Homeಕರ್ನಾಟಕನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಎಸ್‌ಡಿಪಿಐನವರ ಮೇಲೆ ಆರೋಪ ಮಾಡುವ ಭರದಲ್ಲಿ ವಿಎಚ್‌ಪಿ ಮತ್ತು ಬಿಜೆಪಿಯ ನಡುವಿನ ’ಒಳ ಒಪ್ಪಂದ’ದ ವಿಡಿಯೋವನ್ನು ಶರಣ್ ಪಂಪ್‌ವೆಲ್‌ ಟ್ವೀಟ್‌ ಮಾಡಿಬಿಟ್ಟಿದ್ದರು

- Advertisement -
- Advertisement -

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿದ್ದು, ಪ್ರಸ್ತುತ ವಿಡಿಯೊವನ್ನು ತನ್ನ ಟ್ವಿಟ್ಟರ್‌ನಿಂದ ಶರಣ್ ಪಂಪ್ವೆಲ್ ಡಿಲೀಟ್ ಮಾಡಿದ್ದಾರೆ.

ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಅದರ ಬಗ್ಗೆ ತನ್ನ ಟ್ವಿಟ್ಟರಿನಲ್ಲಿ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಉಲ್ಲೇಖಿಸಿ “ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮತ್ತು SDPI ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಈ ಘಟನೆಯ ಹಿಂದೆ ರಾಷ್ಟ್ರವಿದ್ರೋಹಿ ಸಂಘಟನೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ, ಭಯೋದ್ಪಾದಕರ ಕೈವಾಡವಿರುದರಿಂದ ಈ ಘಟನೆಯನ್ನು ರಾಷ್ಟ್ರೀಯ ತನಿಖಾ ದಳದ (NIA ) ಮುಖಾಂತರ ತನಿಖೆಗೆ ನಡೆಸಲು ಮಾನ್ಯ ಗೃಹಸಚಿವರಿಗೆ ಆಗ್ರಹಿಸಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಟ್ವೀಟ್‌ನ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಗಮನಿಸಿ ನಾನುಗೌರಿ ತಂಡ “ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!” ಎಂಬ ಶಿರ್ಷಿಕೆಯ ವರದಿಯನ್ನು ಮಾಡಿತ್ತು. ವರದಿ ವೈರಲಾಗುತ್ತಿದ್ದಂತೆ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿರುವ ತನ್ನ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಅಲ್ಲದೆ ಅಲ್ಲಿ ಬೇರೆಯೆ ಹೊಸ ಟ್ವೀಟ್ ಹಾಕಿದ್ದಾರೆ.

ಹೊಸ ಟ್ವೀಟ್‌ನಲ್ಲಿ ಶರಣ್ ಪಂಪ್‌ವೆಲ್, “ಮೂರೂ ದಿವಸಗಳ ಹಿಂದೆ ದೇಶದ ಗೃಹ ಇಲಾಖೆಯು ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ISI ಸಂಚು ರೂಪಿಸುತ್ತದೆ ಎಂದು ವರದಿ ನೀಡಿತ್ತು. ಹಾಗಾಗಿ ಘಟನೆಯ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ISI ಯ ಕೈವಾಡವಿದೆ ಎಂದು ಸಂಶಯ ವ್ಯಕ್ತವಾಗಿರುತ್ತದೆ, #ಡಿಜೆಹಳ್ಳಿಜಿಹಾದಿಗಳಅಟ್ಟಹಾಸ” ಎಂದು ಟ್ವೀಟ್ ಮಾಡಿದ್ದಾರೆ.

ಡಿಲೀಟ್ ಮಾಡಿರುವ ವಿಡಿಯೋದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಹೇಳಿದ್ದಾರೆ. ವಿಡಿಯೋವನ್ನು ಕೆಳಗೆ ನೋಡಬಹುದಾಗಿದೆ.

ಒಂದು ಕಡೆ ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿತೆಂದು ವಿರುದ್ಧ ಟೀಕಿಸುವ ಬಿಜೆಪಿ ಸರ್ಕಾರ ಮತ್ತು ಅದರ ಸದಸ್ಯರು ಈಗ ಬಲಪಂಥೀಯ ಕಾರ್ಯಕರ್ತರು ಭಾಗಿಯಾದ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಅದೇ ಪಕ್ಷಕ್ಕೆ ಸೇರಿದ ಗೃಹ ಸಚಿವರೇ ಹೇಳುತ್ತಿದ್ದಾರೆ. ಹಾಗಾಗಿ ಈ ವಿಡಿಯೋಗೆ ವಿಶೇಷ ಮಹತ್ವ ಬಂದಿದೆ.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಯ ಮೇಲೆ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರುಗಳು ಮತ್ತು ಇತರರು ಇದೀಗ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಶರಣ್‌  ಪಂಪ್‌ವೆಲ್‌ ವಿರುದ್ಧದ ಕೇಸುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಸ್ವತಃ ಗೃಹ ಸಚಿವರು ಹೇಳಿರುವುದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕು.


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...