯH-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

H-1B ವೀಸಾ: ಷರತ್ತುಗಳೊಂದಿಗೆ ನಿಯಮ ಸಡಿಲಿಸಿದ ಅಮೆರಿಕ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರ ವಿರುದ್ದ ಪ್ರತಿಭಟನೆಗಳು ನಡೆದಿತ್ತು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಬುಧವಾರ ಎಚ್-1ಬಿ (H-1B) ಕೆಲಸದ ವೀಸಾ ನಿಯಮಗಳಲ್ಲಿ ಕೆಲವನ್ನು ಸಡಿಲಗೊಳಿಸಿದೆ. ನಿಷೇಧಕ್ಕೆ ಮುಂಚಿತವಾಗಿ ಅವರು ಅದೇ ಉದ್ಯೋಗಗಳಿಗೆ ಮರಳುತ್ತಿದ್ದರೆ ವೀಸಾ ಹೊಂದಿರುವವರು ದೇಶಕ್ಕೆ ಪ್ರವೇಶಿಸಲು ಅವಕಾಶ ನೀಡುತ್ತದೆ ಎಂದು ಹೇಳಿದೆ. ಅಮೆರಿಕಾ ಸ್ಟೇಟ್ ಡಿಪಾರ್ಟ್ಮೆಂಟ್‌‌ನ ನೋಟಿಸ್ ಈ ಕ್ರಮವನ್ನು “ಈ ಪರಿಸ್ಥಿತಿಯಲ್ಲಿ ಉದ್ಯೋಗಿಗಳನ್ನು ಬದಲಿಸಲು ಉದ್ಯೋಗದಾತರಿಗೆ ಒತ್ತಾಯಿಸುವುದು ಆರ್ಥಿಕ ತೊಂದರೆಗಳಿಗೆ ಕಾರಣವಾಗಬಹುದು” ಎಂದು ಹೇಳಿ ಸಮರ್ಥಿಸಿಕೊಂಡಿದೆ.

ಅಮೆರಿಕಾದ ತ್ವರಿತ ಮತ್ತು ಮುಂದುವರಿದ ಆರ್ಥಿಕ ಚೇತರಿಕೆಗೆ ಅನುಕೂಲವಾಗುವಂತೆ ತಾಂತ್ರಿಕ ತಜ್ಞರು, ಹಿರಿಯ ಮಟ್ಟದ ವ್ಯವಸ್ಥಾಪಕರು ಮತ್ತು ಇತರ ಕಾರ್ಮಿಕರಿಗೆ ಪ್ರವೇಶವನ್ನು ಆಡಳಿತವು ಅನುಮತಿಸಿದೆ.

“ನಿರ್ಣಾಯಕ ಮೂಲಸೌಕರ್ಯ ಕ್ಷೇತ್ರಗಳಲ್ಲಿ” ಉದ್ಯೋಗದಲ್ಲಿರುವ ವೀಸಾ ಹೊಂದಿರುವವರ ಪ್ರಯಾಣಕ್ಕೂ ಇದು ಅವಕಾಶ ಮಾಡಿಕೊಟ್ಟಿದೆ. ಇದು ರಕ್ಷಣಾ ಆರೋಗ್ಯ ಮತ್ತು ಸಾರ್ವಜನಿಕ ಆರೋಗ್ಯ ಮತ್ತು ಮಾಹಿತಿಯನ್ನು ಒಳಗೊಂಡಿದೆ.


ಓದಿ: ವೀಸಾಗಳ ಸ್ಥಗಿತ : ಟ್ರಂಪ್ ನಿರಾಶೆಯನ್ನುಂಟು ಮಾಡಿದ್ದಾರೆ- ಸುಂದರ್‌ ಪಿಚೈ


ಆದರೆ, ನಿರ್ಣಾಯಕ ಮೂಲಸೌಕರ್ಯ ವಲಯದಲ್ಲಿ ಮಾತ್ರ ಉದ್ಯೋಗವು ಸಾಕಾಗುವುದಿಲ್ಲ ಎಂದು ನೋಟಿಸ್ ತಿಳಿಸಿದೆ. ಅರ್ಜಿದಾರರು ಎರಡು ಷರತ್ತುಗಳನ್ನು ಪೂರೈಸಬೇಕು ಎಂದು ಅದು ಹೇಳಿದ್ದು: ಅರ್ಜಿದಾರರು ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ಹೊಂದಿರಬೇಕು ಅಥವಾ ಅನನ್ಯ ಮತ್ತು ನಿರ್ವಹಣೆಯ ಪ್ರಮುಖವಾದ ಕಾರ್ಯಗಳನ್ನು ಪ್ರತಿಬಿಂಬಿಸುವ ಉದ್ಯೋಗ ಕರ್ತವ್ಯಗಳನ್ನು ಹೊಂದಿರಬೇಕು. ಎರಡನೆಯದಾಗಿ, ಅರ್ಜಿದಾರರ ಉದ್ದೇಶಿತ ಉದ್ಯೋಗ ಕರ್ತವ್ಯಗಳು ಮತ್ತು ವಿಶೇಷ ಅರ್ಹತೆಗಳು ಕಂಪನಿಗೆ ವ್ಯಕ್ತಿಯು ಮಹತ್ವದ ಮತ್ತು ವಿಶಿಷ್ಟ ಕೊಡುಗೆಗಳನ್ನು ಒದಗಿಸುತ್ತಾರೆ ಎಂದಿರಬೇಕು ಎಂದಿದೆ.

ಹೆಚ್ಚುವರಿಯಾಗಿ ಸಾರ್ವಜನಿಕ ಆರೋಗ್ಯ, ಆರೋಗ್ಯ ವೃತ್ತಿಪರರಾಗಿ ಕೆಲಸ ಮಾಡುವವರು, ಕೊರೊನಾ ವೈರಸ್ ಸಾಂಕ್ರಾಮಿಕದ ವೈದ್ಯಕೀಯ ಸಂಶೋಧನೆಗಳಲ್ಲಿ ಕರ್ತವ್ಯ ನಿರ್ವಹಿಸುವವರು, ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ವೈದ್ಯಕೀಯ ಸಂಶೋಧನೆಗಳನ್ನು ನಡೆಸುವ ವೀಸಾ ಹೊಂದಿರುವವರ ಅಮೆರಿಕಾ ಪ್ರಯಾಣಕ್ಕೆ ಆಡಳಿತವು ಅವಕಾಶ ಮಾಡಿಕೊಟ್ಟಿದೆ.

ಜೂನ್ 23 ರಂದು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020 ರ ಅಂತ್ಯದವರೆಗೆ ಭಾರತೀಯ ಐಟಿ ವೃತ್ತಿಪರರಿಂದ ಹೆಚ್ಚು ಬೇಡಿಕೆಯಿರುವ H-1B ವೀಸಾ ಸೇರಿದಂತೆ ಹಲವಾರು ವರ್ಗದ ವಿದೇಶಿ ಕೆಲಸದ ವೀಸಾಗಳನ್ನು ಅಮಾನತುಗೊಳಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದರು. ಟ್ರಂಪ್ ಅವರ ಈ ನಿರ್ಧಾರದಿಂದ ಕೊರೊನಾ ವೈರಸ್ ಸಾಂಕ್ರಾಮಿಕ ಮಧ್ಯೆ ಅಮೆರಿಕಾದಲ್ಲಿ ನಿರುದ್ಯೋಗ ದರದಲ್ಲಿ ತೀವ್ರ ಏರಿಕೆ ಆಗಿದೆ.

ಕಳೆದ ಐದು ವರ್ಷಗಳಲ್ಲಿ 70% ರಷ್ಟು H-1B ವೀಸಾಗಳನ್ನು ಪಡೆದಿರುವ ಭಾರತೀಯರು ಈ ಕ್ರಮದ ವಿರುದ್ದ ಪ್ರತಿಭಟನೆ ಮಾಡಿದ್ದರು. ಜುಲೈನಲ್ಲಿ, ವಲಸೆ ಕಾನೂನು ಸುಧಾರಣೆಗೆ ಒತ್ತಾಯಿಸಿ H-1B ವೀಸಾದ ಭಾರತೀಯರ ಗುಂಪು ವಾಷಿಂಗ್ಟನ್ ಡಿಸಿಯಲ್ಲಿ ಪ್ರತಿಭಟನಾ ರ್‍ಯಾಲಿ ನಡೆಸಿತ್ತು. ಇದಕ್ಕೂ ಮುನ್ನ ಏಳು ಅಪ್ರಾಪ್ತ ವಯಸ್ಕರು ಸೇರಿದಂತೆ 174 ಭಾರತೀಯರ ಗುಂಪು ಟ್ರಂಪ್ ನಿರ್ಧಾರದ ವಿರುದ್ಧ ಮೊಕದ್ದಮೆ ಹೂಡಿತ್ತು. ಅಲ್ಲದೆ ಈ ಕ್ರಮವನ್ನು ವಿರೋಧಿಸಿ ಅಮೆರಿಕದ ವ್ಯಾಪಾರಿ ಮುಖಂಡರು ಹೇಳಿಕೆ ನೀಡಿದ್ದರು.


ಓದಿ: ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...