Homeಮುಖಪುಟಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

ಪ್ರವಾಹ, ಕೊರೊನಾ ಸಂದರ್ಭದಲ್ಲಿ ಕಣ್ಮರೆ, ಗಲಭೆ ಆದಾಗ ಪ್ರತ್ಯಕ್ಷ: ಯಾರಿವರು ಗೊತ್ತೇ?

- Advertisement -
- Advertisement -

ಕಳೆದ ವರ್ಷದ ಆಗಸ್ಟ್‌ನಲ್ಲಿ ಅಪ್ಪಳಿಸಿದ ಪ್ರವಾಹದಿಂದಾಗಿ ಇಡೀ ಉತ್ತರ ಕರ್ನಾಟಕ ತತ್ತರವಾಗಿತ್ತು. ರಾಜ್ಯದ 20ಕ್ಕೂ ಹೆಚ್ಚು(ಮುಖ್ಯವಾಗಿ ಉತ್ತರ ಕರ್ನಾಟಕದ) ಜಿಲ್ಲೆಗಳು ಹಾನಿಗೊಳಗಾಗಿದ್ದವು. 61 ಜನರು ಪ್ರಾಣ ಕಳೆದುಕೊಂಡರೆ ಹಲವು ಜನರು ನಾಪತ್ತೆಯಾಗಿದ್ದರು. ಕೋಟಿಗೂ ಹೆಚ್ಚು ಜನ ಪ್ರವಾಹ ಸಂತ್ರಸ್ತರಾಗಿದ್ದರು.ಅದಕ್ಕೂ ಹಿಂದಿನ ವರ್ಷ ಕೊಡಗು ಸಂಪೂರ್ಣ ಜಲಾವೃತವಾಗಿತ್ತು. ಹಲವಾರು ಸಾವುನೋವುಗಳು ಆಸ್ತಿನಷ್ಟ ಉಂಟಾಗಿತ್ತು.

ಕಳೆದ ವರ್ಷದ ಪ್ರವಾಹ ನಷ್ಟ 50 ಸಾವಿರ ಕೋಟಿಗೂ ಅಧಿಕ ಎಂದು ಹೇಳಲಾಗುತ್ತಿದೆ. ಆದರೂ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 35,000 ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿತು. ಆರಂಭಿಕವಾಗಿ ತಾತ್ಕಾಲಿಕ 1200 ಕೋಟಿ ರೂ ಮಾತ್ರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿತು. ಅದು ಪ್ರವಾಹ ಆರಂಭವಾಗಿ ತಿಂಗಳು ಕಳೆದ ನಂತರವಷ್ಟೇ..

ಇನ್ನು ಈ ವರ್ಷ ಮತ್ತೆ 1869 ಕೋಟಿ ರೂ ಪ್ರವಾಹ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಗೃಹ ಇಲಾಖೆ ಘೋಷಿಸಿತು. ಆದರೆ ಬಿಡುಗಡೆಯಾಗಿದ್ದು ಕೇವಲ 669 ಕೋಟಿ ರೂ ಮಾತ್ರ. ಇನ್ನು 1200 ಕೋಟಿ ಬಾಕಿ ಇದೆ. ಇಂತಹ ಸಂಕಷ್ಟದ ಸಮಯದಲ್ಲಿ ಮತ್ತೆ ಈ ವರ್ಷವೂ ಕರ್ನಾಟಕದಲ್ಲಿ ನೆರೆ ಕಾಣಿಸಿಕೊಂಡಿದೆ. ಮೊನ್ನೆ ಪ್ರಧಾನಿಯೊಂದಿಗಿನ ವಿಡಿಯೋ ಕಾನ್ಫರೆನ್ಸ್‌ನಲ್ಲಿ 4000 ಕೋಟಿ ಪರಿಹಾರಕ್ಕೆ ಮೊರೆ ಇಟ್ಟಿರುವುದಾಗಿ ರಾಜ್ಯ ಸರ್ಕಾರ ಹೇಳಿಕೊಂಡಿದೆ. ಯಥಾಪ್ರಕಾರ ಕೇಂದ್ರ ಸರ್ಕಾರವಿನ್ನೂ ಹಣ ಬಿಡುಗಡೆ ಮಾಡಿಲ್ಲ.

ಇನ್ನು ಕೊರೊನಾ ಪ್ರಕರಣಗಳಲ್ಲಿ ಕರ್ನಾಟಕ ದೇಶದಲ್ಲಿಯೇ 4ನೇ ಸ್ಥಾನದಲ್ಲಿದ್ದು ಹತ್ತಿರತ್ತಿರ 2 ಲಕ್ಷ ಪ್ರಕರಣಗಳನ್ನು ದಾಖಲಿಸಿದೆ. ಈ ವರದಿ ಬರೆಯುವ ಹೊತ್ತಿಗೆ 3510 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ಬಾರಿ ಹೇರಿದ ಲಾಕ್‌ಡೌನ್‌ನಿಂದಾಗಿ ಕರ್ನಾಟಕ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ಕೇಂದ್ರದಿಂದ ಹೆಚ್ಚಿನ ಹಣ ಬಿಡುಗಡೆಯಾಗಿಲ್ಲ. ಕರ್ನಾಟಕದ ಪಾಲಿನ ಜಿಎಸ್‌ಟಿ ಹಣ ಸಹ ಬಂದಿಲ್ಲ.

ಇಷ್ಟೆಲ್ಲ ಏಕೆ ಹೇಳಬೇಕಿದೆಯೆಂದರೆ ಈ ವಿಚಾರದ ಕುರಿತು ಗಟ್ಟಿ ದನಿಯೆತ್ತಬೇಕಾಗಿದ್ದ ಕರ್ನಾಟಕದ ಪ್ರಬಲ ಸಚಿವರು, ಸಂಸದರು ಈ ವಿಚಾರವಾಗಿ ಮೌನವಾಗಿದ್ದಾರೆ. ಪ್ರಧಾನಿ ಮೋದಿಯವರನ್ನು ದಿಟ್ಟಿಸಿ ಕೇಳುವ ಧೈರ್ಯ ಇವರ್ಯಾರಿಗೂ ಇಲ್ಲ. ಆದರೆ ಸಣ್ಣಪುಟ್ಟ ಗಲಭೆಗಳಾದರೆ, ಯಾರಾದರೂ ಅನುಮಾನಾಸ್ಪದವಾಗಿ ಸಾವಿಗೀಡಾದರೆ ಇವರೆಲ್ಲ ಓಡಿ ಬರುತ್ತಾರೆ. ಸ್ಥಳಕ್ಕೆ ಧಾವಿಸುತ್ತಾರೆ. ಶಾಂತಿ ಕಾಪಾಡಲು ಮನವಿ ಮಾಡುವ ಬದಲು ಜೋರಾಗಿ ಕಿರುಚುತ್ತಾರೆ. ಹಿಂದೂಗಳು ಅಪಾಯದಲ್ಲಿದ್ದಾರೆ ಎಂದು ಬೊಬ್ಬೆಯಿಡುತ್ತಾರೆ. ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿಯುತ್ತಾರೆ. ಆ ಬೆಂಕಿಯಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ.. ಯಾರಿವರು ಬನ್ನಿ ನೋಡೋಣ.

ಶೋಭಾ ಕರಂದ್ಲಾಜೆ

ರಾಜ್ಯ ಸರ್ಕಾರದಲ್ಲಿ ಸಚಿವರಾಗಿ, ಎರಡನೇ ಬಾರಿಗೆ ಸಂಸದರಾಗಿರುವ ಇವರು ಸಂಸತ್ತಿನಲ್ಲಿ ತಮಗೆ ಸಿಕ್ಕ ಮಾತನಾಡುವ ಅವಕಾಶವನ್ನು ರಾಜ್ಯದ ಬಗ್ಗೆ ಚರ್ಚಿಸುವುದನ್ನು ಬಿಟ್ಟು ಏಕೀ ಮಿನಿಟ್ ಸರ್ ಎಂಬ ಅರ್ಧಂಬರ್ಧ ಹಿಂದಿಯಲ್ಲಿ ಐಎಂಎ ಹಗರಣದ ಆರೋಪಿ ಮನ್ಸೂರ್ ಖಾನ್‌ಗೆ ಭಯೋತ್ಪಾದಕರೊಂದಿಗೆ ಸಂಬಂಧವಿದೆ ಎಂಬ ಕಟ್ಟುಕಥೆಗಳನ್ನು ಹೇಳಿ ಅಪಹಾಸ್ಯಕ್ಕೊಳಗಾಗಿದ್ದರು. ಅವರೇ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ.

ಅವರು 2017ರಲ್ಲಿ ರಾಜ್ಯದಲ್ಲಿ 4 ವರ್ಷದಲ್ಲಿ ಕೋಮುಗಲಭೆಗಳಲ್ಲಿ ಮೃತರಾದ ಹಿಂದೂಗಳ ಪಟ್ಟಿ ತಯಾರಿಸಿದ್ದ ಅವರು ಅದರಲ್ಲಿ ಅಶೋಕ್ ಪೂಜಾರಿ ಎಂಬ ಬದುಕಿದ್ದವರ ಹೆಸರನ್ನು ಸೇರಿಸಿ ವಿವಾದಕ್ಕೊಳಗಾಗಿದ್ದರು. ಅದೇ ವರ್ಷ ಡಿಸೆಂಬರ್‌ನಲ್ಲಿ ಪರೇಶ್ ಮೇಸ್ತ ಎಂಬ ಯುವಕನ ಸಾವನ್ನು ಇಟ್ಟುಕೊಂಡು ರಾಜಕೀಯ ಮಾಡಿದ ಇವರು “ಅಜಾದ್ ಅಣ್ಣಿಗೇರಿ ಈ ಪ್ರಕರಣದಲ್ಲಿ ಪಾಲುದಾರರಾಗಿದ್ದು ಅವರಿಗೆ ಐಸಿಸ್‌ನೊಂದಿಗೆ ನಂಟಿದೆ” ಎಂದು ಆರೋಪಿಸಿದ್ದರು. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ನಂತರ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಳಪಡಿಸಿತ್ತು. ಪರೇಶ್ ಮೇಸ್ತ ಪಾಲಕರಿಗೆ ನ್ಯಾಯ ಸಿಗಲಿಲ್ಲ. ಶೋಭಾ ಕರಂದ್ಲಾಜೆ ಮಾತ್ರ ಪ್ರಕರಣದತ್ತ ಮತ್ತೆ ಸುಳಿಯಲಿಲ್ಲ.

ಸಿಎಎ 2019 ಅನ್ನು ಬೆಂಬಲಿಸಿದ್ದಕ್ಕಾಗಿ, ಕೇರಳದ ಮಲಪ್ಪುರಂನ ಕುಟ್ಟಿಪುರಂ ಪಂಚಾಯತ್‌ನ ಹಿಂದೂಗಳಿಗೆ ನೀರು ಸರಬರಾಜು ನಿರಾಕರಿಸಲಾಗಿದೆ. ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ, ಹಿಂದೂಗಳ ವಿರುದ್ಧ ಅಲ್ಲಿನ ಎಡಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದ್ದರು. ಆ ಸುದ್ದಿ ಸುಳ್ಳೆಂದು ಅವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

ಈ ರೀತಿಯಾಗಿ ಎಲ್ಲೇ ಸಾವಾದರೂ ಅದನ್ನು ರಾಜಕೀಯಗೊಳಿಸುವುದರಲ್ಲಿ ಇವರು ಎತ್ತಿದ ಕೈ. ಈಗ ಬೆಂಗಳೂರಿನ ಫೇಸ್‌ಬುಕ್‌ ಪೋಸ್ಟ್‌ ವಿಚಾರಕ್ಕೆ ಗಲಭೆಯಾದ ಮಾರನೇಯ ದಿನವೇ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ನಿಂತು ‘ಹಿಂದೂಗಳನ್ನು ಟಾರ್ಗೆಟ್‌ ಮಾಡಿ ದಾಳಿ ಮಾಡಲಾಗಿದೆ. ಪಿಎಫ್‌ಐ, ಎಸ್‌ಡಿಪಿಐನವರು ಇದಕ್ಕೆ ಕಾರಣ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು’ ಆಗ್ರಹಿಸಿದ್ದಾರೆ. ವಿಶೇಷವೆಂದರೆ ಗಲಭೆಗೆ ಕಾರಣವಾದ ಪ್ರವಾದಿ ನಿಂದನೆ ಪೋಸ್ಟ್, ಅದನ್ನು ಮಾಡಿದವರನ್ನು ಅವರು ಅಪ್ಪಿ ತಪ್ಪಿಯೂ ವಿರೋಧಿಸಿಲ್ಲ!

ಚಿಕ್ಕಮಗಳೂರಿನ ಅಡಿಕೆ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅಡಿಕೆಯಲ್ಲಿ ಕ್ಯಾನ್ಸರ್‌ಕಾರಕ ವಿಷಕಾರಿ ಅಂಶವಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವು ಅಫಿಡವಿಟ್‌ ಅನ್ನು ಹಿಂಪಡೆಯಬೇಕು ಮತ್ತು ಅಡಿಕೆಗೆ ಸ್ಥಿರ ಬೆಲೆ ಒದಗಿಸಬೇಕೆಂದು ಅಡಿಕೆ ಬೆಳೆಗಾರರು ಹಲವು ವರ್ಷಗಳಿಂದ ಕೇಳುತ್ತಿದ್ದಾರೆ. ಶೋಭಾ ಕರಂದ್ಲಾಚೆಯವರು ಈ ಕುರಿತು ಕೇಂದ್ರ ಆರೋಗ್ಯ ಮಂತ್ರಿಗಳಿಗೆ ಒಂದು ಮನವಿ ಕೊಟ್ಟಿದ್ದು ಬಿಟ್ಟರೆ ಯಾವುದೇ ಪ್ರಾಮಾಣಿಕ ಪ್ರಯತ್ನ ನಡೆಸಿಲ್ಲ. ಈ ಸದ್ಯ ಭಾರೀ ಮಳೆಯಿಂದಾಗಿ ತಮ್ಮ ಕ್ಷೇತ್ರದ ಕೊಪ್ಪ, ಶೃಂಗೇರಿ, ಕಳಸ ಭಾಗದ ಗ್ರಾಮಸ್ಥರು ಸಂಕಷ್ಟದಲ್ಲಿದ್ದರು ಅತ್ತ ಗಮನಹರಿಸದ ಅವರು ಸೀದಾ ಬೆಂಗಳೂರಿನ ಕೆ.ಜಿ ಹಳ್ಳಿಗೆ ಭೇಟಿ ನೀಡಿದ್ದಾರೆ. ಹಿಂದೂ ದೇವಾಲಯದ ಮೇಲೆ ಎಸ್‌ಡಿಪಿಐ ಬಾವುಟ ಹಾಕಿದ್ದಾರೆ ಎಂಬುದರ ವಿರುದ್ಧ ಹೋರಾಡುತ್ತಿದ್ದಾರೆ!

ಅನಂತ್ ಕುಮಾರ್ ಹೆಗಡೆ

ಹಿಂದೂ ಹುಡುಗಿ ಮುಟ್ಟಿದವರ ಕೈ ಇರಬಾರದು‘. ಈ ಪ್ರಚೋದನಾಕಾರಿ ಹೇಳಿಕೆ ಮಾಜಿ ಸಚಿವ, ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಯವರದು. ಬ್ರೀಟಿಷರು ಉಪವಾಸಕ್ಕೆ ಹೆದರಿ ಓಡಿಹೋಗಲಿಲ್ಲ, ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂಬುದು ಇವರ ಮತ್ತೊಂದು ಅಣಿಮುತ್ತು. ನಾವು ಬಂದಿರುವುದು ಸಂವಿಧಾನ ಬದಲಿಸಲ್ಲಿಕ್ಕೆ ಎಂಬ ದೌಲತ್ತು ಬೇರೆ. ಕೇಂದ್ರ ಕೌಶಲ ಅಭಿವೃದ್ದಿ ಸಚಿವರಾದರೂ ನಯಾ ಪೈಸೆ ಕೆಲಸ ಮಾಡದ ಇವರು ಯುವಜನರಿಗೆ ಉದ್ಯೋಗ ಸಿಗದಿರುವುದಕ್ಕೆ ಕೌಶಲ ಇರದಿರುವುದೇ ಕಾರಣ ಎಂದು ಹೇಳಿ ಟೀಕೆಕ್ಕೊಳಗಾಗಿದ್ದರು.

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಇವರು ರಾಜ್ಯದ ಅಭಿವೃದ್ದಿಯ ಪರವಾಗಿ ಮಾತನಾಡಿದ್ದು ಕಡಿಮೆ. ಇವರ ದ್ವೇಷ ಭಾಷಣ, ಕೋಮು ಪ್ರಚೋದಿತ ಹೇಳಿಕೆಗಳಿಂದಾಗಿ ಟ್ವಿಟ್ಟರ್‌ ಖಾತೆಯನ್ನು ಅಮಾನತ್ತು ಮಾಡಿತ್ತು.

ನಳಿನ್ ಕುಮಾರ್ ಕಟೀಲ್;

ಮಂಗಳೂರಿನ ಸಂಸದರು, ಹಾಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಆದ ನಳಿನ್ ಕುಮಾರ್ ಕಟೀಲ್‌ರವರು ನರೇಂದ್ರ ಮೋದಿ ಅಧಿಕಾರಕ್ಕೆ ಬಂದರೆ 1 ಡಾಲರ್ ಮೌಲ್ಯ 15ರೂ ಆಗುತ್ತದೆ ಎಂದಿದ್ದರು. ಆದರೆ ನರೇಂದ್ರ ಮೋದಿಯವರು 2ನೇ ಬಾರಿ ಅಧಿಕಾರಕ್ಕೆ ಬಂದರೂ ಸಹ 1 ಡಾಲರ್ ಮೌಲ್ಯ 74ರೂ ಆಗಿದೆ. ಪಂಪ್‌ವೇಲ್‌ ಮೇಲ್ಸೇತುವೆ ಕಟ್ಟಲು ಹಲವು ಬಾರಿ ಗಡುವುಗಳನ್ನು ವಿಧಿಸಿದ್ದ ಅವರು ಕೊನೆಗೂ ಹತ್ತು ವರ್ಷದ ನಂತರ ಪೂರ್ಣಗೊಳಿಸಿದ್ದರು.

ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುವ ಮೂಲಕ…..ನಮ್ಮ ಹೆಮ್ಮೆ ನಮ್ಮ ಎಂಪಿ ????

Posted by Satya_Meva_Jayate on Tuesday, March 26, 2019

ಆದರೆ ಬಿಜೆಪಿ ಕಾರ್ಯಕರ್ತ ಕಾರ್ತಿಕ್‌ ರಾಜ್ ಎಂಬ ಹುಡುಗನ ಕೊಲೆ ವಿಚಾರವೊಂದರಲ್ಲಿ ಇವರು ಆರೋಪಿಗಳನ್ನು ಹತ್ತು ದಿನದಲ್ಲಿ ಬಂಧಿಸದಿದ್ದರೆ ಇಡೀ ಮಂಗಳೂರಿಗೆ ಬೆಂಕಿ ಹಚ್ಚುತ್ತೇವೆ ಎಂದು ಪ್ರಚೋದನೆ ನೀಡಿದ್ದರು. ವಿಡಿಯೋ ವೈರಲ್ ಆಗಿತ್ತು. ನಂತರ ತನಿಖೆಯಿಂದ ತಿಳಿದ್ದಿದ್ದೇನೆಂದರೆ ಕೊಲೆ ಆರೋಪಿ ಕಾರ್ತಿಕ್ ರಾಜ್‌ನ ಸ್ವತಃ ಸಹೋದರಿಯಾಗದ್ದಳು.

ಪ್ರತಾಪ್ ಸಿಂಹ:

ಮೈಸೂರು-ಕೊಡಗು ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿರು ಪ್ರತಾಪ್‌ ಸಿಂಹರವರು ಪ್ರವಾಹ ಪರಿಹಾರವನ್ನು ಯಾರೂ ತಮ್ಮ ಕಿಸೆಯಿಂದ ಕೊಡಲಾಗುವುದಿಲ್ಲ ಎಂದಿದ್ದರು. ಅಷ್ಟು ಮಾತ್ರವಲ್ಲದೇ ಪ್ರವಾಹ ಪರಿಹಾರ ಕೇಳುವುದೇ ತಪ್ಪು ಎನ್ನುವ ಅಭಿಪ್ರಾಯ ಇರುವ ಪ್ರತಾಪ್ ಸಿಂಹ ಹನುಮಾ ಜಯಂತಿ ಮಾಡಿಯೇ ತೀರುತ್ತೇವೆ ಎಂದು ಕರ್ಫ್ಯೂ ಉಲ್ಲಂಘಿಸಿದ್ದರು.

ಚಿಕ್ಕಮಗೂರಿನ ಬಾಬಬುಡನ್ ಗಿರಿ ವಿಚಾರವಾಗಿ ಅದನ್ನು ದತ್ತಪೀಠ ಮಾಡೆಬೇಕೆನ್ನುತ ಅಧಿಕಾರಕ್ಕೆ ಸಿ.ಟಿ ರವರು ಅಭಿವೃದ್ದಿ ವಿಷಯ ಮಾತನಾಡಿದ್ದು ಕಡಿಮೆ. ಇದಲ್ಲದೇ ಬಿಜೆಪಿಯ ಕೆ.ಎಸ್ ಈಶ್ವರಪ್ಪ, ಬಸನಗೌಡ ಪಾಟೀಲ್ ಯತ್ನಾಳ್, ತೇಜಸ್ವಿ ಸೂರ್ಯ ಸೇರಿದಂತೆ ಇತರರು ಅಭಿವೃದ್ದಿ ಕುರಿತ ಮಾತುಗಳಿಗಿಂತ ಕೋಮು ಪ್ರಚೋದಿತ ಹೇಳಿಕೆ ನೀಡುವುದರಲ್ಲೇ ನಿಸ್ಸೀಮರಾಗಿದ್ದಾರೆ.


ಇದನ್ನೂ ಓದಿ: ಗಲಭೆಕೋರರು ಹಚ್ಚಿದ ಬೆಂಕಿ ಮತ್ತು ಮಾಧ್ಯಮಗಳು ಹಚ್ಚುತ್ತಿರುವ ಬೆಂಕಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...