Homeಕರ್ನಾಟಕನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ನಾನುಗೌರಿ ಬಯಲಿಗೆಳೆದ ಗೃಹಸಚಿವರ ವಿವಾದಾತ್ಮಕ ವೀಡಿಯೊ ಟ್ವೀಟ್‌ ಡಿಲಿಟ್‌ ಮಾಡಿದ ವಿಎಚ್‌ಪಿ ಮುಖಂಡ

ಎಸ್‌ಡಿಪಿಐನವರ ಮೇಲೆ ಆರೋಪ ಮಾಡುವ ಭರದಲ್ಲಿ ವಿಎಚ್‌ಪಿ ಮತ್ತು ಬಿಜೆಪಿಯ ನಡುವಿನ ’ಒಳ ಒಪ್ಪಂದ’ದ ವಿಡಿಯೋವನ್ನು ಶರಣ್ ಪಂಪ್‌ವೆಲ್‌ ಟ್ವೀಟ್‌ ಮಾಡಿಬಿಟ್ಟಿದ್ದರು

- Advertisement -
- Advertisement -

‘ನಿಮ್ಮ ಮೇಲೆ ಯಾವುದೇ ಕೇಸಿದ್ದರೂ, ಎಲ್ಲಾ ತೆಗೆದು ಹಾಕುತ್ತೇವೆʼ ಎಂದು ಸ್ವತಃ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿರುವ ವಿವಾದಾತ್ಮಕ ವಿಡಿಯೋವೊಂದನ್ನು ಅಕಸ್ಮಾತಾಗಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದನ್ನು ನಾನುಗೌರಿ.ಕಾಮ್ ಬಯಲಿಗೆಳೆದಿದ್ದು, ಪ್ರಸ್ತುತ ವಿಡಿಯೊವನ್ನು ತನ್ನ ಟ್ವಿಟ್ಟರ್‌ನಿಂದ ಶರಣ್ ಪಂಪ್ವೆಲ್ ಡಿಲೀಟ್ ಮಾಡಿದ್ದಾರೆ.

ಪ್ರವಾಹ ಪರಿಸ್ಥಿತಿ ಬಗ್ಗೆ ಪರಿಶೀಲಿಸಲು ಗೃಹಸಚಿವ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಅದರ ಬಗ್ಗೆ ತನ್ನ ಟ್ವಿಟ್ಟರಿನಲ್ಲಿ ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆಯನ್ನು ಉಲ್ಲೇಖಿಸಿ “ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮತ್ತು SDPI ಸಂಘಟನೆಯನ್ನು ನಿಷೇಧಿಸಬೇಕು ಮತ್ತು ಈ ಘಟನೆಯ ಹಿಂದೆ ರಾಷ್ಟ್ರವಿದ್ರೋಹಿ ಸಂಘಟನೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ, ಭಯೋದ್ಪಾದಕರ ಕೈವಾಡವಿರುದರಿಂದ ಈ ಘಟನೆಯನ್ನು ರಾಷ್ಟ್ರೀಯ ತನಿಖಾ ದಳದ (NIA ) ಮುಖಾಂತರ ತನಿಖೆಗೆ ನಡೆಸಲು ಮಾನ್ಯ ಗೃಹಸಚಿವರಿಗೆ ಆಗ್ರಹಿಸಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಟ್ವೀಟ್‌ನ ಆರ್ಕೈವ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ.

ಇದನ್ನು ಗಮನಿಸಿ ನಾನುಗೌರಿ ತಂಡ “ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!” ಎಂಬ ಶಿರ್ಷಿಕೆಯ ವರದಿಯನ್ನು ಮಾಡಿತ್ತು. ವರದಿ ವೈರಲಾಗುತ್ತಿದ್ದಂತೆ ಶರಣ್ ಪಂಪ್‌ವೆಲ್ ಟ್ವಿಟ್ಟರ್‌ನಲ್ಲಿರುವ ತನ್ನ ಟ್ವೀಟ್ ಡಿಲೀಟ್ ಮಾಡಿದ್ದಾರೆ. ಅಲ್ಲದೆ ಅಲ್ಲಿ ಬೇರೆಯೆ ಹೊಸ ಟ್ವೀಟ್ ಹಾಕಿದ್ದಾರೆ.

ಹೊಸ ಟ್ವೀಟ್‌ನಲ್ಲಿ ಶರಣ್ ಪಂಪ್‌ವೆಲ್, “ಮೂರೂ ದಿವಸಗಳ ಹಿಂದೆ ದೇಶದ ಗೃಹ ಇಲಾಖೆಯು ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ISI ಸಂಚು ರೂಪಿಸುತ್ತದೆ ಎಂದು ವರದಿ ನೀಡಿತ್ತು. ಹಾಗಾಗಿ ಘಟನೆಯ ಹಿಂದೆ ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ISI ಯ ಕೈವಾಡವಿದೆ ಎಂದು ಸಂಶಯ ವ್ಯಕ್ತವಾಗಿರುತ್ತದೆ, #ಡಿಜೆಹಳ್ಳಿಜಿಹಾದಿಗಳಅಟ್ಟಹಾಸ” ಎಂದು ಟ್ವೀಟ್ ಮಾಡಿದ್ದಾರೆ.

ಡಿಲೀಟ್ ಮಾಡಿರುವ ವಿಡಿಯೋದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ‘ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ’ ಎಂದು ಹೇಳಿದ್ದಾರೆ. ವಿಡಿಯೋವನ್ನು ಕೆಳಗೆ ನೋಡಬಹುದಾಗಿದೆ.

ಒಂದು ಕಡೆ ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಸರ್ಕಾರ ಕೈಬಿಟ್ಟಿತೆಂದು ವಿರುದ್ಧ ಟೀಕಿಸುವ ಬಿಜೆಪಿ ಸರ್ಕಾರ ಮತ್ತು ಅದರ ಸದಸ್ಯರು ಈಗ ಬಲಪಂಥೀಯ ಕಾರ್ಯಕರ್ತರು ಭಾಗಿಯಾದ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಅದೇ ಪಕ್ಷಕ್ಕೆ ಸೇರಿದ ಗೃಹ ಸಚಿವರೇ ಹೇಳುತ್ತಿದ್ದಾರೆ. ಹಾಗಾಗಿ ಈ ವಿಡಿಯೋಗೆ ವಿಶೇಷ ಮಹತ್ವ ಬಂದಿದೆ.

ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಯ ಮೇಲೆ ಆರೋಪ ಮಾಡುತ್ತಿರುವ ಬಿಜೆಪಿ ನಾಯಕರುಗಳು ಮತ್ತು ಇತರರು ಇದೀಗ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಶರಣ್‌  ಪಂಪ್‌ವೆಲ್‌ ವಿರುದ್ಧದ ಕೇಸುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಸ್ವತಃ ಗೃಹ ಸಚಿವರು ಹೇಳಿರುವುದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕು.


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...